Categories: ಕೋಲಾರ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಒತ್ತುವರಿ ಮಾಡಿದ ಅರಣ್ಯ ಭೂಮಿ ವಶಕ್ಕೆ ಪಡೆಯಲು ರೈತ ಸಂಘ ಮನವಿ

ಕೋಲಾರ: ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್‌ರವರ ಜಿಗಲಕುಂಟೆ ಅರಣ್ಯ ಸರ್ವೇ ನಂ.1 ಮತ್ತು 2 ರಲ್ಲಿ 61 ಎಕರೆ ಸರ್ವೇ ಜಮೀನನ್ನು ಒತ್ತುವರಿಯಾಗಿರುವುದನ್ನು ತೆರೆವುಗೊಳಿಸಿ ಕಾನೂನಿನಲ್ಲಿ ಜನಸಾಮಾನ್ಯರಿಗೂ ರಾಜಕಾರಣಿಗಳಿಗೂ ಒಂದೇ ಕಾನೂನು ಎಂಬುದನ್ನು ಸಾಬೀತು ಪಡಿಸಬೇಕೆಂದು ರೈತ ಸಂಘದಿಂದ ವಲಯ ಅರಣ್ಯಾಧಿಕಾರಿ ರವಿಕೀರ್ತಿ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜ್‌ಗೌಡ ಮಾತನಾಡಿ ಅರಣ್ಯ ಭೂಮಿಯನ್ನು ಉಳಿಸಲು ಮುಂದಾಗಿರುವ ಅರಣ್ಯ ಅಧಿಕಾರಿಗಳಿಗೆ ಅರಣ್ಯ ಸಚಿವರು ಹೆಚ್ಚಿನ ಭದ್ರತೆ ನೀಡಿ ಒತ್ತುವರಿ ಕಾರ್ಯಾಚರಣೆ ಮುಂದುವರೆಸಲು ಆದೇಶ ಮಾಡುವ ಜೊತೆಗೆ ತಾಂತ್ರಿಕ ದೋಷದ ನೆಪದಲ್ಲಿ ಸರ್ವೇ ಸ್ಥಗಿತಗೊಳಿಸುವ ಮೂಲಕ ಸಾರ್ವಜನಿಕರ ಬಡ ರೈತರು ಶಾಪ ಹಾಕುವ ಮೊದಲು ಬಲಾಡ್ಯರ ಭೂ ಒತ್ತುವರಿ ತೆರೆವುಗೊಳಿಸಬೇಕೆಂದು ಸಲಹೆ ನೀಡಿದರು.

ಹತ್ತಾರು ವರ್ಷಗಳ ಹಿಂದೆ ರಾಜಕೀಯ ಬಲದಿಂದ ಕಾನೂನು ಬಾಹಿರವಾಗಿ ಒಂದೊಂದು ಕುಟುಂಬಕ್ಕೆ 5 ರಿಂದ 100 ಎಕರೆ ವರೆಗೂ ಅರಣ್ಯ ಭೂಮಿಯನ್ನು ಮಂಜೂರು ಮಾಡುವ ಮುಖಾಂತರ ಕೋಟಿ ಕೋಟಿ ಲಂಚದ ವಹಿವಾಟು ನಡೆಯುವ ಜೊತೆಗೆ ಅರಣ್ಯ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ನೂರಾರು ಕೋಟಿ ಬ್ಯಾಂಕ್ ಸಾಲ ಪಡೆದಿರುವ ಭೂಗಳ್ಳರ ವಿರುದ್ದ ಅರಣ್ಯ ಅಧಿಕಾರಿಗಳ ದೈರ್ಯತೋರಿ ಸಿಂಹಸ್ವಪ್ನವಾಗಿ ಭೂಗಳ್ಳರ ನಿದ್ದೆಗೆಡಿಸುವಂತೆ ಪ್ರಭಾವಿ ರಾಜಕಾರಣಿಗಳ ಒತ್ತುವರಿ ಅರಣ್ಯ ಭೂಮಿಯನ್ನು ತೆರೆವುಗೊಳಿಸಬೇಕೆಂದು ಒತ್ತಾಯಿಸಿದರು.

ತಾಲ್ಲೂಕಾದ್ಯಕ್ಷ ತರ‍್ನಹಳ್ಳಿ ಆಂಜಿನಪ್ಪ ಮಾತನಾಡಿ ಬಡವರ ಬದುಕನ್ನು ಬೀದಿಗೆ ತಳ್ಳಿ 10 ಸಾವಿರ ಕೋಟಿ ಅರಣ್ಯ ಆಸ್ತಿ ಉಳಿಸಿದ್ದೇವೆ ಎಂದು ಹೇಳುವುದು ಸಾಧನೆ ಅಲ್ಲ ನೂರಾರು ಎಕರೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಬಲಾಡ್ಯ ಭೂಗಳ್ಳರ ಒತ್ತುವರಿ ತೆರೆವುಗೊಳಿಸಿದಾಗ ಮಾತ್ರ ಅರಣ್ಯಧಿಕಾರಿಗಳ ಸಾಧನೆ ಎಂದು ತೋರಿಸಬಹುದೆಂದು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಒಂದು ಎಕರೆಯಿಂದ 4 ಎಕರೆಯವರೆಗೆ ಕಾನೂನು ಬದ್ದವಾಗಿ ಮಂಜೂರಾಗಿದ್ದರೆ ಅಂತಹವರನ್ನು ರೈತರು ಎಂದು ಪರಿಗಣಿಸಿ ಸರ್ಕಾರದ ಮಟ್ಟದಲ್ಲಿ ತನಿಖೆ ಮಾಡಿ ನ್ಯಾಯ ಕೊಡಿಸಿಕೊಳ್ಳಲು ನಮ್ಮ ಬೆಂಬಲವಿದೆ. ಆದರೆ ಒಂದೇ ಕುಟುಂಬಕ್ಕೆ 10 ರಿಂದ 80 ಎಕರೆ ಯವರೆಗೆ ಮಂಜೂರಾತಿ ನಕಲಿ ಸಾಗುವಳಿಗಳನ್ನು ಸೃಷ್ಠಿಸಿಕೊಂಡು ಅರಣ್ಯ ಭೂಮಿಗೆ ಬ್ಯಾಂಕ್‌ಗಳಲ್ಲಿ ನೂರಾರು ಕೋಟಿ ಕೋಳಿ ಪಾರಂ ಮತ್ತಿತರ ಸಾಲಗಳನ್ನು ಪಡೆದುಕೊಂಡಿರುವವರು ಸಣ್ಣ ರೈತರೇ ಅಮಾಯಕ ರೈತರ ಹೆಸರಿನಲ್ಲಿ ಅರಣ್ಯ ಭೂಮಿಯನ್ನು ಕಬಳಿಕೆ ಮಾಡಿರುವ ಶ್ರೀಮಂತ ಭೂಗಳ್ಳರಲ್ಲ ಜಮೀನನ್ನು ಕೂಡಲೇ ವಶಕ್ಕೆ ಪಡೆಯದ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಸಾವಿರಾರು ಎಕರೆ ಅರಣ್ಯ ಭೂಮಿಯನ್ನು ತೆರವುಗೊಳಿಸಲು ಸರ್ವೇ ಮಾಡಿಸಬೇಕು. ಜೊತೆಗೆ ಒತ್ತುವರಿದಾರರಿಗೆ ಸಹಕರಿಸಿರುವ ಕಂದಾಯ, ಸರ್ವೇ, ವಿರುದ್ಧ ಕಾನೂನು ಕ್ರಮಕೈಗೊಂಡು ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ದಾಖಲು ಮಾಡಿ ಮಾಜಿ ಶಾಸಕರು ಪ್ರಭಾವಿ ರಾಜಕಾರಣಿಗಳಾದ ಕೆ.ಆರ್ ರಮೇಶ್ ಕುಮಾರ್‌ರವರ ಜಿಗಲಕುಂಟೆ ಅರಣ್ಯ ಸರ್ವೇ ನಂ.1 ಮತ್ತು 2 ರಲ್ಲಿ 61 ಎಕರೆ ಸರ್ವೇ ಮಾಡಿ ಒತ್ತುವರಿ ತೆರೆವುಗೊಳಿಸಿ ಕಾನೂನಿನಲ್ಲಿ ಜನಸಾಮಾನ್ಯರಿಗೂ ರಾಜಕಾರಣಿಗಳಿಗೂ ಒಂದೇ ಕಾನೂನು ಎಂಬುದನ್ನು ಸಾಭೀತುಪಡಿಸಿ ಅರಣ್ಯ ಜಮೀನನ್ನು ಉಳಿಸಬೇಕು ಇಲ್ಲವೇ ಬಡ ರೈತರ ಭೂಮಿಯನ್ನು ವಾಪಸ್ ನೀಡುವ ಹೋರಾಟಕ್ಕೆ ಚಾಲನೆ ನೀಡುವ ಎಚ್ಚರಿಕೆಯೊಂದಿಗೆ ಮನವಿ ನೀಡಿ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ವಲಯ ಅರಣ್ಯಾಧಿಕಾರಿ ರವಿಕೀರ್ತಿ ಅರಣ್ಯ ಭೂಮಿಯನ್ನು ಯಾರೇ ಒತ್ತುವರಿ ಮಾಡಿಕೊಂಡಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ಶೀಘ್ರದಲ್ಲಿಯೇ ಮಾಜಿ ಶಾಸಕರ ಅರಣ್ಯ ಒತ್ತುವರಿ ತೆರೆವುಗೊಳಿಸುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ಆಲವಾಟಿ ಶಿವ, ದ್ಯಾವಂಡಹಳ್ಳಿ ರಾಜೇಂದ್ರ ರೆಡ್ಡಿ, ಸಹದೇವಣ್ಣ, ಶಪಿ, ತಿಮ್ಮಣ್ಣ, ಗೀರೀಶ್ ಮುಂತಾದವರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

8 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

19 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

20 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

21 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

22 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago