ಮಾದಕ ವಸ್ತುಗಳ ನಿಷೇಧ ಹಾಗೂ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ- ಡಿಸಿ ಎ.ಬಿ.ಬಸವರಾಜ್ ಸೂಚನೆ

ಮಾದಕ ವಸ್ತುಗಳ ನಿಷೇಧ ಹಾಗೂ ದುಷ್ಪರಿಣಾಮಗಳ ಬಗ್ಗೆ ಶಾಲಾ, ಕಾಲೇಜು ಸೇರಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ N-CORD ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯನ ಆರೋಗ್ಯ, ಜೀವನದ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತವೆ. ಸಮಾಜದಲ್ಲಿ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಹಾಗಾಗಿ ಅದನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಾ ಬಂದಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಜನನಿಬಿಡ ಪ್ರದೇಶಗಳಲ್ಲಿ ಪೋಸ್ಟರ್, ಬ್ಯಾನರ್ ಅಳವಡಿಸಿ ಜನರಿಗೆ ಜಾಗೃತಿ ಮೂಡಿಸಿ. ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಅಧಿಕಾರಿಗಳು, ಕಾಲಕಾಲಕ್ಕೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಮಾತನಾಡಿ ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಅಂತರ-ರಾಜ್ಯ ಮಾದಕವಸ್ತುಗಳ ಮಾರಾಟ, ಸಾಗಾಟವನ್ನು ತಡೆಯಲು ಪೊಲೀಸ್ ಇಲಾಖೆ ಹದ್ದಿನ ಕಣ್ಣಿಡಬೇಕಿದೆ.

ಕೃಷಿ ಅಧಿಕಾರಿಗಳು ಅಕ್ರಮವಾಗಿ ಗಾಂಜಾ ಬೆಳೆಯುವವರ ಬಗ್ಗೆ ನಿಗಾ ವಹಿಸಿ, ಆಗಿಂದಾಗ್ಗೆ ಸ್ಥಳ ಪರಿಶೀಲನೆ ನಡೆಸಿ. ಹಾಸ್ಟೆಲ್, ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ಬಳಕೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ. ಕಸ್ಟಮ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಹೊರ ರಾಜ್ಯ, ರಾಷ್ಟ್ರಗಳಿಂದ ಬರುವ ಸರಕುಗಳ ಮೇಲೆ ಇನ್ನಷ್ಟು ಬಿಗಿ ಕ್ರಮ ವಹಿಸಿ ಪರಿಶೀಲನೆ ನಡೆಸಿ ಎಂದರು.

ಜಿಲ್ಲೆಯಲ್ಲಿ ಮಾದಕವಸ್ತು, ವ್ಯಸನ ಮುಕ್ತ ಪುನರ್ವಸತಿ ಕೇಂದ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಪುನರ್ವಸತಿ ಕೇಂದ್ರಗಳು ಇನ್ನಷ್ಟು ಆರಂಭಿಸಲು ಕ್ರಮ ವಹಿಸಿ ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂತೋಶ್ ಕುಮಾರ್, ಕಸ್ಟಂಸ್ ಸಂಸ್ಥೆಯ ಜಂಟಿ ನಿರ್ದೇಶಕರಾದ ಸಂದೀಪ್ ಗುಂಜಾಲ್, ರಾಷ್ಟ್ರೀಯ ಕಸ್ಟಂಸ್ ಬ್ಯೋರೊ ಅಧಿಕಾರಿ ಶ್ಯಾಂ ಪ್ರಸಾದ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

2 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

12 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

23 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago