‘ಮಾಜಿ‌ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ವಿಚಾರ- ಈ ವಯಸ್ಸಿನಲ್ಲಿ ಇಂತಹ ಕೃತ್ಯ ಎಸಗಲು ಸಾಧ್ಯನಾ..?- ನಟ ದರ್ಶನ್ ಬಂಧನ ವಿಚಾರ- ಯಾರೇ ತಪ್ಪಿತಸ್ಥರು ಆಗಿದ್ದರೂ ಅವರ ಮೇಲೆ ಕ್ರಮ ಆಗಬೇಕು’-ನೂತನ ಸಂಸದ ಡಾ.ಕೆ.ಸುಧಾಕರ್

ಮಾಜಿ‌ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ ನೂತನ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿ, ಮಾಜಿ‌ ಸಿಎಂ ಯಡಿಯೂರಪ್ಪ ರೈತ ನಾಯಕರು, ಅವರ ಮೇಲೆ‌ ಇಲ್ಲ ಸಲ್ಲದ ಆರೋಪಗಳನ್ನು ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ. ಇದೆಲ್ಲಾ ರಾಜಕೀಯ ಪಿತೂರಿ ಅಷ್ಟೇ. ಈ ವಯಸ್ಸಿನಲ್ಲಿ ಇಂಥಹದನ್ನೆಲ್ಲಾ ಮಾಡಲು ಸಾಧ್ಯನಾ..? ಪಕ್ಷಕ್ಕೆ ಹಾಗೂ ಅವರಿಗೆ ಮುಜುಗರ ಮಾಡಿ, ಅದರ ರಾಜಕೀಯ ಲಾಭವನ್ನು ತೆಗೆದುಕೊಳ್ಳುವ ದುರುದ್ದೇಶ ಕಾಂಗ್ರೆಸ್ ಗೆ ಇದೆ. ನಮಗೆ ನೂರಕ್ಕೆ ನೂರು ನಮ್ಮ ನಾಯಕರ ಮೇಲೆ ನಂಬಿಕೆಯಿದೆ. ಅವರು ಇಂತಹ ಕೃತ್ಯ ಎಸಗಲು ಅಸಾಧ್ಯ ಎಂದು ಹೇಳಿದ್ದಾರೆ.

*ಯಡಿಯೂರಪ್ಪ ಬಂಧನ ಮಾಡುವ ವಿಚಾರ*

ಯಾವುದೇ ಕಾರಣ ಇಲ್ಲದೆ ನಮ್ಮ ನಾಯಕರನ್ನು ಅರೆಸ್ಟ್ ಮಾಡಿದರೆ ಹೋರಾಟ ನಡೆಸುತ್ತೇವೆ. ಕಾನೂನು ಬಾಹಿರವಾಗಿ ಏನು ಮಾಡಲು ಸಾಧ್ಯವಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನಾದರೂ ಮಾಡಬಹುದು. ನಮ್ಮ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಸದೃಢವಾಗಿದ್ದೇವೆ. ಮೊನ್ನೆ ತಾನೆ ಎಷ್ಟು ಸದೃಡವಾಗಿದ್ದೇವೆ ಎಂದು ತೋರಿಸಿದ್ದೇವೆ. ನಾವು ಬೀದಿಗೆ ಇಳಿಬೇಕು ಎಂದರೆ ಇಳಿಯುತ್ತೇವೆ ಎಂದು ಎಚ್ಚರಿಸಿದ್ದಾರೆ.

ನಟ ದರ್ಶನ್ ಬಂಧನ ವಿಚಾರ

ಯಾರೇ ತಪ್ಪಿತಸ್ಥರು ಆಗಿದ್ದರೂ ಅವರ ಮೇಲೆ ಕ್ರಮ ಆಗಬೇಕು. ಕಾನೂನಿಗಿಂತ ದೊಡ್ಡವರು ಯಾರು ಇರೋದಿಲ್ಲ. ಇನ್ನೊಬ್ಬರನ್ನ ಕೊಲೆ ಮಾಡೋದಕ್ಕೆ ಭಗವಂತ ಶಕ್ತಿ ಕೊಟ್ಟಿಲ್ಲ. ಕೊಲೆ ಎನ್ನುವುದು ಅಮಾನುಷವಾದದ್ದು. ಯಾರು ಕೂಡ ಕೊಲೆ‌ ಮಾಡುವ ಆಲೋಚನೆ ಮಾಡಬಾರದು ಎಂದು ಹೇಳಿದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

43 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago