ಮಾದಕ ವಸ್ತುಗಳ ನಿಷೇಧ ಹಾಗೂ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ- ಡಿಸಿ ಎ.ಬಿ.ಬಸವರಾಜ್ ಸೂಚನೆ

ಮಾದಕ ವಸ್ತುಗಳ ನಿಷೇಧ ಹಾಗೂ ದುಷ್ಪರಿಣಾಮಗಳ ಬಗ್ಗೆ ಶಾಲಾ, ಕಾಲೇಜು ಸೇರಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ N-CORD ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯನ ಆರೋಗ್ಯ, ಜೀವನದ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತವೆ. ಸಮಾಜದಲ್ಲಿ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಹಾಗಾಗಿ ಅದನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಾ ಬಂದಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಜನನಿಬಿಡ ಪ್ರದೇಶಗಳಲ್ಲಿ ಪೋಸ್ಟರ್, ಬ್ಯಾನರ್ ಅಳವಡಿಸಿ ಜನರಿಗೆ ಜಾಗೃತಿ ಮೂಡಿಸಿ. ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಅಧಿಕಾರಿಗಳು, ಕಾಲಕಾಲಕ್ಕೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಮಾತನಾಡಿ ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಅಂತರ-ರಾಜ್ಯ ಮಾದಕವಸ್ತುಗಳ ಮಾರಾಟ, ಸಾಗಾಟವನ್ನು ತಡೆಯಲು ಪೊಲೀಸ್ ಇಲಾಖೆ ಹದ್ದಿನ ಕಣ್ಣಿಡಬೇಕಿದೆ.

ಕೃಷಿ ಅಧಿಕಾರಿಗಳು ಅಕ್ರಮವಾಗಿ ಗಾಂಜಾ ಬೆಳೆಯುವವರ ಬಗ್ಗೆ ನಿಗಾ ವಹಿಸಿ, ಆಗಿಂದಾಗ್ಗೆ ಸ್ಥಳ ಪರಿಶೀಲನೆ ನಡೆಸಿ. ಹಾಸ್ಟೆಲ್, ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ಬಳಕೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ. ಕಸ್ಟಮ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಹೊರ ರಾಜ್ಯ, ರಾಷ್ಟ್ರಗಳಿಂದ ಬರುವ ಸರಕುಗಳ ಮೇಲೆ ಇನ್ನಷ್ಟು ಬಿಗಿ ಕ್ರಮ ವಹಿಸಿ ಪರಿಶೀಲನೆ ನಡೆಸಿ ಎಂದರು.

ಜಿಲ್ಲೆಯಲ್ಲಿ ಮಾದಕವಸ್ತು, ವ್ಯಸನ ಮುಕ್ತ ಪುನರ್ವಸತಿ ಕೇಂದ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಪುನರ್ವಸತಿ ಕೇಂದ್ರಗಳು ಇನ್ನಷ್ಟು ಆರಂಭಿಸಲು ಕ್ರಮ ವಹಿಸಿ ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂತೋಶ್ ಕುಮಾರ್, ಕಸ್ಟಂಸ್ ಸಂಸ್ಥೆಯ ಜಂಟಿ ನಿರ್ದೇಶಕರಾದ ಸಂದೀಪ್ ಗುಂಜಾಲ್, ರಾಷ್ಟ್ರೀಯ ಕಸ್ಟಂಸ್ ಬ್ಯೋರೊ ಅಧಿಕಾರಿ ಶ್ಯಾಂ ಪ್ರಸಾದ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

1 hour ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

19 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

21 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

21 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

21 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

23 hours ago