ಮಾದಕ ವಸ್ತುಗಳ ನಿಷೇಧ ಹಾಗೂ ದುಷ್ಪರಿಣಾಮಗಳ ಬಗ್ಗೆ ಶಾಲಾ, ಕಾಲೇಜು ಸೇರಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ N-CORD ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯನ ಆರೋಗ್ಯ, ಜೀವನದ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತವೆ. ಸಮಾಜದಲ್ಲಿ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಹಾಗಾಗಿ ಅದನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಾ ಬಂದಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಜನನಿಬಿಡ ಪ್ರದೇಶಗಳಲ್ಲಿ ಪೋಸ್ಟರ್, ಬ್ಯಾನರ್ ಅಳವಡಿಸಿ ಜನರಿಗೆ ಜಾಗೃತಿ ಮೂಡಿಸಿ. ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಅಧಿಕಾರಿಗಳು, ಕಾಲಕಾಲಕ್ಕೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಮಾತನಾಡಿ ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಅಂತರ-ರಾಜ್ಯ ಮಾದಕವಸ್ತುಗಳ ಮಾರಾಟ, ಸಾಗಾಟವನ್ನು ತಡೆಯಲು ಪೊಲೀಸ್ ಇಲಾಖೆ ಹದ್ದಿನ ಕಣ್ಣಿಡಬೇಕಿದೆ.
ಕೃಷಿ ಅಧಿಕಾರಿಗಳು ಅಕ್ರಮವಾಗಿ ಗಾಂಜಾ ಬೆಳೆಯುವವರ ಬಗ್ಗೆ ನಿಗಾ ವಹಿಸಿ, ಆಗಿಂದಾಗ್ಗೆ ಸ್ಥಳ ಪರಿಶೀಲನೆ ನಡೆಸಿ. ಹಾಸ್ಟೆಲ್, ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ಬಳಕೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ. ಕಸ್ಟಮ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಹೊರ ರಾಜ್ಯ, ರಾಷ್ಟ್ರಗಳಿಂದ ಬರುವ ಸರಕುಗಳ ಮೇಲೆ ಇನ್ನಷ್ಟು ಬಿಗಿ ಕ್ರಮ ವಹಿಸಿ ಪರಿಶೀಲನೆ ನಡೆಸಿ ಎಂದರು.
ಜಿಲ್ಲೆಯಲ್ಲಿ ಮಾದಕವಸ್ತು, ವ್ಯಸನ ಮುಕ್ತ ಪುನರ್ವಸತಿ ಕೇಂದ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಪುನರ್ವಸತಿ ಕೇಂದ್ರಗಳು ಇನ್ನಷ್ಟು ಆರಂಭಿಸಲು ಕ್ರಮ ವಹಿಸಿ ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂತೋಶ್ ಕುಮಾರ್, ಕಸ್ಟಂಸ್ ಸಂಸ್ಥೆಯ ಜಂಟಿ ನಿರ್ದೇಶಕರಾದ ಸಂದೀಪ್ ಗುಂಜಾಲ್, ರಾಷ್ಟ್ರೀಯ ಕಸ್ಟಂಸ್ ಬ್ಯೋರೊ ಅಧಿಕಾರಿ ಶ್ಯಾಂ ಪ್ರಸಾದ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…