ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ ನೂತನ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿ, ಮಾಜಿ ಸಿಎಂ ಯಡಿಯೂರಪ್ಪ ರೈತ ನಾಯಕರು, ಅವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಇದೆಲ್ಲಾ ರಾಜಕೀಯ ಪಿತೂರಿ ಅಷ್ಟೇ. ಈ ವಯಸ್ಸಿನಲ್ಲಿ ಇಂಥಹದನ್ನೆಲ್ಲಾ ಮಾಡಲು ಸಾಧ್ಯನಾ..? ಪಕ್ಷಕ್ಕೆ ಹಾಗೂ ಅವರಿಗೆ ಮುಜುಗರ ಮಾಡಿ, ಅದರ ರಾಜಕೀಯ ಲಾಭವನ್ನು ತೆಗೆದುಕೊಳ್ಳುವ ದುರುದ್ದೇಶ ಕಾಂಗ್ರೆಸ್ ಗೆ ಇದೆ. ನಮಗೆ ನೂರಕ್ಕೆ ನೂರು ನಮ್ಮ ನಾಯಕರ ಮೇಲೆ ನಂಬಿಕೆಯಿದೆ. ಅವರು ಇಂತಹ ಕೃತ್ಯ ಎಸಗಲು ಅಸಾಧ್ಯ ಎಂದು ಹೇಳಿದ್ದಾರೆ.
*ಯಡಿಯೂರಪ್ಪ ಬಂಧನ ಮಾಡುವ ವಿಚಾರ*
ಯಾವುದೇ ಕಾರಣ ಇಲ್ಲದೆ ನಮ್ಮ ನಾಯಕರನ್ನು ಅರೆಸ್ಟ್ ಮಾಡಿದರೆ ಹೋರಾಟ ನಡೆಸುತ್ತೇವೆ. ಕಾನೂನು ಬಾಹಿರವಾಗಿ ಏನು ಮಾಡಲು ಸಾಧ್ಯವಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನಾದರೂ ಮಾಡಬಹುದು. ನಮ್ಮ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಸದೃಢವಾಗಿದ್ದೇವೆ. ಮೊನ್ನೆ ತಾನೆ ಎಷ್ಟು ಸದೃಡವಾಗಿದ್ದೇವೆ ಎಂದು ತೋರಿಸಿದ್ದೇವೆ. ನಾವು ಬೀದಿಗೆ ಇಳಿಬೇಕು ಎಂದರೆ ಇಳಿಯುತ್ತೇವೆ ಎಂದು ಎಚ್ಚರಿಸಿದ್ದಾರೆ.
ನಟ ದರ್ಶನ್ ಬಂಧನ ವಿಚಾರ
ಯಾರೇ ತಪ್ಪಿತಸ್ಥರು ಆಗಿದ್ದರೂ ಅವರ ಮೇಲೆ ಕ್ರಮ ಆಗಬೇಕು. ಕಾನೂನಿಗಿಂತ ದೊಡ್ಡವರು ಯಾರು ಇರೋದಿಲ್ಲ. ಇನ್ನೊಬ್ಬರನ್ನ ಕೊಲೆ ಮಾಡೋದಕ್ಕೆ ಭಗವಂತ ಶಕ್ತಿ ಕೊಟ್ಟಿಲ್ಲ. ಕೊಲೆ ಎನ್ನುವುದು ಅಮಾನುಷವಾದದ್ದು. ಯಾರು ಕೂಡ ಕೊಲೆ ಮಾಡುವ ಆಲೋಚನೆ ಮಾಡಬಾರದು ಎಂದು ಹೇಳಿದರು.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…