ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಮಾದಕ ವಸ್ತುಗಳಿಗೆ ದಾಸರಾಗಿ ದೈಹಿಕ ಹಾಗೂ ಮಾನಸಿಕವಾಗಿ ತಮ್ಮ ಆರೋಗ್ಯವನ್ನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವಸ್ತು ಸೇವನೆ, ಮಾರಾಟ ಹಾಗೂ ಸಾಗಾಟ ಕಾನೂನಿನ ಪ್ರಕಾರ ಅಪರಾಧ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ ಜೊತೆ ನಾವು, ನೀವು ಕೈಜೋಡಿಸಿ ಉತ್ತಮ ಸಮಾಜ ನಿರ್ಮಾಣ ಮಾಡಬೇಕಾಗಿದೆ ಎಂದು ನಟಿ ಪೂಜಾಗಾಂಧಿ ತಿಳಿಸಿದರು.
ಇಂದು ನಗರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್, ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದ ವತಿಯಿಂದ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಜಾಥಾ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಂತರ ನಟ ಗುರುನಂದನ್ ಮಾತನಾಡಿ, ಮಾದಕ ವಸ್ತುಗಳ ಬಳಕೆ ಮಾರಕರೋಗವಾಗಿ ಬೆಳೆಯುತ್ತಿರುವುದು ವಿಷಾದನೀಯವಾಗಿದೆ. ಒತ್ತಡ ಇದ್ದಾಗ ಯೋಗ ಮಾಡುವುದು, ಸಂಗೀತ ಕೇಳುವುದು, ಸಿನಿಮಾ ನೋಡುವುದು, ಕ್ರೀಡೆ, ಪ್ರವಾಸ, ಸೇರಿದಂತೆ ಇತರೆ ಒಳ್ಳೆ ಮನರಂಜನಾ ಚಟುವಟಿಕೆಗಳನ್ನು ಮಾಡಿ, ಆದರೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗಬೇಡಿ ಎಂದು ತಿಳಿಸಿದರು.
ಒಂದು ಬಾರಿ ಮಾದಕ ವ್ಯಸನಿಗಳಾದರೆ ವೈಯಕ್ತಿಕ ಬದುಕು ಹಾಳಾಗುವುದಲ್ಲದೇ ಕುಟುಂಬ, ಸಮಾಜಕ್ಕೂ ಬೇಡದವರಾಗುತ್ತೀರಿ, ಆದ್ದರಿಂದ ಎಲ್ಲರಿಗೂ ಉಜ್ವಲ ಭವಿಷ್ಯ ಇರುತ್ತದೆ ಅದನ್ನ ಸಾಕಾರಗೊಳಿಸಿಕೊಳ್ಳಬೇಕು ಎಂದು ಹೇಳಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ ಪಿಗಳಾದ, ಪುರುಷೋತ್ತಮ, ನಾಗರಾಜ್, ಡಿವೈಎಸ್ ಪಿ ರವಿ.ಪಿ, ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಮುನಿಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…