ಮಾಟ-ಮಂತ್ರ: ಬೆಚ್ಚಿಬಿದ್ದ ಬೈರಾಪುರ ತಾಂಡ: ವಾಮಾಚಾರದಿಂದ ಗ್ರಾಮದಲ್ಲಿ ಮನೆ ಮಾಡಿದ ಆತಂಕ

ಅದೆಷ್ಟೇ ಆಧುನಿಕತೆ ಮುಂದುವರೆದರೂ, ಜನ ಅದೆಷ್ಟೇ ಉನ್ನತ ವಿದ್ಯಾಭ್ಯಾಸ ಮಾಡಿದರೂ, ಅದೆಷ್ಟೇ ವಿದ್ಯೆ ಬುದ್ದಿ ಇದ್ದರೂ….. ಮೂಢನಂಬಿಕೆ, ಮಾಟ-ಮಂತ್ರದಂತಹ ಘಟನೆಗಳು ಇನ್ನೂ ಜೀವಂತವಾಗಿವೆ ಎನ್ನುವುದಕ್ಕೆ ದೊಡ್ಡಬಳ್ಳಾಪುರ ತಾಲೂಕಿನ ಬೈರಾಪುರ ತಾಂಡದಲ್ಲಿ ನಡೆದ ಮಾಟ- ಮಂತ್ರವೇ ಸಾಕ್ಷಿ ಎನ್ನಬಹುದು. ಅಮಾವಾಸ್ಯೆ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಮುನಿಶಾಮ ನಾಯ್ಕ್ ಎಂಬವರ ಮನೆ ಮುಂದೆ ವಾಮಾಚಾರ ಮಾಡಿರುವುದು ಕಂಡುಬಂದಿದೆ.

ಮನೆಯವರು ಬೆಳಗ್ಗೆದ್ದು ನೋಡಿದಾಗ ಮನೆ ಮುಂದೆ ಅಕ್ಕಿಕಾಳು, ನಿಂಬೆಹಣ್ಣು, ಕುಂಕುಮ ಸೇರಿದಂತೆ ಇತರೆ ವಸ್ತುಗಳು ಪತ್ತೆಯಾಗಿವೆ. ಇದನ್ನು ಕಂಡು ಮನೆಯವರು ಮತ್ತು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಈ ಕುರಿತು ಪಬ್ಲಿಕ್ ಮಿರ್ಚಿ ಜೊತೆ ಮುನಿಶಾಮ ನಾಯ್ಕ್ ಪುತ್ರ ಮಂಜುನಾಥ್  ಮಾತನಾಡಿ, ಬೈರಾಪುರ ತಾಂಡದಲ್ಲಿ ವಯಸ್ಸಾದ ನಮ್ಮ ಅಪ್ಪ-ಅಮ್ಮ ಇಬ್ಬರೇ ವಾಸವಾಗಿದ್ದಾರೆ. ಯಾರೋ ದುಷ್ಕರ್ಮಿಗಳು ನಮ್ಮನ್ನು ವೈಯಕ್ತಿವಾಗಿ ಗುರಿಯಾಗಿಸಿಕೊಂಡು ನಮ್ಮ ಮನೆ ಬಳಿ ನಿಂಬೆಹಣ್ಣು, ತಾಯತ, ಅರಿಶಿಣ, ಕುಂಕುಮ, ಹೂ, ಮೂಳೆ, ರಕ್ತವನ್ನು ಚೆಲ್ಲಿ ಮಾಟ ಮಂತ್ರ ಮಾಡಿ ಮಾನಸಿಕವಾಗಿ ನಮಗೆ ತೊಂದರೆ ನೀಡುತ್ತಿದ್ದಾರೆ ಎಂದು ಹೇಳಿದರು.

ಇತ್ತೀಚೆಗೆ ಗ್ರಾಮದಲ್ಲಿ ನಡೆಯುತ್ತಿದ್ದ ಕೆಲವೊಂದು ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಧ್ವನಿಎತ್ತಿ ತಪ್ಪಿತಸ್ಥರಿಗೆ ಶಿಕ್ಷೆಗೆ ಗುರಿಪಡಿಸಿದ್ದೆ. ಅಂದಿನಿಂದ ಈ ರೀತಿಯಾದಂತಹ ಕೃತ್ಯಗಳು ನಮಗೆ ಕಂಡುಬರುತ್ತಿವೆ. ನಾವು ಯಾರಿಗೂ ಯಾವುದೇ ರೀತಿಯ ಮೋಸ, ಅನ್ಯಾಯ ಮಾಡಿಲ್ಲ. ನಮ್ಮ ಪೋಷಕರಿಗೆ ವಯಸ್ಸಾಗಿದೆ. ಇಬ್ಬರೇ ಊರಲ್ಲಿ ವಾಸವಾಗಿದ್ದಾರೆ. ನಾವು ನಗರದಲ್ಲಿ‌ ಇದ್ದೇವೆ. ಅವರು ಬೆಳಗ್ಗೆ ಎದ್ದು ಬಾಗಿಲು‌ ತೆರೆದು ನೋಡಿದರೆ‌ ಮನೆ ಮುಂದೆ‌ ಎಲ್ಲೆಂದರಲ್ಲಿ ನಿಂಬೆ ಹಣ್ಣು ತಾಯತ, ಅರಿಶಿಣ, ಕುಂಕುಮ, ಹೂ, ಮೂಳೆ‌ ಸೇರಿದಂತೆ‌ ಇತರೆ ವಸ್ತುಗಳು ಕಾಣಸಿಗುತ್ತವೆ. ಇವುಗಳನ್ನು ನೋಡಿ ನಮ್ಮ ಅಪ್ಪ ಅಮ್ಮ ಭಯಭೀತರಾಗಿದ್ದಾರೆ. ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದರು.

ನಮ್ಮ ಮನೆ‌ ಮುಂದೆ‌ ಜೊತೆಗೆ‌ ಊರಿನ ಕೆಲ ಮನೆಗಳ ಮುಂದೆಯೂ‌ ಸಹ‌‌ ಇದೇ ರೀತಿ‌‌ ಮಾವಾಚಾರ ಕೃತ್ಯಗಳು ಕಂಡುಬರುತ್ತಿವೆ. ಇದರಿಂದ‌ ಗ್ರಾಮಸ್ಥರಲ್ಲಿ ಆತಂಕ‌ ಮನೆ ಮಾಡಿದೆ. ಗ್ರಾಮದಲ್ಲಿ ಜನರು ಬಹಳ ಅನ್ಯೋನ್ಯವಾಗಿದ್ದರು. ಇದೀಗ ಈ ಘಟನೆಗಳಿಂದ ಯಾರನ್ನು ನಂಬದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ನಮ್ಮ ಮನೆ ಮುಂದೆ ವಾಮಾಚಾರ ಇದೇ ಮೊದಲಲ್ಲ. ಮೊದಲಿಗೆ ಇದೀರೀತಿ ಮಾಟ ಮಂತ್ರ ನಡೆದಿತ್ತು. ಇದರಿಂದ ನನ್ನ ಪುಟ್ಟ‌ಕಂದಮ್ಮನನ್ನು ಕಳೆದುಕೊಂಡೆ. ಮಗನನ್ನು ಕಳೆದುಕೊಂಡ ದುಖದಲ್ಲಿದ್ದೇನೆ. ಪದೇ ಪದೇ ಮಾಟ‌ಮಂತ್ರ ನಡೆಯುತ್ತಲೇ ಇದೆ. ಏನಾದರು ದ್ವೇಷ, ಮಮಸ್ಥಾಪವಿದ್ದರೆ‌‌ ಕೂತು ಮಾತಾಡಿ ಬಗೆಹರಿಸಿಕೊಳ್ಳಬೇಕು ಅದನ್ನು ಬಿಟ್ಟು ಪರೋಕ್ಷವಾಗಿ ಈ ರೀತಿ ಮಾಡುವುದು ಎಷ್ಟರ‌ ಮಟ್ಟಿಗೆ ಸರಿ.

ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ಆದಷ್ಟು ಬೇಗ ವಾಮಾಚಾರಿಗಳನ್ನು ಪತ್ತೆಹಚ್ಚಿ ನೆಮ್ಮದಿ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದರು….

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

13 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

24 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

24 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

2 days ago