ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಮಾದಕ ದ್ರವ್ಯಗಳ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಮತ್ತು ಯುವ ಪೀಳಿಗೆಯನ್ನು ಈ ಪಿಡುಗಿನಿಂದ ರಕ್ಷಿಸಲು ರಾಜ್ಯ ಸರ್ಕಾರವು ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು
ಸಭೆಯಲ್ಲಿ ನೀಡಿದ ಪ್ರಮುಖ ಸೂಚನೆಗಳು ಮತ್ತು ಇಲಾಖಾ ಸಮನ್ವಯದ ಪ್ರಮುಖ ಅಂಶಗಳು ಈ ಕೆಳಗಿನಂತಿವೆ:
* ಕೇವಲ ನಗರ ಪ್ರದೇಶಗಳಷ್ಟೇ ಅಲ್ಲದೆ, ಗ್ರಾಮೀಣ ಮಟ್ಟದಲ್ಲಿಯೂ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳು, ಕಾಲೇಜುಗಳು, ಕಾರ್ಖಾನೆಗಳು ಮತ್ತು ಗ್ರಾಮೀಣ ಮಟ್ಟದಲ್ಲಿ ಗ್ರಾಮ ಪಂಚಾಯತಿಗಳ ಮೂಲಕ ವ್ಯಾಪಕ ಜಾಗೃತಿ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
* ಮಾದಕ ದ್ರವ್ಯಗಳನ್ನು ಸರಬರಾಜು ಮಾಡುವ ಮತ್ತು ಇದರ ಜಾಲದ ಹಿಂದೆ ಇರುವ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಇಲಾಖೆಯು ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಈ ಸಂಬಂಧದ ಕಾನೂನುಗಳನ್ನು ಅತ್ಯಂತ ಬಿಗಿಯಾಗಿ ಪಾಲಿಸಬೇಕು.
* ಮಾದಕ ದ್ರವ್ಯಗಳ ನಿಯಂತ್ರಣ ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ. ಗೃಹ (ಪೊಲೀಸ್), ಉನ್ನತ ಶಿಕ್ಷಣ, ಪ್ರಾಥಮಿಕ ಶಿಕ್ಷಣ, ವೈದ್ಯಕೀಯ ಶಿಕ್ಷಣ, ಕಾರಮಿಕ, ಸಮಾಜಕಲ್ಯಾಣ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಇದಕ್ಕಾಗಿ ರಾಜ್ಯದ ಸುಧಾರಿತ ತಂತ್ರಜ್ಞಾನ ಮತ್ತು ದತ್ತಾಂಶ ವ್ಯವಸ್ಥೆಗಳನ್ನು ಬಳಸಿಕೊಳ್ಳಬೇಕು.
* ಇ-ಆಡಳಿತ ಇಲಾಖೆಯ ಮಹತ್ವಾಕಾಂಕ್ಷಿ ‘ಕರ್ನಾಟಕ ರಾಜ್ಯ ವ್ಯಾಪಕ ವಲಯ ಜಾಲ’ (KSWAN 3.0) ಯೋಜನೆಯಡಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳವರೆಗೆ ಸುರಕ್ಷಿತ ಮತ್ತು ಬಿಗಿ ಸಂಪರ್ಕ ಜಾಲವನ್ನು ವಿಸ್ತರಿಸಲಾಗುತ್ತಿದೆ. ಈ ತಂತ್ರಜ್ಞಾನ ಮೂಲಸೌಕರ್ಯವನ್ನು ಬಳಸಿಕೊಂಡು ಗ್ರಾಮೀಣ ಮಟ್ಟದಲ್ಲಿ ಇಲಾಖೆಗಳ ಉಸ್ತುವಾರಿ ಹಾಗೂ ಜಾಗೃತಿ ಮೂಡಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು.
* ಮಾದಕ ದ್ರವ್ಯಗಳ ಮಾರಾಟ ಅಥವಾ ಬಳಕೆಯ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಲು ರಾಜ್ಯದ ಸುಧಾರಿತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆಯಾದ ‘ಜನಸ್ಪಂದನ’ (iPGRS) ಪ್ಲಾಟ್ಫಾರ್ಮ್ ಅನ್ನು ಮತ್ತಷ್ಟು ಸಶಕ್ತಗೊಳಿಸಲಾಗುವುದು. ನಾಗರಿಕರು ನೀಡುವ ದೂರುಗಳನ್ನು ತಳಮಟ್ಟದ ಅಧಿಕಾರಿಗಳೊಂದಿಗೆ ಮ್ಯಾಪ್ ಮಾಡಿ, ಕಟ್ಟುನಿಟ್ಟಾದ SLA (ಸೇವಾ ಮಟ್ಟದ ಒಪ್ಪಂದ) ಮತ್ತು ಕಾಲಮಿತಿಯೊಳಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು.
* ಮಾದಕ ದ್ರವ್ಯ ಮುಕ್ತ ಅಭಿಯಾನಕ್ಕೆ ಪೂರಕವಾಗಿ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ‘ಬಿಸಿನೆಸ್ ಪ್ರೊಸೆಸ್ ರಿ-ಇಂಜಿನಿಯರಿಂಗ್’ ಚಟುವಟಿಕೆಗಳನ್ನು ಗೃಹ (ಪೊಲೀಸ್) ಮತ್ತು ಶಿಕ್ಷಣ ಇಲಾಖೆಗಳಲ್ಲಿ ಇನ್ನಷ್ಟು ವೇಗಗೊಳಿಸಿ, ಇಲಾಖೆಗಳ ನಡುವಿನ ದತ್ತಾಂಶ ವಿನಿಮಯ ಮತ್ತು ಪರಿಶೀಲನಾ ಪ್ರಕ್ರಿಯೆಯನ್ನು ಸರಳಗೊಳಿಸಬೇಕು.
ಮಾದಕ ದ್ರವ್ಯ ಮುಕ್ತ ಸಮಾಜದ ನಿರ್ಮಾಣಕ್ಕೆ ಕೇವಲ ಕಾನೂನು ಜಾರಿ ಅಷ್ಟೇ ಅಲ್ಲದೆ ಸಾರ್ವಜನಿಕರು, ಯುವ ಸಮುದಾಯ ಹಾಗೂ ತಂತ್ರಜ್ಞಾನದ ಸಮರ್ಪಕ ಬಳಕೆ ಅತ್ಯಂತ ಅವಶ್ಯಕವಾಗಿದೆ. ಗೃಹ ಇಲಾಖೆಯ ಕಾನೂನು ಜಾರಿ ವ್ಯವಸ್ಥೆಯೊಂದಿಗೆ ವಿವಿಧ ಇಲಾಖೆಗಳನ್ನು ಸಮನ್ವಯಗೊಳಿಸಿ ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…