ಮಾತೃಭಾಷೆಯ ಮೂಲಕ ಕಲಿಕೆಯನ್ನು ಪ್ರಾರಂಭಿಸಬೇಕು ಮಾತೃಭಾಷೆಯಲ್ಲಿ ಸ್ಪಷ್ಟವಾಗಿ ಓದು–ಬರಹ ಕಲಿಯುವ ಮಗುವಿಗೆ ಇನ್ನಷ್ಟು ಭಾಷೆ ಹಾಗೂ ವಿಷಯಗಳ ಕಲಿಕೆ ಸುಗಮವಾಗುತ್ತದೆ ಎಂದು ಉಪನ್ಯಾಸಕರಾದ ಎನ್.ಗಿರೀಶ್ ಹೇಳಿದರು.
ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾತೃಭಾಷಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಬಾಲ್ಯದಿಂದಲೇ ಮೊದಲ ಭಾಷೆಯಾಗಿ ಮಕ್ಕಳಿಗೆ ಮಾತೃಭಾಷೆಯನ್ನು ಕಲಿಸಿದರೆ ಜೀವನದಲ್ಲಿ ತುಂಬಾ ಅನುಕೂಲಗಳಾಗುತ್ತವೆ, ಮಾತೃಭಾಷೆಯಿಂದಲೇ ಮಕ್ಕಳ ತೊದಲ ನುಡಿ, ಜೊತೆಗೆ ನಡೆ, ಅಭ್ಯಾಸಗಳು, ರೀತಿ-ನೀತಿ, ನಂಬಿಕೆಗಳು ಈ ಭಾಷೆಯಲ್ಲಿಯೇ ರೂಪುಗೊಳ್ಳುತ್ತಾ ಹೋಗುತ್ತವೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಹುಭಾಷೆ ಮತ್ತು ಬಹುಸಂಸ್ಕೃತಿಯ ಅಸ್ಮಿತೆಯನ್ನು ಉಳಿಸಲು ವಿಶ್ವ ಮಾತೃಭಾಷಾ ದಿನವನ್ನು ಆಚರಿಸಲಾಗುತ್ತಿದೆ, ಭಾವಜೀವಿಯಾದ ಮನುಷ್ಯ ಸಾಮಾಜಿಕ ಜೀವಿಯೂ ಹೌದು. ಭಾವನೆಗಳನ್ನು ಸಮಾಜದಲ್ಲಿನ ಇನ್ನಿತರರೊಂದಿಗೆ ಹಂಚಿಕೊಳ್ಳಲು ಸಂವಹನ ಮಾಡಲು ಸ್ಪಂದನದ ಅಗತ್ಯ ಇರಲೇಬೇಕು ಇದಕ್ಕೆ ಅಂದದ ಚಂದದ ಸೇತುವೆಯೇ ಕನ್ನಡ ಭಾಷೆ.
ಮನುಷ್ಯ ಎಷ್ಟೇ ಭಾಷೆ ಕಲಿತರೂ ಮೂಲ ಯೋಚನೆಗಳೆಲ್ಲ ರೂಪುಗೊಳ್ಳುವುದು, ಚಂದದ ಭಾವನೆಗಳು ಹುಟ್ಟಿಕೊಳ್ಳುವುದು ಅವು ಮಾತಿನ ಅನುಭೂತಿಗೆ ನಿಲುಕುವುದೆಲ್ಲ ಮಾತೃಭಾಷೆಯಲ್ಲಿಯೇ ಹಾಗಾಗಿ ತಾಯಿ ನುಡಿ ಎನ್ನುವುದು ಹೃದಯದ ಭಾಷೆ.
ಎಲ್ಲಾ ಭಾಷೆಯೂ ಸುಮಧುರವೇ, ಎಲ್ಲಾ ಅಮ್ಮಂದಿರೂ ಮಮತಾಮಯಿಗಳೇ ಆದರೂ ನಮಗೆ ನಮ್ಮಮ್ಮನ ಮಡಿಲೇ ವಿಶೇಷ. ಹಾಗೆಯೇ ಭಾಷೆಗಳು ಎಷ್ಟೇ ಇರಲಿ, ಹೃದಯದ ಭಾಷೆಗೆ ಅದರಲ್ಲೂ ನಮ್ಮ ಕನ್ನಡ ಭಾಷೆಗೆ ಆದ್ಯತೆ ಇರಲಿ ಎಂದರು.
ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ, ಮಹಿಳಾ ಕುಂದು ಕೊರತೆಗಳ ಸಮಿತಿಯ ಸಂಚಾಲಕರಾದ ಎನ್. ದಿವ್ಯ, ಪ್ರಾಧ್ಯಾಪಕರಾದ, ಬಾಬುಸಾಬಿ, ಯಶೋಧ ಸೇರಿದಂತೆ ಮತ್ತಿತರರು ಹಾಜರಿದ್ದರು
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…