ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ ನೂತನ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿ, ಮಾಜಿ ಸಿಎಂ ಯಡಿಯೂರಪ್ಪ ರೈತ ನಾಯಕರು, ಅವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಇದೆಲ್ಲಾ ರಾಜಕೀಯ ಪಿತೂರಿ ಅಷ್ಟೇ. ಈ ವಯಸ್ಸಿನಲ್ಲಿ ಇಂಥಹದನ್ನೆಲ್ಲಾ ಮಾಡಲು ಸಾಧ್ಯನಾ..? ಪಕ್ಷಕ್ಕೆ ಹಾಗೂ ಅವರಿಗೆ ಮುಜುಗರ ಮಾಡಿ, ಅದರ ರಾಜಕೀಯ ಲಾಭವನ್ನು ತೆಗೆದುಕೊಳ್ಳುವ ದುರುದ್ದೇಶ ಕಾಂಗ್ರೆಸ್ ಗೆ ಇದೆ. ನಮಗೆ ನೂರಕ್ಕೆ ನೂರು ನಮ್ಮ ನಾಯಕರ ಮೇಲೆ ನಂಬಿಕೆಯಿದೆ. ಅವರು ಇಂತಹ ಕೃತ್ಯ ಎಸಗಲು ಅಸಾಧ್ಯ ಎಂದು ಹೇಳಿದ್ದಾರೆ.
*ಯಡಿಯೂರಪ್ಪ ಬಂಧನ ಮಾಡುವ ವಿಚಾರ*
ಯಾವುದೇ ಕಾರಣ ಇಲ್ಲದೆ ನಮ್ಮ ನಾಯಕರನ್ನು ಅರೆಸ್ಟ್ ಮಾಡಿದರೆ ಹೋರಾಟ ನಡೆಸುತ್ತೇವೆ. ಕಾನೂನು ಬಾಹಿರವಾಗಿ ಏನು ಮಾಡಲು ಸಾಧ್ಯವಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನಾದರೂ ಮಾಡಬಹುದು. ನಮ್ಮ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಸದೃಢವಾಗಿದ್ದೇವೆ. ಮೊನ್ನೆ ತಾನೆ ಎಷ್ಟು ಸದೃಡವಾಗಿದ್ದೇವೆ ಎಂದು ತೋರಿಸಿದ್ದೇವೆ. ನಾವು ಬೀದಿಗೆ ಇಳಿಬೇಕು ಎಂದರೆ ಇಳಿಯುತ್ತೇವೆ ಎಂದು ಎಚ್ಚರಿಸಿದ್ದಾರೆ.
ನಟ ದರ್ಶನ್ ಬಂಧನ ವಿಚಾರ
ಯಾರೇ ತಪ್ಪಿತಸ್ಥರು ಆಗಿದ್ದರೂ ಅವರ ಮೇಲೆ ಕ್ರಮ ಆಗಬೇಕು. ಕಾನೂನಿಗಿಂತ ದೊಡ್ಡವರು ಯಾರು ಇರೋದಿಲ್ಲ. ಇನ್ನೊಬ್ಬರನ್ನ ಕೊಲೆ ಮಾಡೋದಕ್ಕೆ ಭಗವಂತ ಶಕ್ತಿ ಕೊಟ್ಟಿಲ್ಲ. ಕೊಲೆ ಎನ್ನುವುದು ಅಮಾನುಷವಾದದ್ದು. ಯಾರು ಕೂಡ ಕೊಲೆ ಮಾಡುವ ಆಲೋಚನೆ ಮಾಡಬಾರದು ಎಂದು ಹೇಳಿದರು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…