ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ ನೂತನ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿ, ಮಾಜಿ ಸಿಎಂ ಯಡಿಯೂರಪ್ಪ ರೈತ ನಾಯಕರು, ಅವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಇದೆಲ್ಲಾ ರಾಜಕೀಯ ಪಿತೂರಿ ಅಷ್ಟೇ. ಈ ವಯಸ್ಸಿನಲ್ಲಿ ಇಂಥಹದನ್ನೆಲ್ಲಾ ಮಾಡಲು ಸಾಧ್ಯನಾ..? ಪಕ್ಷಕ್ಕೆ ಹಾಗೂ ಅವರಿಗೆ ಮುಜುಗರ ಮಾಡಿ, ಅದರ ರಾಜಕೀಯ ಲಾಭವನ್ನು ತೆಗೆದುಕೊಳ್ಳುವ ದುರುದ್ದೇಶ ಕಾಂಗ್ರೆಸ್ ಗೆ ಇದೆ. ನಮಗೆ ನೂರಕ್ಕೆ ನೂರು ನಮ್ಮ ನಾಯಕರ ಮೇಲೆ ನಂಬಿಕೆಯಿದೆ. ಅವರು ಇಂತಹ ಕೃತ್ಯ ಎಸಗಲು ಅಸಾಧ್ಯ ಎಂದು ಹೇಳಿದ್ದಾರೆ.
*ಯಡಿಯೂರಪ್ಪ ಬಂಧನ ಮಾಡುವ ವಿಚಾರ*
ಯಾವುದೇ ಕಾರಣ ಇಲ್ಲದೆ ನಮ್ಮ ನಾಯಕರನ್ನು ಅರೆಸ್ಟ್ ಮಾಡಿದರೆ ಹೋರಾಟ ನಡೆಸುತ್ತೇವೆ. ಕಾನೂನು ಬಾಹಿರವಾಗಿ ಏನು ಮಾಡಲು ಸಾಧ್ಯವಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನಾದರೂ ಮಾಡಬಹುದು. ನಮ್ಮ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಸದೃಢವಾಗಿದ್ದೇವೆ. ಮೊನ್ನೆ ತಾನೆ ಎಷ್ಟು ಸದೃಡವಾಗಿದ್ದೇವೆ ಎಂದು ತೋರಿಸಿದ್ದೇವೆ. ನಾವು ಬೀದಿಗೆ ಇಳಿಬೇಕು ಎಂದರೆ ಇಳಿಯುತ್ತೇವೆ ಎಂದು ಎಚ್ಚರಿಸಿದ್ದಾರೆ.
ನಟ ದರ್ಶನ್ ಬಂಧನ ವಿಚಾರ
ಯಾರೇ ತಪ್ಪಿತಸ್ಥರು ಆಗಿದ್ದರೂ ಅವರ ಮೇಲೆ ಕ್ರಮ ಆಗಬೇಕು. ಕಾನೂನಿಗಿಂತ ದೊಡ್ಡವರು ಯಾರು ಇರೋದಿಲ್ಲ. ಇನ್ನೊಬ್ಬರನ್ನ ಕೊಲೆ ಮಾಡೋದಕ್ಕೆ ಭಗವಂತ ಶಕ್ತಿ ಕೊಟ್ಟಿಲ್ಲ. ಕೊಲೆ ಎನ್ನುವುದು ಅಮಾನುಷವಾದದ್ದು. ಯಾರು ಕೂಡ ಕೊಲೆ ಮಾಡುವ ಆಲೋಚನೆ ಮಾಡಬಾರದು ಎಂದು ಹೇಳಿದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…