ಮಾದಕ ವಸ್ತುಗಳ ಬಳಕೆಯಿಂದ ದೈಹಿಕ‌‌ ಹಾಗೂ ಮಾನಸಿಕವಾಗಿ ಆರೋಗ್ಯ ಹಾಳು-ನಟಿ ಪೂಜಾ ಗಾಂಧಿ

ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಮಾದಕ ವಸ್ತುಗಳಿಗೆ ದಾಸರಾಗಿ ದೈಹಿಕ‌‌ ಹಾಗೂ ಮಾನಸಿಕವಾಗಿ ತಮ್ಮ ಆರೋಗ್ಯವನ್ನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವಸ್ತು ಸೇವನೆ, ಮಾರಾಟ ಹಾಗೂ ಸಾಗಾಟ ಕಾನೂನಿನ ಪ್ರಕಾರ ಅಪರಾಧ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ ಜೊತೆ ನಾವು, ನೀವು ಕೈಜೋಡಿಸಿ ಉತ್ತಮ‌ ಸಮಾಜ‌ ನಿರ್ಮಾಣ ಮಾಡಬೇಕಾಗಿದೆ ಎಂದು ನಟಿ ಪೂಜಾಗಾಂಧಿ ತಿಳಿಸಿದರು.

ಇಂದು ನಗರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್, ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದ ವತಿಯಿಂದ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಜಾಥಾ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ಯುವಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಕೆಟ್ಟ ಚಟ, ಕೆಟ್ಟ ಆಲೋಚನೆಗಳಿಂದ ಹೊರಬಂದು ಆರೋಗ್ಯಯುತವಾಗಿ ಜೀವನ ನಡೆಸಬೇಕು. ಎಲ್ಲಿಯಾದರೂ ಮಾದಕವಸ್ತುಗಳ ಬಳಕೆ ಕಂಡುಬಂದಲ್ಲಿ ಕೂಡಲೇ ಪೊಲೀಸರ ಗಮನಕ್ಕೆ ತೆಗೆದುಕೊಂಡು ಬರಬೇಕು ಎಂದು ಹೇಳಿದರು.

ನಂತರ ನಟ ಗುರುನಂದನ್ ಮಾತನಾಡಿ, ಮಾದಕ ವಸ್ತುಗಳ ಬಳಕೆ ಮಾರಕರೋಗವಾಗಿ ಬೆಳೆಯುತ್ತಿರುವುದು ವಿಷಾದನೀಯವಾಗಿದೆ. ಒತ್ತಡ ಇದ್ದಾಗ ಯೋಗ ಮಾಡುವುದು, ಸಂಗೀತ ಕೇಳುವುದು, ಸಿನಿಮಾ ನೋಡುವುದು, ಕ್ರೀಡೆ, ಪ್ರವಾಸ, ಸೇರಿದಂತೆ ಇತರೆ ಒಳ್ಳೆ ಮನರಂಜನಾ ಚಟುವಟಿಕೆಗಳನ್ನು ಮಾಡಿ, ಆದರೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗಬೇಡಿ ಎಂದು ತಿಳಿಸಿದರು.

ಒಂದು ಬಾರಿ ಮಾದಕ ವ್ಯಸನಿಗಳಾದರೆ ವೈಯಕ್ತಿಕ ಬದುಕು ಹಾಳಾಗುವುದಲ್ಲದೇ ಕುಟುಂಬ, ಸಮಾಜಕ್ಕೂ ಬೇಡದವರಾಗುತ್ತೀರಿ, ಆದ್ದರಿಂದ ಎಲ್ಲರಿಗೂ ಉಜ್ವಲ ಭವಿಷ್ಯ ಇರುತ್ತದೆ ಅದನ್ನ ಸಾಕಾರಗೊಳಿಸಿಕೊಳ್ಳಬೇಕು ಎಂದು ಹೇಳಿದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ ಪಿಗಳಾದ, ಪುರುಷೋತ್ತಮ, ನಾಗರಾಜ್, ಡಿವೈಎಸ್ ಪಿ ರವಿ.ಪಿ, ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಮುನಿಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

30 minutes ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 hour ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

16 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago