Categories: ಕೋಲಾರ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಒತ್ತುವರಿ ಮಾಡಿದ ಅರಣ್ಯ ಭೂಮಿ ವಶಕ್ಕೆ ಪಡೆಯಲು ರೈತ ಸಂಘ ಮನವಿ

ಕೋಲಾರ: ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್‌ರವರ ಜಿಗಲಕುಂಟೆ ಅರಣ್ಯ ಸರ್ವೇ ನಂ.1 ಮತ್ತು 2 ರಲ್ಲಿ 61 ಎಕರೆ ಸರ್ವೇ ಜಮೀನನ್ನು ಒತ್ತುವರಿಯಾಗಿರುವುದನ್ನು ತೆರೆವುಗೊಳಿಸಿ ಕಾನೂನಿನಲ್ಲಿ ಜನಸಾಮಾನ್ಯರಿಗೂ ರಾಜಕಾರಣಿಗಳಿಗೂ ಒಂದೇ ಕಾನೂನು ಎಂಬುದನ್ನು ಸಾಬೀತು ಪಡಿಸಬೇಕೆಂದು ರೈತ ಸಂಘದಿಂದ ವಲಯ ಅರಣ್ಯಾಧಿಕಾರಿ ರವಿಕೀರ್ತಿ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜ್‌ಗೌಡ ಮಾತನಾಡಿ ಅರಣ್ಯ ಭೂಮಿಯನ್ನು ಉಳಿಸಲು ಮುಂದಾಗಿರುವ ಅರಣ್ಯ ಅಧಿಕಾರಿಗಳಿಗೆ ಅರಣ್ಯ ಸಚಿವರು ಹೆಚ್ಚಿನ ಭದ್ರತೆ ನೀಡಿ ಒತ್ತುವರಿ ಕಾರ್ಯಾಚರಣೆ ಮುಂದುವರೆಸಲು ಆದೇಶ ಮಾಡುವ ಜೊತೆಗೆ ತಾಂತ್ರಿಕ ದೋಷದ ನೆಪದಲ್ಲಿ ಸರ್ವೇ ಸ್ಥಗಿತಗೊಳಿಸುವ ಮೂಲಕ ಸಾರ್ವಜನಿಕರ ಬಡ ರೈತರು ಶಾಪ ಹಾಕುವ ಮೊದಲು ಬಲಾಡ್ಯರ ಭೂ ಒತ್ತುವರಿ ತೆರೆವುಗೊಳಿಸಬೇಕೆಂದು ಸಲಹೆ ನೀಡಿದರು.

ಹತ್ತಾರು ವರ್ಷಗಳ ಹಿಂದೆ ರಾಜಕೀಯ ಬಲದಿಂದ ಕಾನೂನು ಬಾಹಿರವಾಗಿ ಒಂದೊಂದು ಕುಟುಂಬಕ್ಕೆ 5 ರಿಂದ 100 ಎಕರೆ ವರೆಗೂ ಅರಣ್ಯ ಭೂಮಿಯನ್ನು ಮಂಜೂರು ಮಾಡುವ ಮುಖಾಂತರ ಕೋಟಿ ಕೋಟಿ ಲಂಚದ ವಹಿವಾಟು ನಡೆಯುವ ಜೊತೆಗೆ ಅರಣ್ಯ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ನೂರಾರು ಕೋಟಿ ಬ್ಯಾಂಕ್ ಸಾಲ ಪಡೆದಿರುವ ಭೂಗಳ್ಳರ ವಿರುದ್ದ ಅರಣ್ಯ ಅಧಿಕಾರಿಗಳ ದೈರ್ಯತೋರಿ ಸಿಂಹಸ್ವಪ್ನವಾಗಿ ಭೂಗಳ್ಳರ ನಿದ್ದೆಗೆಡಿಸುವಂತೆ ಪ್ರಭಾವಿ ರಾಜಕಾರಣಿಗಳ ಒತ್ತುವರಿ ಅರಣ್ಯ ಭೂಮಿಯನ್ನು ತೆರೆವುಗೊಳಿಸಬೇಕೆಂದು ಒತ್ತಾಯಿಸಿದರು.

ತಾಲ್ಲೂಕಾದ್ಯಕ್ಷ ತರ‍್ನಹಳ್ಳಿ ಆಂಜಿನಪ್ಪ ಮಾತನಾಡಿ ಬಡವರ ಬದುಕನ್ನು ಬೀದಿಗೆ ತಳ್ಳಿ 10 ಸಾವಿರ ಕೋಟಿ ಅರಣ್ಯ ಆಸ್ತಿ ಉಳಿಸಿದ್ದೇವೆ ಎಂದು ಹೇಳುವುದು ಸಾಧನೆ ಅಲ್ಲ ನೂರಾರು ಎಕರೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಬಲಾಡ್ಯ ಭೂಗಳ್ಳರ ಒತ್ತುವರಿ ತೆರೆವುಗೊಳಿಸಿದಾಗ ಮಾತ್ರ ಅರಣ್ಯಧಿಕಾರಿಗಳ ಸಾಧನೆ ಎಂದು ತೋರಿಸಬಹುದೆಂದು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಒಂದು ಎಕರೆಯಿಂದ 4 ಎಕರೆಯವರೆಗೆ ಕಾನೂನು ಬದ್ದವಾಗಿ ಮಂಜೂರಾಗಿದ್ದರೆ ಅಂತಹವರನ್ನು ರೈತರು ಎಂದು ಪರಿಗಣಿಸಿ ಸರ್ಕಾರದ ಮಟ್ಟದಲ್ಲಿ ತನಿಖೆ ಮಾಡಿ ನ್ಯಾಯ ಕೊಡಿಸಿಕೊಳ್ಳಲು ನಮ್ಮ ಬೆಂಬಲವಿದೆ. ಆದರೆ ಒಂದೇ ಕುಟುಂಬಕ್ಕೆ 10 ರಿಂದ 80 ಎಕರೆ ಯವರೆಗೆ ಮಂಜೂರಾತಿ ನಕಲಿ ಸಾಗುವಳಿಗಳನ್ನು ಸೃಷ್ಠಿಸಿಕೊಂಡು ಅರಣ್ಯ ಭೂಮಿಗೆ ಬ್ಯಾಂಕ್‌ಗಳಲ್ಲಿ ನೂರಾರು ಕೋಟಿ ಕೋಳಿ ಪಾರಂ ಮತ್ತಿತರ ಸಾಲಗಳನ್ನು ಪಡೆದುಕೊಂಡಿರುವವರು ಸಣ್ಣ ರೈತರೇ ಅಮಾಯಕ ರೈತರ ಹೆಸರಿನಲ್ಲಿ ಅರಣ್ಯ ಭೂಮಿಯನ್ನು ಕಬಳಿಕೆ ಮಾಡಿರುವ ಶ್ರೀಮಂತ ಭೂಗಳ್ಳರಲ್ಲ ಜಮೀನನ್ನು ಕೂಡಲೇ ವಶಕ್ಕೆ ಪಡೆಯದ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಸಾವಿರಾರು ಎಕರೆ ಅರಣ್ಯ ಭೂಮಿಯನ್ನು ತೆರವುಗೊಳಿಸಲು ಸರ್ವೇ ಮಾಡಿಸಬೇಕು. ಜೊತೆಗೆ ಒತ್ತುವರಿದಾರರಿಗೆ ಸಹಕರಿಸಿರುವ ಕಂದಾಯ, ಸರ್ವೇ, ವಿರುದ್ಧ ಕಾನೂನು ಕ್ರಮಕೈಗೊಂಡು ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ದಾಖಲು ಮಾಡಿ ಮಾಜಿ ಶಾಸಕರು ಪ್ರಭಾವಿ ರಾಜಕಾರಣಿಗಳಾದ ಕೆ.ಆರ್ ರಮೇಶ್ ಕುಮಾರ್‌ರವರ ಜಿಗಲಕುಂಟೆ ಅರಣ್ಯ ಸರ್ವೇ ನಂ.1 ಮತ್ತು 2 ರಲ್ಲಿ 61 ಎಕರೆ ಸರ್ವೇ ಮಾಡಿ ಒತ್ತುವರಿ ತೆರೆವುಗೊಳಿಸಿ ಕಾನೂನಿನಲ್ಲಿ ಜನಸಾಮಾನ್ಯರಿಗೂ ರಾಜಕಾರಣಿಗಳಿಗೂ ಒಂದೇ ಕಾನೂನು ಎಂಬುದನ್ನು ಸಾಭೀತುಪಡಿಸಿ ಅರಣ್ಯ ಜಮೀನನ್ನು ಉಳಿಸಬೇಕು ಇಲ್ಲವೇ ಬಡ ರೈತರ ಭೂಮಿಯನ್ನು ವಾಪಸ್ ನೀಡುವ ಹೋರಾಟಕ್ಕೆ ಚಾಲನೆ ನೀಡುವ ಎಚ್ಚರಿಕೆಯೊಂದಿಗೆ ಮನವಿ ನೀಡಿ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ವಲಯ ಅರಣ್ಯಾಧಿಕಾರಿ ರವಿಕೀರ್ತಿ ಅರಣ್ಯ ಭೂಮಿಯನ್ನು ಯಾರೇ ಒತ್ತುವರಿ ಮಾಡಿಕೊಂಡಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ಶೀಘ್ರದಲ್ಲಿಯೇ ಮಾಜಿ ಶಾಸಕರ ಅರಣ್ಯ ಒತ್ತುವರಿ ತೆರೆವುಗೊಳಿಸುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ಆಲವಾಟಿ ಶಿವ, ದ್ಯಾವಂಡಹಳ್ಳಿ ರಾಜೇಂದ್ರ ರೆಡ್ಡಿ, ಸಹದೇವಣ್ಣ, ಶಪಿ, ತಿಮ್ಮಣ್ಣ, ಗೀರೀಶ್ ಮುಂತಾದವರಿದ್ದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

15 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

15 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

18 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

18 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

23 hours ago