ಮಾತೃಭಾಷೆಗೆ ಹೆಚ್ಚು ಒತ್ತು ನೀಡಬೇಕು-ಎನ್.ಗಿರೀಶ್

ಮಾತೃಭಾಷೆಯ ಮೂಲಕ ಕಲಿಕೆಯನ್ನು ಪ್ರಾರಂಭಿಸಬೇಕು ಮಾತೃಭಾಷೆಯಲ್ಲಿ ಸ್ಪಷ್ಟವಾಗಿ ಓದು–ಬರಹ ಕಲಿಯುವ ಮಗುವಿಗೆ ಇನ್ನಷ್ಟು ಭಾಷೆ ಹಾಗೂ ವಿಷಯಗಳ ಕಲಿಕೆ ಸುಗಮವಾಗುತ್ತದೆ ಎಂದು ಉಪನ್ಯಾಸಕರಾದ ಎನ್.ಗಿರೀಶ್ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾತೃಭಾಷಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಬಾಲ್ಯದಿಂದಲೇ ಮೊದಲ ಭಾಷೆಯಾಗಿ ಮಕ್ಕಳಿಗೆ ಮಾತೃಭಾಷೆಯನ್ನು ಕಲಿಸಿದರೆ ಜೀವನದಲ್ಲಿ ತುಂಬಾ ಅನುಕೂಲಗಳಾಗುತ್ತವೆ, ಮಾತೃಭಾಷೆಯಿಂದಲೇ ಮಕ್ಕಳ ತೊದಲ ನುಡಿ, ಜೊತೆಗೆ ನಡೆ, ಅಭ್ಯಾಸಗಳು, ರೀತಿ-ನೀತಿ, ನಂಬಿಕೆಗಳು ಈ ಭಾಷೆಯಲ್ಲಿಯೇ ರೂಪುಗೊಳ್ಳುತ್ತಾ ಹೋಗುತ್ತವೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಹುಭಾಷೆ ಮತ್ತು ಬಹುಸಂಸ್ಕೃತಿಯ ಅಸ್ಮಿತೆಯನ್ನು ಉಳಿಸಲು ವಿಶ್ವ ಮಾತೃಭಾಷಾ ದಿನವನ್ನು ಆಚರಿಸಲಾಗುತ್ತಿದೆ, ಭಾವಜೀವಿಯಾದ ಮನುಷ್ಯ ಸಾಮಾಜಿಕ ಜೀವಿಯೂ ಹೌದು. ಭಾವನೆಗಳನ್ನು ಸಮಾಜದಲ್ಲಿನ ಇನ್ನಿತರರೊಂದಿಗೆ ಹಂಚಿಕೊಳ್ಳಲು ಸಂವಹನ ಮಾಡಲು ಸ್ಪಂದನದ ಅಗತ್ಯ ಇರಲೇಬೇಕು ಇದಕ್ಕೆ ಅಂದದ ಚಂದದ ಸೇತುವೆಯೇ ಕನ್ನಡ ಭಾಷೆ.

ಮನುಷ್ಯ ಎಷ್ಟೇ ಭಾಷೆ ಕಲಿತರೂ ಮೂಲ ಯೋಚನೆಗಳೆಲ್ಲ ರೂಪುಗೊಳ್ಳುವುದು, ಚಂದದ ಭಾವನೆಗಳು ಹುಟ್ಟಿಕೊಳ್ಳುವುದು ಅವು ಮಾತಿನ ಅನುಭೂತಿಗೆ ನಿಲುಕುವುದೆಲ್ಲ ಮಾತೃಭಾಷೆಯಲ್ಲಿಯೇ ಹಾಗಾಗಿ ತಾಯಿ ನುಡಿ ಎನ್ನುವುದು ಹೃದಯದ ಭಾಷೆ.

ಎಲ್ಲಾ ಭಾಷೆಯೂ ಸುಮಧುರವೇ, ಎಲ್ಲಾ ಅಮ್ಮಂದಿರೂ ಮಮತಾಮಯಿಗಳೇ ಆದರೂ ನಮಗೆ ನಮ್ಮಮ್ಮನ ಮಡಿಲೇ ವಿಶೇಷ. ಹಾಗೆಯೇ ಭಾಷೆಗಳು ಎಷ್ಟೇ ಇರಲಿ, ಹೃದಯದ ಭಾಷೆಗೆ ಅದರಲ್ಲೂ ನಮ್ಮ ಕನ್ನಡ ಭಾಷೆಗೆ ಆದ್ಯತೆ ಇರಲಿ ಎಂದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ, ಮಹಿಳಾ ಕುಂದು ಕೊರತೆಗಳ ಸಮಿತಿಯ ಸಂಚಾಲಕರಾದ ಎನ್. ದಿವ್ಯ, ಪ್ರಾಧ್ಯಾಪಕರಾದ, ಬಾಬುಸಾಬಿ, ಯಶೋಧ ಸೇರಿದಂತೆ ಮತ್ತಿತರರು ಹಾಜರಿದ್ದರು

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

5 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

20 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago