ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ ನೂತನ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿ, ಮಾಜಿ ಸಿಎಂ ಯಡಿಯೂರಪ್ಪ ರೈತ ನಾಯಕರು, ಅವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಇದೆಲ್ಲಾ ರಾಜಕೀಯ ಪಿತೂರಿ ಅಷ್ಟೇ. ಈ ವಯಸ್ಸಿನಲ್ಲಿ ಇಂಥಹದನ್ನೆಲ್ಲಾ ಮಾಡಲು ಸಾಧ್ಯನಾ..? ಪಕ್ಷಕ್ಕೆ ಹಾಗೂ ಅವರಿಗೆ ಮುಜುಗರ ಮಾಡಿ, ಅದರ ರಾಜಕೀಯ ಲಾಭವನ್ನು ತೆಗೆದುಕೊಳ್ಳುವ ದುರುದ್ದೇಶ ಕಾಂಗ್ರೆಸ್ ಗೆ ಇದೆ. ನಮಗೆ ನೂರಕ್ಕೆ ನೂರು ನಮ್ಮ ನಾಯಕರ ಮೇಲೆ ನಂಬಿಕೆಯಿದೆ. ಅವರು ಇಂತಹ ಕೃತ್ಯ ಎಸಗಲು ಅಸಾಧ್ಯ ಎಂದು ಹೇಳಿದ್ದಾರೆ.
*ಯಡಿಯೂರಪ್ಪ ಬಂಧನ ಮಾಡುವ ವಿಚಾರ*
ಯಾವುದೇ ಕಾರಣ ಇಲ್ಲದೆ ನಮ್ಮ ನಾಯಕರನ್ನು ಅರೆಸ್ಟ್ ಮಾಡಿದರೆ ಹೋರಾಟ ನಡೆಸುತ್ತೇವೆ. ಕಾನೂನು ಬಾಹಿರವಾಗಿ ಏನು ಮಾಡಲು ಸಾಧ್ಯವಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನಾದರೂ ಮಾಡಬಹುದು. ನಮ್ಮ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಸದೃಢವಾಗಿದ್ದೇವೆ. ಮೊನ್ನೆ ತಾನೆ ಎಷ್ಟು ಸದೃಡವಾಗಿದ್ದೇವೆ ಎಂದು ತೋರಿಸಿದ್ದೇವೆ. ನಾವು ಬೀದಿಗೆ ಇಳಿಬೇಕು ಎಂದರೆ ಇಳಿಯುತ್ತೇವೆ ಎಂದು ಎಚ್ಚರಿಸಿದ್ದಾರೆ.
ನಟ ದರ್ಶನ್ ಬಂಧನ ವಿಚಾರ
ಯಾರೇ ತಪ್ಪಿತಸ್ಥರು ಆಗಿದ್ದರೂ ಅವರ ಮೇಲೆ ಕ್ರಮ ಆಗಬೇಕು. ಕಾನೂನಿಗಿಂತ ದೊಡ್ಡವರು ಯಾರು ಇರೋದಿಲ್ಲ. ಇನ್ನೊಬ್ಬರನ್ನ ಕೊಲೆ ಮಾಡೋದಕ್ಕೆ ಭಗವಂತ ಶಕ್ತಿ ಕೊಟ್ಟಿಲ್ಲ. ಕೊಲೆ ಎನ್ನುವುದು ಅಮಾನುಷವಾದದ್ದು. ಯಾರು ಕೂಡ ಕೊಲೆ ಮಾಡುವ ಆಲೋಚನೆ ಮಾಡಬಾರದು ಎಂದು ಹೇಳಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…