ಮಾತೃಭಾಷೆಗೆ ಹೆಚ್ಚು ಒತ್ತು ನೀಡಬೇಕು-ಎನ್.ಗಿರೀಶ್

ಮಾತೃಭಾಷೆಯ ಮೂಲಕ ಕಲಿಕೆಯನ್ನು ಪ್ರಾರಂಭಿಸಬೇಕು ಮಾತೃಭಾಷೆಯಲ್ಲಿ ಸ್ಪಷ್ಟವಾಗಿ ಓದು–ಬರಹ ಕಲಿಯುವ ಮಗುವಿಗೆ ಇನ್ನಷ್ಟು ಭಾಷೆ ಹಾಗೂ ವಿಷಯಗಳ ಕಲಿಕೆ ಸುಗಮವಾಗುತ್ತದೆ ಎಂದು ಉಪನ್ಯಾಸಕರಾದ ಎನ್.ಗಿರೀಶ್ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾತೃಭಾಷಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಬಾಲ್ಯದಿಂದಲೇ ಮೊದಲ ಭಾಷೆಯಾಗಿ ಮಕ್ಕಳಿಗೆ ಮಾತೃಭಾಷೆಯನ್ನು ಕಲಿಸಿದರೆ ಜೀವನದಲ್ಲಿ ತುಂಬಾ ಅನುಕೂಲಗಳಾಗುತ್ತವೆ, ಮಾತೃಭಾಷೆಯಿಂದಲೇ ಮಕ್ಕಳ ತೊದಲ ನುಡಿ, ಜೊತೆಗೆ ನಡೆ, ಅಭ್ಯಾಸಗಳು, ರೀತಿ-ನೀತಿ, ನಂಬಿಕೆಗಳು ಈ ಭಾಷೆಯಲ್ಲಿಯೇ ರೂಪುಗೊಳ್ಳುತ್ತಾ ಹೋಗುತ್ತವೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಹುಭಾಷೆ ಮತ್ತು ಬಹುಸಂಸ್ಕೃತಿಯ ಅಸ್ಮಿತೆಯನ್ನು ಉಳಿಸಲು ವಿಶ್ವ ಮಾತೃಭಾಷಾ ದಿನವನ್ನು ಆಚರಿಸಲಾಗುತ್ತಿದೆ, ಭಾವಜೀವಿಯಾದ ಮನುಷ್ಯ ಸಾಮಾಜಿಕ ಜೀವಿಯೂ ಹೌದು. ಭಾವನೆಗಳನ್ನು ಸಮಾಜದಲ್ಲಿನ ಇನ್ನಿತರರೊಂದಿಗೆ ಹಂಚಿಕೊಳ್ಳಲು ಸಂವಹನ ಮಾಡಲು ಸ್ಪಂದನದ ಅಗತ್ಯ ಇರಲೇಬೇಕು ಇದಕ್ಕೆ ಅಂದದ ಚಂದದ ಸೇತುವೆಯೇ ಕನ್ನಡ ಭಾಷೆ.

ಮನುಷ್ಯ ಎಷ್ಟೇ ಭಾಷೆ ಕಲಿತರೂ ಮೂಲ ಯೋಚನೆಗಳೆಲ್ಲ ರೂಪುಗೊಳ್ಳುವುದು, ಚಂದದ ಭಾವನೆಗಳು ಹುಟ್ಟಿಕೊಳ್ಳುವುದು ಅವು ಮಾತಿನ ಅನುಭೂತಿಗೆ ನಿಲುಕುವುದೆಲ್ಲ ಮಾತೃಭಾಷೆಯಲ್ಲಿಯೇ ಹಾಗಾಗಿ ತಾಯಿ ನುಡಿ ಎನ್ನುವುದು ಹೃದಯದ ಭಾಷೆ.

ಎಲ್ಲಾ ಭಾಷೆಯೂ ಸುಮಧುರವೇ, ಎಲ್ಲಾ ಅಮ್ಮಂದಿರೂ ಮಮತಾಮಯಿಗಳೇ ಆದರೂ ನಮಗೆ ನಮ್ಮಮ್ಮನ ಮಡಿಲೇ ವಿಶೇಷ. ಹಾಗೆಯೇ ಭಾಷೆಗಳು ಎಷ್ಟೇ ಇರಲಿ, ಹೃದಯದ ಭಾಷೆಗೆ ಅದರಲ್ಲೂ ನಮ್ಮ ಕನ್ನಡ ಭಾಷೆಗೆ ಆದ್ಯತೆ ಇರಲಿ ಎಂದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ, ಮಹಿಳಾ ಕುಂದು ಕೊರತೆಗಳ ಸಮಿತಿಯ ಸಂಚಾಲಕರಾದ ಎನ್. ದಿವ್ಯ, ಪ್ರಾಧ್ಯಾಪಕರಾದ, ಬಾಬುಸಾಬಿ, ಯಶೋಧ ಸೇರಿದಂತೆ ಮತ್ತಿತರರು ಹಾಜರಿದ್ದರು

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

3 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

4 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

11 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

11 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

17 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago