Categories: ಕೋಲಾರ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಒತ್ತುವರಿ ಮಾಡಿದ ಅರಣ್ಯ ಭೂಮಿ ವಶಕ್ಕೆ ಪಡೆಯಲು ರೈತ ಸಂಘ ಮನವಿ

ಕೋಲಾರ: ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್‌ರವರ ಜಿಗಲಕುಂಟೆ ಅರಣ್ಯ ಸರ್ವೇ ನಂ.1 ಮತ್ತು 2 ರಲ್ಲಿ 61 ಎಕರೆ ಸರ್ವೇ ಜಮೀನನ್ನು ಒತ್ತುವರಿಯಾಗಿರುವುದನ್ನು ತೆರೆವುಗೊಳಿಸಿ ಕಾನೂನಿನಲ್ಲಿ ಜನಸಾಮಾನ್ಯರಿಗೂ ರಾಜಕಾರಣಿಗಳಿಗೂ ಒಂದೇ ಕಾನೂನು ಎಂಬುದನ್ನು ಸಾಬೀತು ಪಡಿಸಬೇಕೆಂದು ರೈತ ಸಂಘದಿಂದ ವಲಯ ಅರಣ್ಯಾಧಿಕಾರಿ ರವಿಕೀರ್ತಿ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜ್‌ಗೌಡ ಮಾತನಾಡಿ ಅರಣ್ಯ ಭೂಮಿಯನ್ನು ಉಳಿಸಲು ಮುಂದಾಗಿರುವ ಅರಣ್ಯ ಅಧಿಕಾರಿಗಳಿಗೆ ಅರಣ್ಯ ಸಚಿವರು ಹೆಚ್ಚಿನ ಭದ್ರತೆ ನೀಡಿ ಒತ್ತುವರಿ ಕಾರ್ಯಾಚರಣೆ ಮುಂದುವರೆಸಲು ಆದೇಶ ಮಾಡುವ ಜೊತೆಗೆ ತಾಂತ್ರಿಕ ದೋಷದ ನೆಪದಲ್ಲಿ ಸರ್ವೇ ಸ್ಥಗಿತಗೊಳಿಸುವ ಮೂಲಕ ಸಾರ್ವಜನಿಕರ ಬಡ ರೈತರು ಶಾಪ ಹಾಕುವ ಮೊದಲು ಬಲಾಡ್ಯರ ಭೂ ಒತ್ತುವರಿ ತೆರೆವುಗೊಳಿಸಬೇಕೆಂದು ಸಲಹೆ ನೀಡಿದರು.

ಹತ್ತಾರು ವರ್ಷಗಳ ಹಿಂದೆ ರಾಜಕೀಯ ಬಲದಿಂದ ಕಾನೂನು ಬಾಹಿರವಾಗಿ ಒಂದೊಂದು ಕುಟುಂಬಕ್ಕೆ 5 ರಿಂದ 100 ಎಕರೆ ವರೆಗೂ ಅರಣ್ಯ ಭೂಮಿಯನ್ನು ಮಂಜೂರು ಮಾಡುವ ಮುಖಾಂತರ ಕೋಟಿ ಕೋಟಿ ಲಂಚದ ವಹಿವಾಟು ನಡೆಯುವ ಜೊತೆಗೆ ಅರಣ್ಯ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ನೂರಾರು ಕೋಟಿ ಬ್ಯಾಂಕ್ ಸಾಲ ಪಡೆದಿರುವ ಭೂಗಳ್ಳರ ವಿರುದ್ದ ಅರಣ್ಯ ಅಧಿಕಾರಿಗಳ ದೈರ್ಯತೋರಿ ಸಿಂಹಸ್ವಪ್ನವಾಗಿ ಭೂಗಳ್ಳರ ನಿದ್ದೆಗೆಡಿಸುವಂತೆ ಪ್ರಭಾವಿ ರಾಜಕಾರಣಿಗಳ ಒತ್ತುವರಿ ಅರಣ್ಯ ಭೂಮಿಯನ್ನು ತೆರೆವುಗೊಳಿಸಬೇಕೆಂದು ಒತ್ತಾಯಿಸಿದರು.

ತಾಲ್ಲೂಕಾದ್ಯಕ್ಷ ತರ‍್ನಹಳ್ಳಿ ಆಂಜಿನಪ್ಪ ಮಾತನಾಡಿ ಬಡವರ ಬದುಕನ್ನು ಬೀದಿಗೆ ತಳ್ಳಿ 10 ಸಾವಿರ ಕೋಟಿ ಅರಣ್ಯ ಆಸ್ತಿ ಉಳಿಸಿದ್ದೇವೆ ಎಂದು ಹೇಳುವುದು ಸಾಧನೆ ಅಲ್ಲ ನೂರಾರು ಎಕರೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಬಲಾಡ್ಯ ಭೂಗಳ್ಳರ ಒತ್ತುವರಿ ತೆರೆವುಗೊಳಿಸಿದಾಗ ಮಾತ್ರ ಅರಣ್ಯಧಿಕಾರಿಗಳ ಸಾಧನೆ ಎಂದು ತೋರಿಸಬಹುದೆಂದು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಒಂದು ಎಕರೆಯಿಂದ 4 ಎಕರೆಯವರೆಗೆ ಕಾನೂನು ಬದ್ದವಾಗಿ ಮಂಜೂರಾಗಿದ್ದರೆ ಅಂತಹವರನ್ನು ರೈತರು ಎಂದು ಪರಿಗಣಿಸಿ ಸರ್ಕಾರದ ಮಟ್ಟದಲ್ಲಿ ತನಿಖೆ ಮಾಡಿ ನ್ಯಾಯ ಕೊಡಿಸಿಕೊಳ್ಳಲು ನಮ್ಮ ಬೆಂಬಲವಿದೆ. ಆದರೆ ಒಂದೇ ಕುಟುಂಬಕ್ಕೆ 10 ರಿಂದ 80 ಎಕರೆ ಯವರೆಗೆ ಮಂಜೂರಾತಿ ನಕಲಿ ಸಾಗುವಳಿಗಳನ್ನು ಸೃಷ್ಠಿಸಿಕೊಂಡು ಅರಣ್ಯ ಭೂಮಿಗೆ ಬ್ಯಾಂಕ್‌ಗಳಲ್ಲಿ ನೂರಾರು ಕೋಟಿ ಕೋಳಿ ಪಾರಂ ಮತ್ತಿತರ ಸಾಲಗಳನ್ನು ಪಡೆದುಕೊಂಡಿರುವವರು ಸಣ್ಣ ರೈತರೇ ಅಮಾಯಕ ರೈತರ ಹೆಸರಿನಲ್ಲಿ ಅರಣ್ಯ ಭೂಮಿಯನ್ನು ಕಬಳಿಕೆ ಮಾಡಿರುವ ಶ್ರೀಮಂತ ಭೂಗಳ್ಳರಲ್ಲ ಜಮೀನನ್ನು ಕೂಡಲೇ ವಶಕ್ಕೆ ಪಡೆಯದ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಸಾವಿರಾರು ಎಕರೆ ಅರಣ್ಯ ಭೂಮಿಯನ್ನು ತೆರವುಗೊಳಿಸಲು ಸರ್ವೇ ಮಾಡಿಸಬೇಕು. ಜೊತೆಗೆ ಒತ್ತುವರಿದಾರರಿಗೆ ಸಹಕರಿಸಿರುವ ಕಂದಾಯ, ಸರ್ವೇ, ವಿರುದ್ಧ ಕಾನೂನು ಕ್ರಮಕೈಗೊಂಡು ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ದಾಖಲು ಮಾಡಿ ಮಾಜಿ ಶಾಸಕರು ಪ್ರಭಾವಿ ರಾಜಕಾರಣಿಗಳಾದ ಕೆ.ಆರ್ ರಮೇಶ್ ಕುಮಾರ್‌ರವರ ಜಿಗಲಕುಂಟೆ ಅರಣ್ಯ ಸರ್ವೇ ನಂ.1 ಮತ್ತು 2 ರಲ್ಲಿ 61 ಎಕರೆ ಸರ್ವೇ ಮಾಡಿ ಒತ್ತುವರಿ ತೆರೆವುಗೊಳಿಸಿ ಕಾನೂನಿನಲ್ಲಿ ಜನಸಾಮಾನ್ಯರಿಗೂ ರಾಜಕಾರಣಿಗಳಿಗೂ ಒಂದೇ ಕಾನೂನು ಎಂಬುದನ್ನು ಸಾಭೀತುಪಡಿಸಿ ಅರಣ್ಯ ಜಮೀನನ್ನು ಉಳಿಸಬೇಕು ಇಲ್ಲವೇ ಬಡ ರೈತರ ಭೂಮಿಯನ್ನು ವಾಪಸ್ ನೀಡುವ ಹೋರಾಟಕ್ಕೆ ಚಾಲನೆ ನೀಡುವ ಎಚ್ಚರಿಕೆಯೊಂದಿಗೆ ಮನವಿ ನೀಡಿ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ವಲಯ ಅರಣ್ಯಾಧಿಕಾರಿ ರವಿಕೀರ್ತಿ ಅರಣ್ಯ ಭೂಮಿಯನ್ನು ಯಾರೇ ಒತ್ತುವರಿ ಮಾಡಿಕೊಂಡಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ಶೀಘ್ರದಲ್ಲಿಯೇ ಮಾಜಿ ಶಾಸಕರ ಅರಣ್ಯ ಒತ್ತುವರಿ ತೆರೆವುಗೊಳಿಸುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ಆಲವಾಟಿ ಶಿವ, ದ್ಯಾವಂಡಹಳ್ಳಿ ರಾಜೇಂದ್ರ ರೆಡ್ಡಿ, ಸಹದೇವಣ್ಣ, ಶಪಿ, ತಿಮ್ಮಣ್ಣ, ಗೀರೀಶ್ ಮುಂತಾದವರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

2 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

7 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

7 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

12 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

23 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

24 hours ago