ಮಾಟ-ಮಂತ್ರ: ಬೆಚ್ಚಿಬಿದ್ದ ಬೈರಾಪುರ ತಾಂಡ: ವಾಮಾಚಾರದಿಂದ ಗ್ರಾಮದಲ್ಲಿ ಮನೆ ಮಾಡಿದ ಆತಂಕ

ಅದೆಷ್ಟೇ ಆಧುನಿಕತೆ ಮುಂದುವರೆದರೂ, ಜನ ಅದೆಷ್ಟೇ ಉನ್ನತ ವಿದ್ಯಾಭ್ಯಾಸ ಮಾಡಿದರೂ, ಅದೆಷ್ಟೇ ವಿದ್ಯೆ ಬುದ್ದಿ ಇದ್ದರೂ….. ಮೂಢನಂಬಿಕೆ, ಮಾಟ-ಮಂತ್ರದಂತಹ ಘಟನೆಗಳು ಇನ್ನೂ ಜೀವಂತವಾಗಿವೆ ಎನ್ನುವುದಕ್ಕೆ ದೊಡ್ಡಬಳ್ಳಾಪುರ ತಾಲೂಕಿನ ಬೈರಾಪುರ ತಾಂಡದಲ್ಲಿ ನಡೆದ ಮಾಟ- ಮಂತ್ರವೇ ಸಾಕ್ಷಿ ಎನ್ನಬಹುದು. ಅಮಾವಾಸ್ಯೆ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಮುನಿಶಾಮ ನಾಯ್ಕ್ ಎಂಬವರ ಮನೆ ಮುಂದೆ ವಾಮಾಚಾರ ಮಾಡಿರುವುದು ಕಂಡುಬಂದಿದೆ.

ಮನೆಯವರು ಬೆಳಗ್ಗೆದ್ದು ನೋಡಿದಾಗ ಮನೆ ಮುಂದೆ ಅಕ್ಕಿಕಾಳು, ನಿಂಬೆಹಣ್ಣು, ಕುಂಕುಮ ಸೇರಿದಂತೆ ಇತರೆ ವಸ್ತುಗಳು ಪತ್ತೆಯಾಗಿವೆ. ಇದನ್ನು ಕಂಡು ಮನೆಯವರು ಮತ್ತು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಈ ಕುರಿತು ಪಬ್ಲಿಕ್ ಮಿರ್ಚಿ ಜೊತೆ ಮುನಿಶಾಮ ನಾಯ್ಕ್ ಪುತ್ರ ಮಂಜುನಾಥ್  ಮಾತನಾಡಿ, ಬೈರಾಪುರ ತಾಂಡದಲ್ಲಿ ವಯಸ್ಸಾದ ನಮ್ಮ ಅಪ್ಪ-ಅಮ್ಮ ಇಬ್ಬರೇ ವಾಸವಾಗಿದ್ದಾರೆ. ಯಾರೋ ದುಷ್ಕರ್ಮಿಗಳು ನಮ್ಮನ್ನು ವೈಯಕ್ತಿವಾಗಿ ಗುರಿಯಾಗಿಸಿಕೊಂಡು ನಮ್ಮ ಮನೆ ಬಳಿ ನಿಂಬೆಹಣ್ಣು, ತಾಯತ, ಅರಿಶಿಣ, ಕುಂಕುಮ, ಹೂ, ಮೂಳೆ, ರಕ್ತವನ್ನು ಚೆಲ್ಲಿ ಮಾಟ ಮಂತ್ರ ಮಾಡಿ ಮಾನಸಿಕವಾಗಿ ನಮಗೆ ತೊಂದರೆ ನೀಡುತ್ತಿದ್ದಾರೆ ಎಂದು ಹೇಳಿದರು.

ಇತ್ತೀಚೆಗೆ ಗ್ರಾಮದಲ್ಲಿ ನಡೆಯುತ್ತಿದ್ದ ಕೆಲವೊಂದು ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಧ್ವನಿಎತ್ತಿ ತಪ್ಪಿತಸ್ಥರಿಗೆ ಶಿಕ್ಷೆಗೆ ಗುರಿಪಡಿಸಿದ್ದೆ. ಅಂದಿನಿಂದ ಈ ರೀತಿಯಾದಂತಹ ಕೃತ್ಯಗಳು ನಮಗೆ ಕಂಡುಬರುತ್ತಿವೆ. ನಾವು ಯಾರಿಗೂ ಯಾವುದೇ ರೀತಿಯ ಮೋಸ, ಅನ್ಯಾಯ ಮಾಡಿಲ್ಲ. ನಮ್ಮ ಪೋಷಕರಿಗೆ ವಯಸ್ಸಾಗಿದೆ. ಇಬ್ಬರೇ ಊರಲ್ಲಿ ವಾಸವಾಗಿದ್ದಾರೆ. ನಾವು ನಗರದಲ್ಲಿ‌ ಇದ್ದೇವೆ. ಅವರು ಬೆಳಗ್ಗೆ ಎದ್ದು ಬಾಗಿಲು‌ ತೆರೆದು ನೋಡಿದರೆ‌ ಮನೆ ಮುಂದೆ‌ ಎಲ್ಲೆಂದರಲ್ಲಿ ನಿಂಬೆ ಹಣ್ಣು ತಾಯತ, ಅರಿಶಿಣ, ಕುಂಕುಮ, ಹೂ, ಮೂಳೆ‌ ಸೇರಿದಂತೆ‌ ಇತರೆ ವಸ್ತುಗಳು ಕಾಣಸಿಗುತ್ತವೆ. ಇವುಗಳನ್ನು ನೋಡಿ ನಮ್ಮ ಅಪ್ಪ ಅಮ್ಮ ಭಯಭೀತರಾಗಿದ್ದಾರೆ. ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದರು.

ನಮ್ಮ ಮನೆ‌ ಮುಂದೆ‌ ಜೊತೆಗೆ‌ ಊರಿನ ಕೆಲ ಮನೆಗಳ ಮುಂದೆಯೂ‌ ಸಹ‌‌ ಇದೇ ರೀತಿ‌‌ ಮಾವಾಚಾರ ಕೃತ್ಯಗಳು ಕಂಡುಬರುತ್ತಿವೆ. ಇದರಿಂದ‌ ಗ್ರಾಮಸ್ಥರಲ್ಲಿ ಆತಂಕ‌ ಮನೆ ಮಾಡಿದೆ. ಗ್ರಾಮದಲ್ಲಿ ಜನರು ಬಹಳ ಅನ್ಯೋನ್ಯವಾಗಿದ್ದರು. ಇದೀಗ ಈ ಘಟನೆಗಳಿಂದ ಯಾರನ್ನು ನಂಬದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ನಮ್ಮ ಮನೆ ಮುಂದೆ ವಾಮಾಚಾರ ಇದೇ ಮೊದಲಲ್ಲ. ಮೊದಲಿಗೆ ಇದೀರೀತಿ ಮಾಟ ಮಂತ್ರ ನಡೆದಿತ್ತು. ಇದರಿಂದ ನನ್ನ ಪುಟ್ಟ‌ಕಂದಮ್ಮನನ್ನು ಕಳೆದುಕೊಂಡೆ. ಮಗನನ್ನು ಕಳೆದುಕೊಂಡ ದುಖದಲ್ಲಿದ್ದೇನೆ. ಪದೇ ಪದೇ ಮಾಟ‌ಮಂತ್ರ ನಡೆಯುತ್ತಲೇ ಇದೆ. ಏನಾದರು ದ್ವೇಷ, ಮಮಸ್ಥಾಪವಿದ್ದರೆ‌‌ ಕೂತು ಮಾತಾಡಿ ಬಗೆಹರಿಸಿಕೊಳ್ಳಬೇಕು ಅದನ್ನು ಬಿಟ್ಟು ಪರೋಕ್ಷವಾಗಿ ಈ ರೀತಿ ಮಾಡುವುದು ಎಷ್ಟರ‌ ಮಟ್ಟಿಗೆ ಸರಿ.

ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ಆದಷ್ಟು ಬೇಗ ವಾಮಾಚಾರಿಗಳನ್ನು ಪತ್ತೆಹಚ್ಚಿ ನೆಮ್ಮದಿ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದರು….

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

2 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

6 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

8 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

19 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

20 hours ago