ಮಾತೃಭಾಷೆಗೆ ಹೆಚ್ಚು ಒತ್ತು ನೀಡಬೇಕು-ಎನ್.ಗಿರೀಶ್

ಮಾತೃಭಾಷೆಯ ಮೂಲಕ ಕಲಿಕೆಯನ್ನು ಪ್ರಾರಂಭಿಸಬೇಕು ಮಾತೃಭಾಷೆಯಲ್ಲಿ ಸ್ಪಷ್ಟವಾಗಿ ಓದು–ಬರಹ ಕಲಿಯುವ ಮಗುವಿಗೆ ಇನ್ನಷ್ಟು ಭಾಷೆ ಹಾಗೂ ವಿಷಯಗಳ ಕಲಿಕೆ ಸುಗಮವಾಗುತ್ತದೆ ಎಂದು ಉಪನ್ಯಾಸಕರಾದ ಎನ್.ಗಿರೀಶ್ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾತೃಭಾಷಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಬಾಲ್ಯದಿಂದಲೇ ಮೊದಲ ಭಾಷೆಯಾಗಿ ಮಕ್ಕಳಿಗೆ ಮಾತೃಭಾಷೆಯನ್ನು ಕಲಿಸಿದರೆ ಜೀವನದಲ್ಲಿ ತುಂಬಾ ಅನುಕೂಲಗಳಾಗುತ್ತವೆ, ಮಾತೃಭಾಷೆಯಿಂದಲೇ ಮಕ್ಕಳ ತೊದಲ ನುಡಿ, ಜೊತೆಗೆ ನಡೆ, ಅಭ್ಯಾಸಗಳು, ರೀತಿ-ನೀತಿ, ನಂಬಿಕೆಗಳು ಈ ಭಾಷೆಯಲ್ಲಿಯೇ ರೂಪುಗೊಳ್ಳುತ್ತಾ ಹೋಗುತ್ತವೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಹುಭಾಷೆ ಮತ್ತು ಬಹುಸಂಸ್ಕೃತಿಯ ಅಸ್ಮಿತೆಯನ್ನು ಉಳಿಸಲು ವಿಶ್ವ ಮಾತೃಭಾಷಾ ದಿನವನ್ನು ಆಚರಿಸಲಾಗುತ್ತಿದೆ, ಭಾವಜೀವಿಯಾದ ಮನುಷ್ಯ ಸಾಮಾಜಿಕ ಜೀವಿಯೂ ಹೌದು. ಭಾವನೆಗಳನ್ನು ಸಮಾಜದಲ್ಲಿನ ಇನ್ನಿತರರೊಂದಿಗೆ ಹಂಚಿಕೊಳ್ಳಲು ಸಂವಹನ ಮಾಡಲು ಸ್ಪಂದನದ ಅಗತ್ಯ ಇರಲೇಬೇಕು ಇದಕ್ಕೆ ಅಂದದ ಚಂದದ ಸೇತುವೆಯೇ ಕನ್ನಡ ಭಾಷೆ.

ಮನುಷ್ಯ ಎಷ್ಟೇ ಭಾಷೆ ಕಲಿತರೂ ಮೂಲ ಯೋಚನೆಗಳೆಲ್ಲ ರೂಪುಗೊಳ್ಳುವುದು, ಚಂದದ ಭಾವನೆಗಳು ಹುಟ್ಟಿಕೊಳ್ಳುವುದು ಅವು ಮಾತಿನ ಅನುಭೂತಿಗೆ ನಿಲುಕುವುದೆಲ್ಲ ಮಾತೃಭಾಷೆಯಲ್ಲಿಯೇ ಹಾಗಾಗಿ ತಾಯಿ ನುಡಿ ಎನ್ನುವುದು ಹೃದಯದ ಭಾಷೆ.

ಎಲ್ಲಾ ಭಾಷೆಯೂ ಸುಮಧುರವೇ, ಎಲ್ಲಾ ಅಮ್ಮಂದಿರೂ ಮಮತಾಮಯಿಗಳೇ ಆದರೂ ನಮಗೆ ನಮ್ಮಮ್ಮನ ಮಡಿಲೇ ವಿಶೇಷ. ಹಾಗೆಯೇ ಭಾಷೆಗಳು ಎಷ್ಟೇ ಇರಲಿ, ಹೃದಯದ ಭಾಷೆಗೆ ಅದರಲ್ಲೂ ನಮ್ಮ ಕನ್ನಡ ಭಾಷೆಗೆ ಆದ್ಯತೆ ಇರಲಿ ಎಂದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ, ಮಹಿಳಾ ಕುಂದು ಕೊರತೆಗಳ ಸಮಿತಿಯ ಸಂಚಾಲಕರಾದ ಎನ್. ದಿವ್ಯ, ಪ್ರಾಧ್ಯಾಪಕರಾದ, ಬಾಬುಸಾಬಿ, ಯಶೋಧ ಸೇರಿದಂತೆ ಮತ್ತಿತರರು ಹಾಜರಿದ್ದರು

Ramesh Babu

Journalist

Recent Posts

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

5 hours ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

10 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

13 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

2 days ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

3 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago