ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ಕಟ್ಟುನಿಟ್ಟಿನ ಕ್ರಮ

ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಮಾದಕ ದ್ರವ್ಯಗಳ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಮತ್ತು ಯುವ ಪೀಳಿಗೆಯನ್ನು ಈ ಪಿಡುಗಿನಿಂದ ರಕ್ಷಿಸಲು ರಾಜ್ಯ ಸರ್ಕಾರವು ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು‌

ಸಭೆಯಲ್ಲಿ ನೀಡಿದ ಪ್ರಮುಖ ಸೂಚನೆಗಳು ಮತ್ತು ಇಲಾಖಾ ಸಮನ್ವಯದ ಪ್ರಮುಖ ಅಂಶಗಳು ಈ ಕೆಳಗಿನಂತಿವೆ:

* ಕೇವಲ ನಗರ ಪ್ರದೇಶಗಳಷ್ಟೇ ಅಲ್ಲದೆ, ಗ್ರಾಮೀಣ ಮಟ್ಟದಲ್ಲಿಯೂ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳು, ಕಾಲೇಜುಗಳು, ಕಾರ್ಖಾನೆಗಳು ಮತ್ತು ಗ್ರಾಮೀಣ ಮಟ್ಟದಲ್ಲಿ ಗ್ರಾಮ ಪಂಚಾಯತಿಗಳ ಮೂಲಕ ವ್ಯಾಪಕ ಜಾಗೃತಿ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.

* ಮಾದಕ ದ್ರವ್ಯಗಳನ್ನು ಸರಬರಾಜು ಮಾಡುವ ಮತ್ತು ಇದರ ಜಾಲದ ಹಿಂದೆ ಇರುವ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಇಲಾಖೆಯು ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಈ ಸಂಬಂಧದ ಕಾನೂನುಗಳನ್ನು ಅತ್ಯಂತ ಬಿಗಿಯಾಗಿ ಪಾಲಿಸಬೇಕು.

* ಮಾದಕ ದ್ರವ್ಯಗಳ ನಿಯಂತ್ರಣ ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ. ಗೃಹ (ಪೊಲೀಸ್), ಉನ್ನತ ಶಿಕ್ಷಣ, ಪ್ರಾಥಮಿಕ ಶಿಕ್ಷಣ, ವೈದ್ಯಕೀಯ ಶಿಕ್ಷಣ, ಕಾರಮಿಕ, ಸಮಾಜಕಲ್ಯಾಣ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಇದಕ್ಕಾಗಿ ರಾಜ್ಯದ ಸುಧಾರಿತ ತಂತ್ರಜ್ಞಾನ ಮತ್ತು ದತ್ತಾಂಶ ವ್ಯವಸ್ಥೆಗಳನ್ನು ಬಳಸಿಕೊಳ್ಳಬೇಕು.

* ಇ-ಆಡಳಿತ ಇಲಾಖೆಯ ಮಹತ್ವಾಕಾಂಕ್ಷಿ ‘ಕರ್ನಾಟಕ ರಾಜ್ಯ ವ್ಯಾಪಕ ವಲಯ ಜಾಲ’ (KSWAN 3.0) ಯೋಜನೆಯಡಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳವರೆಗೆ ಸುರಕ್ಷಿತ ಮತ್ತು ಬಿಗಿ ಸಂಪರ್ಕ ಜಾಲವನ್ನು ವಿಸ್ತರಿಸಲಾಗುತ್ತಿದೆ. ಈ ತಂತ್ರಜ್ಞಾನ ಮೂಲಸೌಕರ್ಯವನ್ನು ಬಳಸಿಕೊಂಡು ಗ್ರಾಮೀಣ ಮಟ್ಟದಲ್ಲಿ ಇಲಾಖೆಗಳ ಉಸ್ತುವಾರಿ ಹಾಗೂ ಜಾಗೃತಿ ಮೂಡಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು.

* ಮಾದಕ ದ್ರವ್ಯಗಳ ಮಾರಾಟ ಅಥವಾ ಬಳಕೆಯ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಲು ರಾಜ್ಯದ ಸುಧಾರಿತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆಯಾದ ‘ಜನಸ್ಪಂದನ’ (iPGRS) ಪ್ಲಾಟ್‌ಫಾರ್ಮ್ ಅನ್ನು ಮತ್ತಷ್ಟು ಸಶಕ್ತಗೊಳಿಸಲಾಗುವುದು. ನಾಗರಿಕರು ನೀಡುವ ದೂರುಗಳನ್ನು ತಳಮಟ್ಟದ ಅಧಿಕಾರಿಗಳೊಂದಿಗೆ ಮ್ಯಾಪ್ ಮಾಡಿ, ಕಟ್ಟುನಿಟ್ಟಾದ SLA (ಸೇವಾ ಮಟ್ಟದ ಒಪ್ಪಂದ) ಮತ್ತು ಕಾಲಮಿತಿಯೊಳಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

* ಮಾದಕ ದ್ರವ್ಯ ಮುಕ್ತ ಅಭಿಯಾನಕ್ಕೆ ಪೂರಕವಾಗಿ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ‘ಬಿಸಿನೆಸ್ ಪ್ರೊಸೆಸ್ ರಿ-ಇಂಜಿನಿಯರಿಂಗ್’ ಚಟುವಟಿಕೆಗಳನ್ನು ಗೃಹ (ಪೊಲೀಸ್) ಮತ್ತು ಶಿಕ್ಷಣ ಇಲಾಖೆಗಳಲ್ಲಿ ಇನ್ನಷ್ಟು ವೇಗಗೊಳಿಸಿ, ಇಲಾಖೆಗಳ ನಡುವಿನ ದತ್ತಾಂಶ ವಿನಿಮಯ ಮತ್ತು ಪರಿಶೀಲನಾ ಪ್ರಕ್ರಿಯೆಯನ್ನು ಸರಳಗೊಳಿಸಬೇಕು.

ಮಾದಕ ದ್ರವ್ಯ ಮುಕ್ತ ಸಮಾಜದ ನಿರ್ಮಾಣಕ್ಕೆ ಕೇವಲ ಕಾನೂನು ಜಾರಿ ಅಷ್ಟೇ ಅಲ್ಲದೆ ಸಾರ್ವಜನಿಕರು, ಯುವ ಸಮುದಾಯ ಹಾಗೂ ತಂತ್ರಜ್ಞಾನದ ಸಮರ್ಪಕ ಬಳಕೆ ಅತ್ಯಂತ ಅವಶ್ಯಕವಾಗಿದೆ. ಗೃಹ ಇಲಾಖೆಯ ಕಾನೂನು ಜಾರಿ ವ್ಯವಸ್ಥೆಯೊಂದಿಗೆ ವಿವಿಧ ಇಲಾಖೆಗಳನ್ನು ಸಮನ್ವಯಗೊಳಿಸಿ ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Ramesh Babu

Journalist

Recent Posts

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

11 hours ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

16 hours ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

23 hours ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

1 day ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

2 days ago