ಮಾಟ-ಮಂತ್ರ: ಬೆಚ್ಚಿಬಿದ್ದ ಬೈರಾಪುರ ತಾಂಡ: ವಾಮಾಚಾರದಿಂದ ಗ್ರಾಮದಲ್ಲಿ ಮನೆ ಮಾಡಿದ ಆತಂಕ

ಅದೆಷ್ಟೇ ಆಧುನಿಕತೆ ಮುಂದುವರೆದರೂ, ಜನ ಅದೆಷ್ಟೇ ಉನ್ನತ ವಿದ್ಯಾಭ್ಯಾಸ ಮಾಡಿದರೂ, ಅದೆಷ್ಟೇ ವಿದ್ಯೆ ಬುದ್ದಿ ಇದ್ದರೂ….. ಮೂಢನಂಬಿಕೆ, ಮಾಟ-ಮಂತ್ರದಂತಹ ಘಟನೆಗಳು ಇನ್ನೂ ಜೀವಂತವಾಗಿವೆ ಎನ್ನುವುದಕ್ಕೆ ದೊಡ್ಡಬಳ್ಳಾಪುರ ತಾಲೂಕಿನ ಬೈರಾಪುರ ತಾಂಡದಲ್ಲಿ ನಡೆದ ಮಾಟ- ಮಂತ್ರವೇ ಸಾಕ್ಷಿ ಎನ್ನಬಹುದು. ಅಮಾವಾಸ್ಯೆ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಮುನಿಶಾಮ ನಾಯ್ಕ್ ಎಂಬವರ ಮನೆ ಮುಂದೆ ವಾಮಾಚಾರ ಮಾಡಿರುವುದು ಕಂಡುಬಂದಿದೆ.

ಮನೆಯವರು ಬೆಳಗ್ಗೆದ್ದು ನೋಡಿದಾಗ ಮನೆ ಮುಂದೆ ಅಕ್ಕಿಕಾಳು, ನಿಂಬೆಹಣ್ಣು, ಕುಂಕುಮ ಸೇರಿದಂತೆ ಇತರೆ ವಸ್ತುಗಳು ಪತ್ತೆಯಾಗಿವೆ. ಇದನ್ನು ಕಂಡು ಮನೆಯವರು ಮತ್ತು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಈ ಕುರಿತು ಪಬ್ಲಿಕ್ ಮಿರ್ಚಿ ಜೊತೆ ಮುನಿಶಾಮ ನಾಯ್ಕ್ ಪುತ್ರ ಮಂಜುನಾಥ್  ಮಾತನಾಡಿ, ಬೈರಾಪುರ ತಾಂಡದಲ್ಲಿ ವಯಸ್ಸಾದ ನಮ್ಮ ಅಪ್ಪ-ಅಮ್ಮ ಇಬ್ಬರೇ ವಾಸವಾಗಿದ್ದಾರೆ. ಯಾರೋ ದುಷ್ಕರ್ಮಿಗಳು ನಮ್ಮನ್ನು ವೈಯಕ್ತಿವಾಗಿ ಗುರಿಯಾಗಿಸಿಕೊಂಡು ನಮ್ಮ ಮನೆ ಬಳಿ ನಿಂಬೆಹಣ್ಣು, ತಾಯತ, ಅರಿಶಿಣ, ಕುಂಕುಮ, ಹೂ, ಮೂಳೆ, ರಕ್ತವನ್ನು ಚೆಲ್ಲಿ ಮಾಟ ಮಂತ್ರ ಮಾಡಿ ಮಾನಸಿಕವಾಗಿ ನಮಗೆ ತೊಂದರೆ ನೀಡುತ್ತಿದ್ದಾರೆ ಎಂದು ಹೇಳಿದರು.

ಇತ್ತೀಚೆಗೆ ಗ್ರಾಮದಲ್ಲಿ ನಡೆಯುತ್ತಿದ್ದ ಕೆಲವೊಂದು ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಧ್ವನಿಎತ್ತಿ ತಪ್ಪಿತಸ್ಥರಿಗೆ ಶಿಕ್ಷೆಗೆ ಗುರಿಪಡಿಸಿದ್ದೆ. ಅಂದಿನಿಂದ ಈ ರೀತಿಯಾದಂತಹ ಕೃತ್ಯಗಳು ನಮಗೆ ಕಂಡುಬರುತ್ತಿವೆ. ನಾವು ಯಾರಿಗೂ ಯಾವುದೇ ರೀತಿಯ ಮೋಸ, ಅನ್ಯಾಯ ಮಾಡಿಲ್ಲ. ನಮ್ಮ ಪೋಷಕರಿಗೆ ವಯಸ್ಸಾಗಿದೆ. ಇಬ್ಬರೇ ಊರಲ್ಲಿ ವಾಸವಾಗಿದ್ದಾರೆ. ನಾವು ನಗರದಲ್ಲಿ‌ ಇದ್ದೇವೆ. ಅವರು ಬೆಳಗ್ಗೆ ಎದ್ದು ಬಾಗಿಲು‌ ತೆರೆದು ನೋಡಿದರೆ‌ ಮನೆ ಮುಂದೆ‌ ಎಲ್ಲೆಂದರಲ್ಲಿ ನಿಂಬೆ ಹಣ್ಣು ತಾಯತ, ಅರಿಶಿಣ, ಕುಂಕುಮ, ಹೂ, ಮೂಳೆ‌ ಸೇರಿದಂತೆ‌ ಇತರೆ ವಸ್ತುಗಳು ಕಾಣಸಿಗುತ್ತವೆ. ಇವುಗಳನ್ನು ನೋಡಿ ನಮ್ಮ ಅಪ್ಪ ಅಮ್ಮ ಭಯಭೀತರಾಗಿದ್ದಾರೆ. ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದರು.

ನಮ್ಮ ಮನೆ‌ ಮುಂದೆ‌ ಜೊತೆಗೆ‌ ಊರಿನ ಕೆಲ ಮನೆಗಳ ಮುಂದೆಯೂ‌ ಸಹ‌‌ ಇದೇ ರೀತಿ‌‌ ಮಾವಾಚಾರ ಕೃತ್ಯಗಳು ಕಂಡುಬರುತ್ತಿವೆ. ಇದರಿಂದ‌ ಗ್ರಾಮಸ್ಥರಲ್ಲಿ ಆತಂಕ‌ ಮನೆ ಮಾಡಿದೆ. ಗ್ರಾಮದಲ್ಲಿ ಜನರು ಬಹಳ ಅನ್ಯೋನ್ಯವಾಗಿದ್ದರು. ಇದೀಗ ಈ ಘಟನೆಗಳಿಂದ ಯಾರನ್ನು ನಂಬದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ನಮ್ಮ ಮನೆ ಮುಂದೆ ವಾಮಾಚಾರ ಇದೇ ಮೊದಲಲ್ಲ. ಮೊದಲಿಗೆ ಇದೀರೀತಿ ಮಾಟ ಮಂತ್ರ ನಡೆದಿತ್ತು. ಇದರಿಂದ ನನ್ನ ಪುಟ್ಟ‌ಕಂದಮ್ಮನನ್ನು ಕಳೆದುಕೊಂಡೆ. ಮಗನನ್ನು ಕಳೆದುಕೊಂಡ ದುಖದಲ್ಲಿದ್ದೇನೆ. ಪದೇ ಪದೇ ಮಾಟ‌ಮಂತ್ರ ನಡೆಯುತ್ತಲೇ ಇದೆ. ಏನಾದರು ದ್ವೇಷ, ಮಮಸ್ಥಾಪವಿದ್ದರೆ‌‌ ಕೂತು ಮಾತಾಡಿ ಬಗೆಹರಿಸಿಕೊಳ್ಳಬೇಕು ಅದನ್ನು ಬಿಟ್ಟು ಪರೋಕ್ಷವಾಗಿ ಈ ರೀತಿ ಮಾಡುವುದು ಎಷ್ಟರ‌ ಮಟ್ಟಿಗೆ ಸರಿ.

ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ಆದಷ್ಟು ಬೇಗ ವಾಮಾಚಾರಿಗಳನ್ನು ಪತ್ತೆಹಚ್ಚಿ ನೆಮ್ಮದಿ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದರು….

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

13 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

14 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

15 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

17 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

1 day ago