Categories: ಕೋಲಾರ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಒತ್ತುವರಿ ಮಾಡಿದ ಅರಣ್ಯ ಭೂಮಿ ವಶಕ್ಕೆ ಪಡೆಯಲು ರೈತ ಸಂಘ ಮನವಿ

ಕೋಲಾರ: ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್‌ರವರ ಜಿಗಲಕುಂಟೆ ಅರಣ್ಯ ಸರ್ವೇ ನಂ.1 ಮತ್ತು 2 ರಲ್ಲಿ 61 ಎಕರೆ ಸರ್ವೇ ಜಮೀನನ್ನು ಒತ್ತುವರಿಯಾಗಿರುವುದನ್ನು ತೆರೆವುಗೊಳಿಸಿ ಕಾನೂನಿನಲ್ಲಿ ಜನಸಾಮಾನ್ಯರಿಗೂ ರಾಜಕಾರಣಿಗಳಿಗೂ ಒಂದೇ ಕಾನೂನು ಎಂಬುದನ್ನು ಸಾಬೀತು ಪಡಿಸಬೇಕೆಂದು ರೈತ ಸಂಘದಿಂದ ವಲಯ ಅರಣ್ಯಾಧಿಕಾರಿ ರವಿಕೀರ್ತಿ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜ್‌ಗೌಡ ಮಾತನಾಡಿ ಅರಣ್ಯ ಭೂಮಿಯನ್ನು ಉಳಿಸಲು ಮುಂದಾಗಿರುವ ಅರಣ್ಯ ಅಧಿಕಾರಿಗಳಿಗೆ ಅರಣ್ಯ ಸಚಿವರು ಹೆಚ್ಚಿನ ಭದ್ರತೆ ನೀಡಿ ಒತ್ತುವರಿ ಕಾರ್ಯಾಚರಣೆ ಮುಂದುವರೆಸಲು ಆದೇಶ ಮಾಡುವ ಜೊತೆಗೆ ತಾಂತ್ರಿಕ ದೋಷದ ನೆಪದಲ್ಲಿ ಸರ್ವೇ ಸ್ಥಗಿತಗೊಳಿಸುವ ಮೂಲಕ ಸಾರ್ವಜನಿಕರ ಬಡ ರೈತರು ಶಾಪ ಹಾಕುವ ಮೊದಲು ಬಲಾಡ್ಯರ ಭೂ ಒತ್ತುವರಿ ತೆರೆವುಗೊಳಿಸಬೇಕೆಂದು ಸಲಹೆ ನೀಡಿದರು.

ಹತ್ತಾರು ವರ್ಷಗಳ ಹಿಂದೆ ರಾಜಕೀಯ ಬಲದಿಂದ ಕಾನೂನು ಬಾಹಿರವಾಗಿ ಒಂದೊಂದು ಕುಟುಂಬಕ್ಕೆ 5 ರಿಂದ 100 ಎಕರೆ ವರೆಗೂ ಅರಣ್ಯ ಭೂಮಿಯನ್ನು ಮಂಜೂರು ಮಾಡುವ ಮುಖಾಂತರ ಕೋಟಿ ಕೋಟಿ ಲಂಚದ ವಹಿವಾಟು ನಡೆಯುವ ಜೊತೆಗೆ ಅರಣ್ಯ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ನೂರಾರು ಕೋಟಿ ಬ್ಯಾಂಕ್ ಸಾಲ ಪಡೆದಿರುವ ಭೂಗಳ್ಳರ ವಿರುದ್ದ ಅರಣ್ಯ ಅಧಿಕಾರಿಗಳ ದೈರ್ಯತೋರಿ ಸಿಂಹಸ್ವಪ್ನವಾಗಿ ಭೂಗಳ್ಳರ ನಿದ್ದೆಗೆಡಿಸುವಂತೆ ಪ್ರಭಾವಿ ರಾಜಕಾರಣಿಗಳ ಒತ್ತುವರಿ ಅರಣ್ಯ ಭೂಮಿಯನ್ನು ತೆರೆವುಗೊಳಿಸಬೇಕೆಂದು ಒತ್ತಾಯಿಸಿದರು.

ತಾಲ್ಲೂಕಾದ್ಯಕ್ಷ ತರ‍್ನಹಳ್ಳಿ ಆಂಜಿನಪ್ಪ ಮಾತನಾಡಿ ಬಡವರ ಬದುಕನ್ನು ಬೀದಿಗೆ ತಳ್ಳಿ 10 ಸಾವಿರ ಕೋಟಿ ಅರಣ್ಯ ಆಸ್ತಿ ಉಳಿಸಿದ್ದೇವೆ ಎಂದು ಹೇಳುವುದು ಸಾಧನೆ ಅಲ್ಲ ನೂರಾರು ಎಕರೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಬಲಾಡ್ಯ ಭೂಗಳ್ಳರ ಒತ್ತುವರಿ ತೆರೆವುಗೊಳಿಸಿದಾಗ ಮಾತ್ರ ಅರಣ್ಯಧಿಕಾರಿಗಳ ಸಾಧನೆ ಎಂದು ತೋರಿಸಬಹುದೆಂದು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಒಂದು ಎಕರೆಯಿಂದ 4 ಎಕರೆಯವರೆಗೆ ಕಾನೂನು ಬದ್ದವಾಗಿ ಮಂಜೂರಾಗಿದ್ದರೆ ಅಂತಹವರನ್ನು ರೈತರು ಎಂದು ಪರಿಗಣಿಸಿ ಸರ್ಕಾರದ ಮಟ್ಟದಲ್ಲಿ ತನಿಖೆ ಮಾಡಿ ನ್ಯಾಯ ಕೊಡಿಸಿಕೊಳ್ಳಲು ನಮ್ಮ ಬೆಂಬಲವಿದೆ. ಆದರೆ ಒಂದೇ ಕುಟುಂಬಕ್ಕೆ 10 ರಿಂದ 80 ಎಕರೆ ಯವರೆಗೆ ಮಂಜೂರಾತಿ ನಕಲಿ ಸಾಗುವಳಿಗಳನ್ನು ಸೃಷ್ಠಿಸಿಕೊಂಡು ಅರಣ್ಯ ಭೂಮಿಗೆ ಬ್ಯಾಂಕ್‌ಗಳಲ್ಲಿ ನೂರಾರು ಕೋಟಿ ಕೋಳಿ ಪಾರಂ ಮತ್ತಿತರ ಸಾಲಗಳನ್ನು ಪಡೆದುಕೊಂಡಿರುವವರು ಸಣ್ಣ ರೈತರೇ ಅಮಾಯಕ ರೈತರ ಹೆಸರಿನಲ್ಲಿ ಅರಣ್ಯ ಭೂಮಿಯನ್ನು ಕಬಳಿಕೆ ಮಾಡಿರುವ ಶ್ರೀಮಂತ ಭೂಗಳ್ಳರಲ್ಲ ಜಮೀನನ್ನು ಕೂಡಲೇ ವಶಕ್ಕೆ ಪಡೆಯದ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಸಾವಿರಾರು ಎಕರೆ ಅರಣ್ಯ ಭೂಮಿಯನ್ನು ತೆರವುಗೊಳಿಸಲು ಸರ್ವೇ ಮಾಡಿಸಬೇಕು. ಜೊತೆಗೆ ಒತ್ತುವರಿದಾರರಿಗೆ ಸಹಕರಿಸಿರುವ ಕಂದಾಯ, ಸರ್ವೇ, ವಿರುದ್ಧ ಕಾನೂನು ಕ್ರಮಕೈಗೊಂಡು ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ದಾಖಲು ಮಾಡಿ ಮಾಜಿ ಶಾಸಕರು ಪ್ರಭಾವಿ ರಾಜಕಾರಣಿಗಳಾದ ಕೆ.ಆರ್ ರಮೇಶ್ ಕುಮಾರ್‌ರವರ ಜಿಗಲಕುಂಟೆ ಅರಣ್ಯ ಸರ್ವೇ ನಂ.1 ಮತ್ತು 2 ರಲ್ಲಿ 61 ಎಕರೆ ಸರ್ವೇ ಮಾಡಿ ಒತ್ತುವರಿ ತೆರೆವುಗೊಳಿಸಿ ಕಾನೂನಿನಲ್ಲಿ ಜನಸಾಮಾನ್ಯರಿಗೂ ರಾಜಕಾರಣಿಗಳಿಗೂ ಒಂದೇ ಕಾನೂನು ಎಂಬುದನ್ನು ಸಾಭೀತುಪಡಿಸಿ ಅರಣ್ಯ ಜಮೀನನ್ನು ಉಳಿಸಬೇಕು ಇಲ್ಲವೇ ಬಡ ರೈತರ ಭೂಮಿಯನ್ನು ವಾಪಸ್ ನೀಡುವ ಹೋರಾಟಕ್ಕೆ ಚಾಲನೆ ನೀಡುವ ಎಚ್ಚರಿಕೆಯೊಂದಿಗೆ ಮನವಿ ನೀಡಿ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ವಲಯ ಅರಣ್ಯಾಧಿಕಾರಿ ರವಿಕೀರ್ತಿ ಅರಣ್ಯ ಭೂಮಿಯನ್ನು ಯಾರೇ ಒತ್ತುವರಿ ಮಾಡಿಕೊಂಡಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ಶೀಘ್ರದಲ್ಲಿಯೇ ಮಾಜಿ ಶಾಸಕರ ಅರಣ್ಯ ಒತ್ತುವರಿ ತೆರೆವುಗೊಳಿಸುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ಆಲವಾಟಿ ಶಿವ, ದ್ಯಾವಂಡಹಳ್ಳಿ ರಾಜೇಂದ್ರ ರೆಡ್ಡಿ, ಸಹದೇವಣ್ಣ, ಶಪಿ, ತಿಮ್ಮಣ್ಣ, ಗೀರೀಶ್ ಮುಂತಾದವರಿದ್ದರು.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

3 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

8 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

9 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

11 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago