ಮಾತೃಭಾಷೆಗೆ ಹೆಚ್ಚು ಒತ್ತು ನೀಡಬೇಕು-ಎನ್.ಗಿರೀಶ್

ಮಾತೃಭಾಷೆಯ ಮೂಲಕ ಕಲಿಕೆಯನ್ನು ಪ್ರಾರಂಭಿಸಬೇಕು ಮಾತೃಭಾಷೆಯಲ್ಲಿ ಸ್ಪಷ್ಟವಾಗಿ ಓದು–ಬರಹ ಕಲಿಯುವ ಮಗುವಿಗೆ ಇನ್ನಷ್ಟು ಭಾಷೆ ಹಾಗೂ ವಿಷಯಗಳ ಕಲಿಕೆ ಸುಗಮವಾಗುತ್ತದೆ ಎಂದು ಉಪನ್ಯಾಸಕರಾದ ಎನ್.ಗಿರೀಶ್ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾತೃಭಾಷಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಬಾಲ್ಯದಿಂದಲೇ ಮೊದಲ ಭಾಷೆಯಾಗಿ ಮಕ್ಕಳಿಗೆ ಮಾತೃಭಾಷೆಯನ್ನು ಕಲಿಸಿದರೆ ಜೀವನದಲ್ಲಿ ತುಂಬಾ ಅನುಕೂಲಗಳಾಗುತ್ತವೆ, ಮಾತೃಭಾಷೆಯಿಂದಲೇ ಮಕ್ಕಳ ತೊದಲ ನುಡಿ, ಜೊತೆಗೆ ನಡೆ, ಅಭ್ಯಾಸಗಳು, ರೀತಿ-ನೀತಿ, ನಂಬಿಕೆಗಳು ಈ ಭಾಷೆಯಲ್ಲಿಯೇ ರೂಪುಗೊಳ್ಳುತ್ತಾ ಹೋಗುತ್ತವೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಹುಭಾಷೆ ಮತ್ತು ಬಹುಸಂಸ್ಕೃತಿಯ ಅಸ್ಮಿತೆಯನ್ನು ಉಳಿಸಲು ವಿಶ್ವ ಮಾತೃಭಾಷಾ ದಿನವನ್ನು ಆಚರಿಸಲಾಗುತ್ತಿದೆ, ಭಾವಜೀವಿಯಾದ ಮನುಷ್ಯ ಸಾಮಾಜಿಕ ಜೀವಿಯೂ ಹೌದು. ಭಾವನೆಗಳನ್ನು ಸಮಾಜದಲ್ಲಿನ ಇನ್ನಿತರರೊಂದಿಗೆ ಹಂಚಿಕೊಳ್ಳಲು ಸಂವಹನ ಮಾಡಲು ಸ್ಪಂದನದ ಅಗತ್ಯ ಇರಲೇಬೇಕು ಇದಕ್ಕೆ ಅಂದದ ಚಂದದ ಸೇತುವೆಯೇ ಕನ್ನಡ ಭಾಷೆ.

ಮನುಷ್ಯ ಎಷ್ಟೇ ಭಾಷೆ ಕಲಿತರೂ ಮೂಲ ಯೋಚನೆಗಳೆಲ್ಲ ರೂಪುಗೊಳ್ಳುವುದು, ಚಂದದ ಭಾವನೆಗಳು ಹುಟ್ಟಿಕೊಳ್ಳುವುದು ಅವು ಮಾತಿನ ಅನುಭೂತಿಗೆ ನಿಲುಕುವುದೆಲ್ಲ ಮಾತೃಭಾಷೆಯಲ್ಲಿಯೇ ಹಾಗಾಗಿ ತಾಯಿ ನುಡಿ ಎನ್ನುವುದು ಹೃದಯದ ಭಾಷೆ.

ಎಲ್ಲಾ ಭಾಷೆಯೂ ಸುಮಧುರವೇ, ಎಲ್ಲಾ ಅಮ್ಮಂದಿರೂ ಮಮತಾಮಯಿಗಳೇ ಆದರೂ ನಮಗೆ ನಮ್ಮಮ್ಮನ ಮಡಿಲೇ ವಿಶೇಷ. ಹಾಗೆಯೇ ಭಾಷೆಗಳು ಎಷ್ಟೇ ಇರಲಿ, ಹೃದಯದ ಭಾಷೆಗೆ ಅದರಲ್ಲೂ ನಮ್ಮ ಕನ್ನಡ ಭಾಷೆಗೆ ಆದ್ಯತೆ ಇರಲಿ ಎಂದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ, ಮಹಿಳಾ ಕುಂದು ಕೊರತೆಗಳ ಸಮಿತಿಯ ಸಂಚಾಲಕರಾದ ಎನ್. ದಿವ್ಯ, ಪ್ರಾಧ್ಯಾಪಕರಾದ, ಬಾಬುಸಾಬಿ, ಯಶೋಧ ಸೇರಿದಂತೆ ಮತ್ತಿತರರು ಹಾಜರಿದ್ದರು

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

6 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

11 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

13 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

15 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

18 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago