ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ ನೂತನ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿ, ಮಾಜಿ ಸಿಎಂ ಯಡಿಯೂರಪ್ಪ ರೈತ ನಾಯಕರು, ಅವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಇದೆಲ್ಲಾ ರಾಜಕೀಯ ಪಿತೂರಿ ಅಷ್ಟೇ. ಈ ವಯಸ್ಸಿನಲ್ಲಿ ಇಂಥಹದನ್ನೆಲ್ಲಾ ಮಾಡಲು ಸಾಧ್ಯನಾ..? ಪಕ್ಷಕ್ಕೆ ಹಾಗೂ ಅವರಿಗೆ ಮುಜುಗರ ಮಾಡಿ, ಅದರ ರಾಜಕೀಯ ಲಾಭವನ್ನು ತೆಗೆದುಕೊಳ್ಳುವ ದುರುದ್ದೇಶ ಕಾಂಗ್ರೆಸ್ ಗೆ ಇದೆ. ನಮಗೆ ನೂರಕ್ಕೆ ನೂರು ನಮ್ಮ ನಾಯಕರ ಮೇಲೆ ನಂಬಿಕೆಯಿದೆ. ಅವರು ಇಂತಹ ಕೃತ್ಯ ಎಸಗಲು ಅಸಾಧ್ಯ ಎಂದು ಹೇಳಿದ್ದಾರೆ.
*ಯಡಿಯೂರಪ್ಪ ಬಂಧನ ಮಾಡುವ ವಿಚಾರ*
ಯಾವುದೇ ಕಾರಣ ಇಲ್ಲದೆ ನಮ್ಮ ನಾಯಕರನ್ನು ಅರೆಸ್ಟ್ ಮಾಡಿದರೆ ಹೋರಾಟ ನಡೆಸುತ್ತೇವೆ. ಕಾನೂನು ಬಾಹಿರವಾಗಿ ಏನು ಮಾಡಲು ಸಾಧ್ಯವಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನಾದರೂ ಮಾಡಬಹುದು. ನಮ್ಮ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಸದೃಢವಾಗಿದ್ದೇವೆ. ಮೊನ್ನೆ ತಾನೆ ಎಷ್ಟು ಸದೃಡವಾಗಿದ್ದೇವೆ ಎಂದು ತೋರಿಸಿದ್ದೇವೆ. ನಾವು ಬೀದಿಗೆ ಇಳಿಬೇಕು ಎಂದರೆ ಇಳಿಯುತ್ತೇವೆ ಎಂದು ಎಚ್ಚರಿಸಿದ್ದಾರೆ.
ನಟ ದರ್ಶನ್ ಬಂಧನ ವಿಚಾರ
ಯಾರೇ ತಪ್ಪಿತಸ್ಥರು ಆಗಿದ್ದರೂ ಅವರ ಮೇಲೆ ಕ್ರಮ ಆಗಬೇಕು. ಕಾನೂನಿಗಿಂತ ದೊಡ್ಡವರು ಯಾರು ಇರೋದಿಲ್ಲ. ಇನ್ನೊಬ್ಬರನ್ನ ಕೊಲೆ ಮಾಡೋದಕ್ಕೆ ಭಗವಂತ ಶಕ್ತಿ ಕೊಟ್ಟಿಲ್ಲ. ಕೊಲೆ ಎನ್ನುವುದು ಅಮಾನುಷವಾದದ್ದು. ಯಾರು ಕೂಡ ಕೊಲೆ ಮಾಡುವ ಆಲೋಚನೆ ಮಾಡಬಾರದು ಎಂದು ಹೇಳಿದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…