ಮಾತೃಭಾಷೆಗೆ ಹೆಚ್ಚು ಒತ್ತು ನೀಡಬೇಕು-ಎನ್.ಗಿರೀಶ್

ಮಾತೃಭಾಷೆಯ ಮೂಲಕ ಕಲಿಕೆಯನ್ನು ಪ್ರಾರಂಭಿಸಬೇಕು ಮಾತೃಭಾಷೆಯಲ್ಲಿ ಸ್ಪಷ್ಟವಾಗಿ ಓದು–ಬರಹ ಕಲಿಯುವ ಮಗುವಿಗೆ ಇನ್ನಷ್ಟು ಭಾಷೆ ಹಾಗೂ ವಿಷಯಗಳ ಕಲಿಕೆ ಸುಗಮವಾಗುತ್ತದೆ ಎಂದು ಉಪನ್ಯಾಸಕರಾದ ಎನ್.ಗಿರೀಶ್ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾತೃಭಾಷಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಬಾಲ್ಯದಿಂದಲೇ ಮೊದಲ ಭಾಷೆಯಾಗಿ ಮಕ್ಕಳಿಗೆ ಮಾತೃಭಾಷೆಯನ್ನು ಕಲಿಸಿದರೆ ಜೀವನದಲ್ಲಿ ತುಂಬಾ ಅನುಕೂಲಗಳಾಗುತ್ತವೆ, ಮಾತೃಭಾಷೆಯಿಂದಲೇ ಮಕ್ಕಳ ತೊದಲ ನುಡಿ, ಜೊತೆಗೆ ನಡೆ, ಅಭ್ಯಾಸಗಳು, ರೀತಿ-ನೀತಿ, ನಂಬಿಕೆಗಳು ಈ ಭಾಷೆಯಲ್ಲಿಯೇ ರೂಪುಗೊಳ್ಳುತ್ತಾ ಹೋಗುತ್ತವೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಹುಭಾಷೆ ಮತ್ತು ಬಹುಸಂಸ್ಕೃತಿಯ ಅಸ್ಮಿತೆಯನ್ನು ಉಳಿಸಲು ವಿಶ್ವ ಮಾತೃಭಾಷಾ ದಿನವನ್ನು ಆಚರಿಸಲಾಗುತ್ತಿದೆ, ಭಾವಜೀವಿಯಾದ ಮನುಷ್ಯ ಸಾಮಾಜಿಕ ಜೀವಿಯೂ ಹೌದು. ಭಾವನೆಗಳನ್ನು ಸಮಾಜದಲ್ಲಿನ ಇನ್ನಿತರರೊಂದಿಗೆ ಹಂಚಿಕೊಳ್ಳಲು ಸಂವಹನ ಮಾಡಲು ಸ್ಪಂದನದ ಅಗತ್ಯ ಇರಲೇಬೇಕು ಇದಕ್ಕೆ ಅಂದದ ಚಂದದ ಸೇತುವೆಯೇ ಕನ್ನಡ ಭಾಷೆ.

ಮನುಷ್ಯ ಎಷ್ಟೇ ಭಾಷೆ ಕಲಿತರೂ ಮೂಲ ಯೋಚನೆಗಳೆಲ್ಲ ರೂಪುಗೊಳ್ಳುವುದು, ಚಂದದ ಭಾವನೆಗಳು ಹುಟ್ಟಿಕೊಳ್ಳುವುದು ಅವು ಮಾತಿನ ಅನುಭೂತಿಗೆ ನಿಲುಕುವುದೆಲ್ಲ ಮಾತೃಭಾಷೆಯಲ್ಲಿಯೇ ಹಾಗಾಗಿ ತಾಯಿ ನುಡಿ ಎನ್ನುವುದು ಹೃದಯದ ಭಾಷೆ.

ಎಲ್ಲಾ ಭಾಷೆಯೂ ಸುಮಧುರವೇ, ಎಲ್ಲಾ ಅಮ್ಮಂದಿರೂ ಮಮತಾಮಯಿಗಳೇ ಆದರೂ ನಮಗೆ ನಮ್ಮಮ್ಮನ ಮಡಿಲೇ ವಿಶೇಷ. ಹಾಗೆಯೇ ಭಾಷೆಗಳು ಎಷ್ಟೇ ಇರಲಿ, ಹೃದಯದ ಭಾಷೆಗೆ ಅದರಲ್ಲೂ ನಮ್ಮ ಕನ್ನಡ ಭಾಷೆಗೆ ಆದ್ಯತೆ ಇರಲಿ ಎಂದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ, ಮಹಿಳಾ ಕುಂದು ಕೊರತೆಗಳ ಸಮಿತಿಯ ಸಂಚಾಲಕರಾದ ಎನ್. ದಿವ್ಯ, ಪ್ರಾಧ್ಯಾಪಕರಾದ, ಬಾಬುಸಾಬಿ, ಯಶೋಧ ಸೇರಿದಂತೆ ಮತ್ತಿತರರು ಹಾಜರಿದ್ದರು

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

3 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

14 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

22 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago