‘ಮಾಜಿ‌ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ವಿಚಾರ- ಈ ವಯಸ್ಸಿನಲ್ಲಿ ಇಂತಹ ಕೃತ್ಯ ಎಸಗಲು ಸಾಧ್ಯನಾ..?- ನಟ ದರ್ಶನ್ ಬಂಧನ ವಿಚಾರ- ಯಾರೇ ತಪ್ಪಿತಸ್ಥರು ಆಗಿದ್ದರೂ ಅವರ ಮೇಲೆ ಕ್ರಮ ಆಗಬೇಕು’-ನೂತನ ಸಂಸದ ಡಾ.ಕೆ.ಸುಧಾಕರ್

ಮಾಜಿ‌ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ ನೂತನ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿ, ಮಾಜಿ‌ ಸಿಎಂ ಯಡಿಯೂರಪ್ಪ ರೈತ ನಾಯಕರು, ಅವರ ಮೇಲೆ‌ ಇಲ್ಲ ಸಲ್ಲದ ಆರೋಪಗಳನ್ನು ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ. ಇದೆಲ್ಲಾ ರಾಜಕೀಯ ಪಿತೂರಿ ಅಷ್ಟೇ. ಈ ವಯಸ್ಸಿನಲ್ಲಿ ಇಂಥಹದನ್ನೆಲ್ಲಾ ಮಾಡಲು ಸಾಧ್ಯನಾ..? ಪಕ್ಷಕ್ಕೆ ಹಾಗೂ ಅವರಿಗೆ ಮುಜುಗರ ಮಾಡಿ, ಅದರ ರಾಜಕೀಯ ಲಾಭವನ್ನು ತೆಗೆದುಕೊಳ್ಳುವ ದುರುದ್ದೇಶ ಕಾಂಗ್ರೆಸ್ ಗೆ ಇದೆ. ನಮಗೆ ನೂರಕ್ಕೆ ನೂರು ನಮ್ಮ ನಾಯಕರ ಮೇಲೆ ನಂಬಿಕೆಯಿದೆ. ಅವರು ಇಂತಹ ಕೃತ್ಯ ಎಸಗಲು ಅಸಾಧ್ಯ ಎಂದು ಹೇಳಿದ್ದಾರೆ.

*ಯಡಿಯೂರಪ್ಪ ಬಂಧನ ಮಾಡುವ ವಿಚಾರ*

ಯಾವುದೇ ಕಾರಣ ಇಲ್ಲದೆ ನಮ್ಮ ನಾಯಕರನ್ನು ಅರೆಸ್ಟ್ ಮಾಡಿದರೆ ಹೋರಾಟ ನಡೆಸುತ್ತೇವೆ. ಕಾನೂನು ಬಾಹಿರವಾಗಿ ಏನು ಮಾಡಲು ಸಾಧ್ಯವಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನಾದರೂ ಮಾಡಬಹುದು. ನಮ್ಮ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಸದೃಢವಾಗಿದ್ದೇವೆ. ಮೊನ್ನೆ ತಾನೆ ಎಷ್ಟು ಸದೃಡವಾಗಿದ್ದೇವೆ ಎಂದು ತೋರಿಸಿದ್ದೇವೆ. ನಾವು ಬೀದಿಗೆ ಇಳಿಬೇಕು ಎಂದರೆ ಇಳಿಯುತ್ತೇವೆ ಎಂದು ಎಚ್ಚರಿಸಿದ್ದಾರೆ.

ನಟ ದರ್ಶನ್ ಬಂಧನ ವಿಚಾರ

ಯಾರೇ ತಪ್ಪಿತಸ್ಥರು ಆಗಿದ್ದರೂ ಅವರ ಮೇಲೆ ಕ್ರಮ ಆಗಬೇಕು. ಕಾನೂನಿಗಿಂತ ದೊಡ್ಡವರು ಯಾರು ಇರೋದಿಲ್ಲ. ಇನ್ನೊಬ್ಬರನ್ನ ಕೊಲೆ ಮಾಡೋದಕ್ಕೆ ಭಗವಂತ ಶಕ್ತಿ ಕೊಟ್ಟಿಲ್ಲ. ಕೊಲೆ ಎನ್ನುವುದು ಅಮಾನುಷವಾದದ್ದು. ಯಾರು ಕೂಡ ಕೊಲೆ‌ ಮಾಡುವ ಆಲೋಚನೆ ಮಾಡಬಾರದು ಎಂದು ಹೇಳಿದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

2 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

15 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

17 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

17 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

18 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

22 hours ago