‘ಮಾಜಿ‌ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ವಿಚಾರ- ಈ ವಯಸ್ಸಿನಲ್ಲಿ ಇಂತಹ ಕೃತ್ಯ ಎಸಗಲು ಸಾಧ್ಯನಾ..?- ನಟ ದರ್ಶನ್ ಬಂಧನ ವಿಚಾರ- ಯಾರೇ ತಪ್ಪಿತಸ್ಥರು ಆಗಿದ್ದರೂ ಅವರ ಮೇಲೆ ಕ್ರಮ ಆಗಬೇಕು’-ನೂತನ ಸಂಸದ ಡಾ.ಕೆ.ಸುಧಾಕರ್

ಮಾಜಿ‌ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ ನೂತನ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿ, ಮಾಜಿ‌ ಸಿಎಂ ಯಡಿಯೂರಪ್ಪ ರೈತ ನಾಯಕರು, ಅವರ ಮೇಲೆ‌ ಇಲ್ಲ ಸಲ್ಲದ ಆರೋಪಗಳನ್ನು ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ. ಇದೆಲ್ಲಾ ರಾಜಕೀಯ ಪಿತೂರಿ ಅಷ್ಟೇ. ಈ ವಯಸ್ಸಿನಲ್ಲಿ ಇಂಥಹದನ್ನೆಲ್ಲಾ ಮಾಡಲು ಸಾಧ್ಯನಾ..? ಪಕ್ಷಕ್ಕೆ ಹಾಗೂ ಅವರಿಗೆ ಮುಜುಗರ ಮಾಡಿ, ಅದರ ರಾಜಕೀಯ ಲಾಭವನ್ನು ತೆಗೆದುಕೊಳ್ಳುವ ದುರುದ್ದೇಶ ಕಾಂಗ್ರೆಸ್ ಗೆ ಇದೆ. ನಮಗೆ ನೂರಕ್ಕೆ ನೂರು ನಮ್ಮ ನಾಯಕರ ಮೇಲೆ ನಂಬಿಕೆಯಿದೆ. ಅವರು ಇಂತಹ ಕೃತ್ಯ ಎಸಗಲು ಅಸಾಧ್ಯ ಎಂದು ಹೇಳಿದ್ದಾರೆ.

*ಯಡಿಯೂರಪ್ಪ ಬಂಧನ ಮಾಡುವ ವಿಚಾರ*

ಯಾವುದೇ ಕಾರಣ ಇಲ್ಲದೆ ನಮ್ಮ ನಾಯಕರನ್ನು ಅರೆಸ್ಟ್ ಮಾಡಿದರೆ ಹೋರಾಟ ನಡೆಸುತ್ತೇವೆ. ಕಾನೂನು ಬಾಹಿರವಾಗಿ ಏನು ಮಾಡಲು ಸಾಧ್ಯವಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನಾದರೂ ಮಾಡಬಹುದು. ನಮ್ಮ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಸದೃಢವಾಗಿದ್ದೇವೆ. ಮೊನ್ನೆ ತಾನೆ ಎಷ್ಟು ಸದೃಡವಾಗಿದ್ದೇವೆ ಎಂದು ತೋರಿಸಿದ್ದೇವೆ. ನಾವು ಬೀದಿಗೆ ಇಳಿಬೇಕು ಎಂದರೆ ಇಳಿಯುತ್ತೇವೆ ಎಂದು ಎಚ್ಚರಿಸಿದ್ದಾರೆ.

ನಟ ದರ್ಶನ್ ಬಂಧನ ವಿಚಾರ

ಯಾರೇ ತಪ್ಪಿತಸ್ಥರು ಆಗಿದ್ದರೂ ಅವರ ಮೇಲೆ ಕ್ರಮ ಆಗಬೇಕು. ಕಾನೂನಿಗಿಂತ ದೊಡ್ಡವರು ಯಾರು ಇರೋದಿಲ್ಲ. ಇನ್ನೊಬ್ಬರನ್ನ ಕೊಲೆ ಮಾಡೋದಕ್ಕೆ ಭಗವಂತ ಶಕ್ತಿ ಕೊಟ್ಟಿಲ್ಲ. ಕೊಲೆ ಎನ್ನುವುದು ಅಮಾನುಷವಾದದ್ದು. ಯಾರು ಕೂಡ ಕೊಲೆ‌ ಮಾಡುವ ಆಲೋಚನೆ ಮಾಡಬಾರದು ಎಂದು ಹೇಳಿದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

7 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

8 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

8 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

9 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

14 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

15 hours ago