ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ಕಟ್ಟುನಿಟ್ಟಿನ ಕ್ರಮ

ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಮಾದಕ ದ್ರವ್ಯಗಳ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಮತ್ತು ಯುವ ಪೀಳಿಗೆಯನ್ನು ಈ ಪಿಡುಗಿನಿಂದ ರಕ್ಷಿಸಲು ರಾಜ್ಯ ಸರ್ಕಾರವು ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು‌

ಸಭೆಯಲ್ಲಿ ನೀಡಿದ ಪ್ರಮುಖ ಸೂಚನೆಗಳು ಮತ್ತು ಇಲಾಖಾ ಸಮನ್ವಯದ ಪ್ರಮುಖ ಅಂಶಗಳು ಈ ಕೆಳಗಿನಂತಿವೆ:

* ಕೇವಲ ನಗರ ಪ್ರದೇಶಗಳಷ್ಟೇ ಅಲ್ಲದೆ, ಗ್ರಾಮೀಣ ಮಟ್ಟದಲ್ಲಿಯೂ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳು, ಕಾಲೇಜುಗಳು, ಕಾರ್ಖಾನೆಗಳು ಮತ್ತು ಗ್ರಾಮೀಣ ಮಟ್ಟದಲ್ಲಿ ಗ್ರಾಮ ಪಂಚಾಯತಿಗಳ ಮೂಲಕ ವ್ಯಾಪಕ ಜಾಗೃತಿ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.

* ಮಾದಕ ದ್ರವ್ಯಗಳನ್ನು ಸರಬರಾಜು ಮಾಡುವ ಮತ್ತು ಇದರ ಜಾಲದ ಹಿಂದೆ ಇರುವ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಇಲಾಖೆಯು ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಈ ಸಂಬಂಧದ ಕಾನೂನುಗಳನ್ನು ಅತ್ಯಂತ ಬಿಗಿಯಾಗಿ ಪಾಲಿಸಬೇಕು.

* ಮಾದಕ ದ್ರವ್ಯಗಳ ನಿಯಂತ್ರಣ ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ. ಗೃಹ (ಪೊಲೀಸ್), ಉನ್ನತ ಶಿಕ್ಷಣ, ಪ್ರಾಥಮಿಕ ಶಿಕ್ಷಣ, ವೈದ್ಯಕೀಯ ಶಿಕ್ಷಣ, ಕಾರಮಿಕ, ಸಮಾಜಕಲ್ಯಾಣ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಇದಕ್ಕಾಗಿ ರಾಜ್ಯದ ಸುಧಾರಿತ ತಂತ್ರಜ್ಞಾನ ಮತ್ತು ದತ್ತಾಂಶ ವ್ಯವಸ್ಥೆಗಳನ್ನು ಬಳಸಿಕೊಳ್ಳಬೇಕು.

* ಇ-ಆಡಳಿತ ಇಲಾಖೆಯ ಮಹತ್ವಾಕಾಂಕ್ಷಿ ‘ಕರ್ನಾಟಕ ರಾಜ್ಯ ವ್ಯಾಪಕ ವಲಯ ಜಾಲ’ (KSWAN 3.0) ಯೋಜನೆಯಡಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳವರೆಗೆ ಸುರಕ್ಷಿತ ಮತ್ತು ಬಿಗಿ ಸಂಪರ್ಕ ಜಾಲವನ್ನು ವಿಸ್ತರಿಸಲಾಗುತ್ತಿದೆ. ಈ ತಂತ್ರಜ್ಞಾನ ಮೂಲಸೌಕರ್ಯವನ್ನು ಬಳಸಿಕೊಂಡು ಗ್ರಾಮೀಣ ಮಟ್ಟದಲ್ಲಿ ಇಲಾಖೆಗಳ ಉಸ್ತುವಾರಿ ಹಾಗೂ ಜಾಗೃತಿ ಮೂಡಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು.

* ಮಾದಕ ದ್ರವ್ಯಗಳ ಮಾರಾಟ ಅಥವಾ ಬಳಕೆಯ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಲು ರಾಜ್ಯದ ಸುಧಾರಿತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆಯಾದ ‘ಜನಸ್ಪಂದನ’ (iPGRS) ಪ್ಲಾಟ್‌ಫಾರ್ಮ್ ಅನ್ನು ಮತ್ತಷ್ಟು ಸಶಕ್ತಗೊಳಿಸಲಾಗುವುದು. ನಾಗರಿಕರು ನೀಡುವ ದೂರುಗಳನ್ನು ತಳಮಟ್ಟದ ಅಧಿಕಾರಿಗಳೊಂದಿಗೆ ಮ್ಯಾಪ್ ಮಾಡಿ, ಕಟ್ಟುನಿಟ್ಟಾದ SLA (ಸೇವಾ ಮಟ್ಟದ ಒಪ್ಪಂದ) ಮತ್ತು ಕಾಲಮಿತಿಯೊಳಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

* ಮಾದಕ ದ್ರವ್ಯ ಮುಕ್ತ ಅಭಿಯಾನಕ್ಕೆ ಪೂರಕವಾಗಿ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ‘ಬಿಸಿನೆಸ್ ಪ್ರೊಸೆಸ್ ರಿ-ಇಂಜಿನಿಯರಿಂಗ್’ ಚಟುವಟಿಕೆಗಳನ್ನು ಗೃಹ (ಪೊಲೀಸ್) ಮತ್ತು ಶಿಕ್ಷಣ ಇಲಾಖೆಗಳಲ್ಲಿ ಇನ್ನಷ್ಟು ವೇಗಗೊಳಿಸಿ, ಇಲಾಖೆಗಳ ನಡುವಿನ ದತ್ತಾಂಶ ವಿನಿಮಯ ಮತ್ತು ಪರಿಶೀಲನಾ ಪ್ರಕ್ರಿಯೆಯನ್ನು ಸರಳಗೊಳಿಸಬೇಕು.

ಮಾದಕ ದ್ರವ್ಯ ಮುಕ್ತ ಸಮಾಜದ ನಿರ್ಮಾಣಕ್ಕೆ ಕೇವಲ ಕಾನೂನು ಜಾರಿ ಅಷ್ಟೇ ಅಲ್ಲದೆ ಸಾರ್ವಜನಿಕರು, ಯುವ ಸಮುದಾಯ ಹಾಗೂ ತಂತ್ರಜ್ಞಾನದ ಸಮರ್ಪಕ ಬಳಕೆ ಅತ್ಯಂತ ಅವಶ್ಯಕವಾಗಿದೆ. ಗೃಹ ಇಲಾಖೆಯ ಕಾನೂನು ಜಾರಿ ವ್ಯವಸ್ಥೆಯೊಂದಿಗೆ ವಿವಿಧ ಇಲಾಖೆಗಳನ್ನು ಸಮನ್ವಯಗೊಳಿಸಿ ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

7 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

8 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

16 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago