ಮಾತೃಭಾಷೆಯ ಮೂಲಕ ಕಲಿಕೆಯನ್ನು ಪ್ರಾರಂಭಿಸಬೇಕು ಮಾತೃಭಾಷೆಯಲ್ಲಿ ಸ್ಪಷ್ಟವಾಗಿ ಓದು–ಬರಹ ಕಲಿಯುವ ಮಗುವಿಗೆ ಇನ್ನಷ್ಟು ಭಾಷೆ ಹಾಗೂ ವಿಷಯಗಳ ಕಲಿಕೆ ಸುಗಮವಾಗುತ್ತದೆ ಎಂದು ಉಪನ್ಯಾಸಕರಾದ ಎನ್.ಗಿರೀಶ್ ಹೇಳಿದರು.
ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾತೃಭಾಷಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಬಾಲ್ಯದಿಂದಲೇ ಮೊದಲ ಭಾಷೆಯಾಗಿ ಮಕ್ಕಳಿಗೆ ಮಾತೃಭಾಷೆಯನ್ನು ಕಲಿಸಿದರೆ ಜೀವನದಲ್ಲಿ ತುಂಬಾ ಅನುಕೂಲಗಳಾಗುತ್ತವೆ, ಮಾತೃಭಾಷೆಯಿಂದಲೇ ಮಕ್ಕಳ ತೊದಲ ನುಡಿ, ಜೊತೆಗೆ ನಡೆ, ಅಭ್ಯಾಸಗಳು, ರೀತಿ-ನೀತಿ, ನಂಬಿಕೆಗಳು ಈ ಭಾಷೆಯಲ್ಲಿಯೇ ರೂಪುಗೊಳ್ಳುತ್ತಾ ಹೋಗುತ್ತವೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಹುಭಾಷೆ ಮತ್ತು ಬಹುಸಂಸ್ಕೃತಿಯ ಅಸ್ಮಿತೆಯನ್ನು ಉಳಿಸಲು ವಿಶ್ವ ಮಾತೃಭಾಷಾ ದಿನವನ್ನು ಆಚರಿಸಲಾಗುತ್ತಿದೆ, ಭಾವಜೀವಿಯಾದ ಮನುಷ್ಯ ಸಾಮಾಜಿಕ ಜೀವಿಯೂ ಹೌದು. ಭಾವನೆಗಳನ್ನು ಸಮಾಜದಲ್ಲಿನ ಇನ್ನಿತರರೊಂದಿಗೆ ಹಂಚಿಕೊಳ್ಳಲು ಸಂವಹನ ಮಾಡಲು ಸ್ಪಂದನದ ಅಗತ್ಯ ಇರಲೇಬೇಕು ಇದಕ್ಕೆ ಅಂದದ ಚಂದದ ಸೇತುವೆಯೇ ಕನ್ನಡ ಭಾಷೆ.
ಮನುಷ್ಯ ಎಷ್ಟೇ ಭಾಷೆ ಕಲಿತರೂ ಮೂಲ ಯೋಚನೆಗಳೆಲ್ಲ ರೂಪುಗೊಳ್ಳುವುದು, ಚಂದದ ಭಾವನೆಗಳು ಹುಟ್ಟಿಕೊಳ್ಳುವುದು ಅವು ಮಾತಿನ ಅನುಭೂತಿಗೆ ನಿಲುಕುವುದೆಲ್ಲ ಮಾತೃಭಾಷೆಯಲ್ಲಿಯೇ ಹಾಗಾಗಿ ತಾಯಿ ನುಡಿ ಎನ್ನುವುದು ಹೃದಯದ ಭಾಷೆ.
ಎಲ್ಲಾ ಭಾಷೆಯೂ ಸುಮಧುರವೇ, ಎಲ್ಲಾ ಅಮ್ಮಂದಿರೂ ಮಮತಾಮಯಿಗಳೇ ಆದರೂ ನಮಗೆ ನಮ್ಮಮ್ಮನ ಮಡಿಲೇ ವಿಶೇಷ. ಹಾಗೆಯೇ ಭಾಷೆಗಳು ಎಷ್ಟೇ ಇರಲಿ, ಹೃದಯದ ಭಾಷೆಗೆ ಅದರಲ್ಲೂ ನಮ್ಮ ಕನ್ನಡ ಭಾಷೆಗೆ ಆದ್ಯತೆ ಇರಲಿ ಎಂದರು.
ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ, ಮಹಿಳಾ ಕುಂದು ಕೊರತೆಗಳ ಸಮಿತಿಯ ಸಂಚಾಲಕರಾದ ಎನ್. ದಿವ್ಯ, ಪ್ರಾಧ್ಯಾಪಕರಾದ, ಬಾಬುಸಾಬಿ, ಯಶೋಧ ಸೇರಿದಂತೆ ಮತ್ತಿತರರು ಹಾಜರಿದ್ದರು
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…