ಮಾದಕ ವಸ್ತುಗಳ ನಿಷೇಧ ಹಾಗೂ ದುಷ್ಪರಿಣಾಮಗಳ ಬಗ್ಗೆ ಶಾಲಾ, ಕಾಲೇಜು ಸೇರಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ N-CORD ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯನ ಆರೋಗ್ಯ, ಜೀವನದ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತವೆ. ಸಮಾಜದಲ್ಲಿ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಹಾಗಾಗಿ ಅದನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಾ ಬಂದಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಜನನಿಬಿಡ ಪ್ರದೇಶಗಳಲ್ಲಿ ಪೋಸ್ಟರ್, ಬ್ಯಾನರ್ ಅಳವಡಿಸಿ ಜನರಿಗೆ ಜಾಗೃತಿ ಮೂಡಿಸಿ. ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಅಧಿಕಾರಿಗಳು, ಕಾಲಕಾಲಕ್ಕೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಮಾತನಾಡಿ ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಅಂತರ-ರಾಜ್ಯ ಮಾದಕವಸ್ತುಗಳ ಮಾರಾಟ, ಸಾಗಾಟವನ್ನು ತಡೆಯಲು ಪೊಲೀಸ್ ಇಲಾಖೆ ಹದ್ದಿನ ಕಣ್ಣಿಡಬೇಕಿದೆ.
ಕೃಷಿ ಅಧಿಕಾರಿಗಳು ಅಕ್ರಮವಾಗಿ ಗಾಂಜಾ ಬೆಳೆಯುವವರ ಬಗ್ಗೆ ನಿಗಾ ವಹಿಸಿ, ಆಗಿಂದಾಗ್ಗೆ ಸ್ಥಳ ಪರಿಶೀಲನೆ ನಡೆಸಿ. ಹಾಸ್ಟೆಲ್, ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ಬಳಕೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ. ಕಸ್ಟಮ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಹೊರ ರಾಜ್ಯ, ರಾಷ್ಟ್ರಗಳಿಂದ ಬರುವ ಸರಕುಗಳ ಮೇಲೆ ಇನ್ನಷ್ಟು ಬಿಗಿ ಕ್ರಮ ವಹಿಸಿ ಪರಿಶೀಲನೆ ನಡೆಸಿ ಎಂದರು.
ಜಿಲ್ಲೆಯಲ್ಲಿ ಮಾದಕವಸ್ತು, ವ್ಯಸನ ಮುಕ್ತ ಪುನರ್ವಸತಿ ಕೇಂದ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಪುನರ್ವಸತಿ ಕೇಂದ್ರಗಳು ಇನ್ನಷ್ಟು ಆರಂಭಿಸಲು ಕ್ರಮ ವಹಿಸಿ ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂತೋಶ್ ಕುಮಾರ್, ಕಸ್ಟಂಸ್ ಸಂಸ್ಥೆಯ ಜಂಟಿ ನಿರ್ದೇಶಕರಾದ ಸಂದೀಪ್ ಗುಂಜಾಲ್, ರಾಷ್ಟ್ರೀಯ ಕಸ್ಟಂಸ್ ಬ್ಯೋರೊ ಅಧಿಕಾರಿ ಶ್ಯಾಂ ಪ್ರಸಾದ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…