ಅದೆಷ್ಟೇ ಆಧುನಿಕತೆ ಮುಂದುವರೆದರೂ, ಜನ ಅದೆಷ್ಟೇ ಉನ್ನತ ವಿದ್ಯಾಭ್ಯಾಸ ಮಾಡಿದರೂ, ಅದೆಷ್ಟೇ ವಿದ್ಯೆ ಬುದ್ದಿ ಇದ್ದರೂ….. ಮೂಢನಂಬಿಕೆ, ಮಾಟ-ಮಂತ್ರದಂತಹ ಘಟನೆಗಳು ಇನ್ನೂ ಜೀವಂತವಾಗಿವೆ ಎನ್ನುವುದಕ್ಕೆ ದೊಡ್ಡಬಳ್ಳಾಪುರ ತಾಲೂಕಿನ ಬೈರಾಪುರ ತಾಂಡದಲ್ಲಿ ನಡೆದ ಮಾಟ- ಮಂತ್ರವೇ ಸಾಕ್ಷಿ ಎನ್ನಬಹುದು. ಅಮಾವಾಸ್ಯೆ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಮುನಿಶಾಮ ನಾಯ್ಕ್ ಎಂಬವರ ಮನೆ ಮುಂದೆ ವಾಮಾಚಾರ ಮಾಡಿರುವುದು ಕಂಡುಬಂದಿದೆ.
ಮನೆಯವರು ಬೆಳಗ್ಗೆದ್ದು ನೋಡಿದಾಗ ಮನೆ ಮುಂದೆ ಅಕ್ಕಿಕಾಳು, ನಿಂಬೆಹಣ್ಣು, ಕುಂಕುಮ ಸೇರಿದಂತೆ ಇತರೆ ವಸ್ತುಗಳು ಪತ್ತೆಯಾಗಿವೆ. ಇದನ್ನು ಕಂಡು ಮನೆಯವರು ಮತ್ತು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.
ಇತ್ತೀಚೆಗೆ ಗ್ರಾಮದಲ್ಲಿ ನಡೆಯುತ್ತಿದ್ದ ಕೆಲವೊಂದು ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಧ್ವನಿಎತ್ತಿ ತಪ್ಪಿತಸ್ಥರಿಗೆ ಶಿಕ್ಷೆಗೆ ಗುರಿಪಡಿಸಿದ್ದೆ. ಅಂದಿನಿಂದ ಈ ರೀತಿಯಾದಂತಹ ಕೃತ್ಯಗಳು ನಮಗೆ ಕಂಡುಬರುತ್ತಿವೆ. ನಾವು ಯಾರಿಗೂ ಯಾವುದೇ ರೀತಿಯ ಮೋಸ, ಅನ್ಯಾಯ ಮಾಡಿಲ್ಲ. ನಮ್ಮ ಪೋಷಕರಿಗೆ ವಯಸ್ಸಾಗಿದೆ. ಇಬ್ಬರೇ ಊರಲ್ಲಿ ವಾಸವಾಗಿದ್ದಾರೆ. ನಾವು ನಗರದಲ್ಲಿ ಇದ್ದೇವೆ. ಅವರು ಬೆಳಗ್ಗೆ ಎದ್ದು ಬಾಗಿಲು ತೆರೆದು ನೋಡಿದರೆ ಮನೆ ಮುಂದೆ ಎಲ್ಲೆಂದರಲ್ಲಿ ನಿಂಬೆ ಹಣ್ಣು ತಾಯತ, ಅರಿಶಿಣ, ಕುಂಕುಮ, ಹೂ, ಮೂಳೆ ಸೇರಿದಂತೆ ಇತರೆ ವಸ್ತುಗಳು ಕಾಣಸಿಗುತ್ತವೆ. ಇವುಗಳನ್ನು ನೋಡಿ ನಮ್ಮ ಅಪ್ಪ ಅಮ್ಮ ಭಯಭೀತರಾಗಿದ್ದಾರೆ. ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದರು.
ನಮ್ಮ ಮನೆ ಮುಂದೆ ಜೊತೆಗೆ ಊರಿನ ಕೆಲ ಮನೆಗಳ ಮುಂದೆಯೂ ಸಹ ಇದೇ ರೀತಿ ಮಾವಾಚಾರ ಕೃತ್ಯಗಳು ಕಂಡುಬರುತ್ತಿವೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದಲ್ಲಿ ಜನರು ಬಹಳ ಅನ್ಯೋನ್ಯವಾಗಿದ್ದರು. ಇದೀಗ ಈ ಘಟನೆಗಳಿಂದ ಯಾರನ್ನು ನಂಬದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ನಮ್ಮ ಮನೆ ಮುಂದೆ ವಾಮಾಚಾರ ಇದೇ ಮೊದಲಲ್ಲ. ಮೊದಲಿಗೆ ಇದೀರೀತಿ ಮಾಟ ಮಂತ್ರ ನಡೆದಿತ್ತು. ಇದರಿಂದ ನನ್ನ ಪುಟ್ಟಕಂದಮ್ಮನನ್ನು ಕಳೆದುಕೊಂಡೆ. ಮಗನನ್ನು ಕಳೆದುಕೊಂಡ ದುಖದಲ್ಲಿದ್ದೇನೆ. ಪದೇ ಪದೇ ಮಾಟಮಂತ್ರ ನಡೆಯುತ್ತಲೇ ಇದೆ. ಏನಾದರು ದ್ವೇಷ, ಮಮಸ್ಥಾಪವಿದ್ದರೆ ಕೂತು ಮಾತಾಡಿ ಬಗೆಹರಿಸಿಕೊಳ್ಳಬೇಕು ಅದನ್ನು ಬಿಟ್ಟು ಪರೋಕ್ಷವಾಗಿ ಈ ರೀತಿ ಮಾಡುವುದು ಎಷ್ಟರ ಮಟ್ಟಿಗೆ ಸರಿ.
ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ಆದಷ್ಟು ಬೇಗ ವಾಮಾಚಾರಿಗಳನ್ನು ಪತ್ತೆಹಚ್ಚಿ ನೆಮ್ಮದಿ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದರು….
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…