Categories: ಕೋಲಾರ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಒತ್ತುವರಿ ಮಾಡಿದ ಅರಣ್ಯ ಭೂಮಿ ವಶಕ್ಕೆ ಪಡೆಯಲು ರೈತ ಸಂಘ ಮನವಿ

ಕೋಲಾರ: ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್‌ರವರ ಜಿಗಲಕುಂಟೆ ಅರಣ್ಯ ಸರ್ವೇ ನಂ.1 ಮತ್ತು 2 ರಲ್ಲಿ 61 ಎಕರೆ ಸರ್ವೇ ಜಮೀನನ್ನು ಒತ್ತುವರಿಯಾಗಿರುವುದನ್ನು ತೆರೆವುಗೊಳಿಸಿ ಕಾನೂನಿನಲ್ಲಿ ಜನಸಾಮಾನ್ಯರಿಗೂ ರಾಜಕಾರಣಿಗಳಿಗೂ ಒಂದೇ ಕಾನೂನು ಎಂಬುದನ್ನು ಸಾಬೀತು ಪಡಿಸಬೇಕೆಂದು ರೈತ ಸಂಘದಿಂದ ವಲಯ ಅರಣ್ಯಾಧಿಕಾರಿ ರವಿಕೀರ್ತಿ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜ್‌ಗೌಡ ಮಾತನಾಡಿ ಅರಣ್ಯ ಭೂಮಿಯನ್ನು ಉಳಿಸಲು ಮುಂದಾಗಿರುವ ಅರಣ್ಯ ಅಧಿಕಾರಿಗಳಿಗೆ ಅರಣ್ಯ ಸಚಿವರು ಹೆಚ್ಚಿನ ಭದ್ರತೆ ನೀಡಿ ಒತ್ತುವರಿ ಕಾರ್ಯಾಚರಣೆ ಮುಂದುವರೆಸಲು ಆದೇಶ ಮಾಡುವ ಜೊತೆಗೆ ತಾಂತ್ರಿಕ ದೋಷದ ನೆಪದಲ್ಲಿ ಸರ್ವೇ ಸ್ಥಗಿತಗೊಳಿಸುವ ಮೂಲಕ ಸಾರ್ವಜನಿಕರ ಬಡ ರೈತರು ಶಾಪ ಹಾಕುವ ಮೊದಲು ಬಲಾಡ್ಯರ ಭೂ ಒತ್ತುವರಿ ತೆರೆವುಗೊಳಿಸಬೇಕೆಂದು ಸಲಹೆ ನೀಡಿದರು.

ಹತ್ತಾರು ವರ್ಷಗಳ ಹಿಂದೆ ರಾಜಕೀಯ ಬಲದಿಂದ ಕಾನೂನು ಬಾಹಿರವಾಗಿ ಒಂದೊಂದು ಕುಟುಂಬಕ್ಕೆ 5 ರಿಂದ 100 ಎಕರೆ ವರೆಗೂ ಅರಣ್ಯ ಭೂಮಿಯನ್ನು ಮಂಜೂರು ಮಾಡುವ ಮುಖಾಂತರ ಕೋಟಿ ಕೋಟಿ ಲಂಚದ ವಹಿವಾಟು ನಡೆಯುವ ಜೊತೆಗೆ ಅರಣ್ಯ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ನೂರಾರು ಕೋಟಿ ಬ್ಯಾಂಕ್ ಸಾಲ ಪಡೆದಿರುವ ಭೂಗಳ್ಳರ ವಿರುದ್ದ ಅರಣ್ಯ ಅಧಿಕಾರಿಗಳ ದೈರ್ಯತೋರಿ ಸಿಂಹಸ್ವಪ್ನವಾಗಿ ಭೂಗಳ್ಳರ ನಿದ್ದೆಗೆಡಿಸುವಂತೆ ಪ್ರಭಾವಿ ರಾಜಕಾರಣಿಗಳ ಒತ್ತುವರಿ ಅರಣ್ಯ ಭೂಮಿಯನ್ನು ತೆರೆವುಗೊಳಿಸಬೇಕೆಂದು ಒತ್ತಾಯಿಸಿದರು.

ತಾಲ್ಲೂಕಾದ್ಯಕ್ಷ ತರ‍್ನಹಳ್ಳಿ ಆಂಜಿನಪ್ಪ ಮಾತನಾಡಿ ಬಡವರ ಬದುಕನ್ನು ಬೀದಿಗೆ ತಳ್ಳಿ 10 ಸಾವಿರ ಕೋಟಿ ಅರಣ್ಯ ಆಸ್ತಿ ಉಳಿಸಿದ್ದೇವೆ ಎಂದು ಹೇಳುವುದು ಸಾಧನೆ ಅಲ್ಲ ನೂರಾರು ಎಕರೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಬಲಾಡ್ಯ ಭೂಗಳ್ಳರ ಒತ್ತುವರಿ ತೆರೆವುಗೊಳಿಸಿದಾಗ ಮಾತ್ರ ಅರಣ್ಯಧಿಕಾರಿಗಳ ಸಾಧನೆ ಎಂದು ತೋರಿಸಬಹುದೆಂದು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಒಂದು ಎಕರೆಯಿಂದ 4 ಎಕರೆಯವರೆಗೆ ಕಾನೂನು ಬದ್ದವಾಗಿ ಮಂಜೂರಾಗಿದ್ದರೆ ಅಂತಹವರನ್ನು ರೈತರು ಎಂದು ಪರಿಗಣಿಸಿ ಸರ್ಕಾರದ ಮಟ್ಟದಲ್ಲಿ ತನಿಖೆ ಮಾಡಿ ನ್ಯಾಯ ಕೊಡಿಸಿಕೊಳ್ಳಲು ನಮ್ಮ ಬೆಂಬಲವಿದೆ. ಆದರೆ ಒಂದೇ ಕುಟುಂಬಕ್ಕೆ 10 ರಿಂದ 80 ಎಕರೆ ಯವರೆಗೆ ಮಂಜೂರಾತಿ ನಕಲಿ ಸಾಗುವಳಿಗಳನ್ನು ಸೃಷ್ಠಿಸಿಕೊಂಡು ಅರಣ್ಯ ಭೂಮಿಗೆ ಬ್ಯಾಂಕ್‌ಗಳಲ್ಲಿ ನೂರಾರು ಕೋಟಿ ಕೋಳಿ ಪಾರಂ ಮತ್ತಿತರ ಸಾಲಗಳನ್ನು ಪಡೆದುಕೊಂಡಿರುವವರು ಸಣ್ಣ ರೈತರೇ ಅಮಾಯಕ ರೈತರ ಹೆಸರಿನಲ್ಲಿ ಅರಣ್ಯ ಭೂಮಿಯನ್ನು ಕಬಳಿಕೆ ಮಾಡಿರುವ ಶ್ರೀಮಂತ ಭೂಗಳ್ಳರಲ್ಲ ಜಮೀನನ್ನು ಕೂಡಲೇ ವಶಕ್ಕೆ ಪಡೆಯದ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಸಾವಿರಾರು ಎಕರೆ ಅರಣ್ಯ ಭೂಮಿಯನ್ನು ತೆರವುಗೊಳಿಸಲು ಸರ್ವೇ ಮಾಡಿಸಬೇಕು. ಜೊತೆಗೆ ಒತ್ತುವರಿದಾರರಿಗೆ ಸಹಕರಿಸಿರುವ ಕಂದಾಯ, ಸರ್ವೇ, ವಿರುದ್ಧ ಕಾನೂನು ಕ್ರಮಕೈಗೊಂಡು ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ದಾಖಲು ಮಾಡಿ ಮಾಜಿ ಶಾಸಕರು ಪ್ರಭಾವಿ ರಾಜಕಾರಣಿಗಳಾದ ಕೆ.ಆರ್ ರಮೇಶ್ ಕುಮಾರ್‌ರವರ ಜಿಗಲಕುಂಟೆ ಅರಣ್ಯ ಸರ್ವೇ ನಂ.1 ಮತ್ತು 2 ರಲ್ಲಿ 61 ಎಕರೆ ಸರ್ವೇ ಮಾಡಿ ಒತ್ತುವರಿ ತೆರೆವುಗೊಳಿಸಿ ಕಾನೂನಿನಲ್ಲಿ ಜನಸಾಮಾನ್ಯರಿಗೂ ರಾಜಕಾರಣಿಗಳಿಗೂ ಒಂದೇ ಕಾನೂನು ಎಂಬುದನ್ನು ಸಾಭೀತುಪಡಿಸಿ ಅರಣ್ಯ ಜಮೀನನ್ನು ಉಳಿಸಬೇಕು ಇಲ್ಲವೇ ಬಡ ರೈತರ ಭೂಮಿಯನ್ನು ವಾಪಸ್ ನೀಡುವ ಹೋರಾಟಕ್ಕೆ ಚಾಲನೆ ನೀಡುವ ಎಚ್ಚರಿಕೆಯೊಂದಿಗೆ ಮನವಿ ನೀಡಿ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ವಲಯ ಅರಣ್ಯಾಧಿಕಾರಿ ರವಿಕೀರ್ತಿ ಅರಣ್ಯ ಭೂಮಿಯನ್ನು ಯಾರೇ ಒತ್ತುವರಿ ಮಾಡಿಕೊಂಡಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ಶೀಘ್ರದಲ್ಲಿಯೇ ಮಾಜಿ ಶಾಸಕರ ಅರಣ್ಯ ಒತ್ತುವರಿ ತೆರೆವುಗೊಳಿಸುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ಆಲವಾಟಿ ಶಿವ, ದ್ಯಾವಂಡಹಳ್ಳಿ ರಾಜೇಂದ್ರ ರೆಡ್ಡಿ, ಸಹದೇವಣ್ಣ, ಶಪಿ, ತಿಮ್ಮಣ್ಣ, ಗೀರೀಶ್ ಮುಂತಾದವರಿದ್ದರು.

Ramesh Babu

Journalist

Recent Posts

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

2 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

4 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

8 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

11 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

2 days ago