ಮಾದಕ ವಸ್ತುಗಳ ಬಳಕೆಯಿಂದ ದೈಹಿಕ‌‌ ಹಾಗೂ ಮಾನಸಿಕವಾಗಿ ಆರೋಗ್ಯ ಹಾಳು-ನಟಿ ಪೂಜಾ ಗಾಂಧಿ

ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಮಾದಕ ವಸ್ತುಗಳಿಗೆ ದಾಸರಾಗಿ ದೈಹಿಕ‌‌ ಹಾಗೂ ಮಾನಸಿಕವಾಗಿ ತಮ್ಮ ಆರೋಗ್ಯವನ್ನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವಸ್ತು ಸೇವನೆ, ಮಾರಾಟ ಹಾಗೂ ಸಾಗಾಟ ಕಾನೂನಿನ ಪ್ರಕಾರ ಅಪರಾಧ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ ಜೊತೆ ನಾವು, ನೀವು ಕೈಜೋಡಿಸಿ ಉತ್ತಮ‌ ಸಮಾಜ‌ ನಿರ್ಮಾಣ ಮಾಡಬೇಕಾಗಿದೆ ಎಂದು ನಟಿ ಪೂಜಾಗಾಂಧಿ ತಿಳಿಸಿದರು.

ಇಂದು ನಗರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್, ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದ ವತಿಯಿಂದ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಜಾಥಾ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ಯುವಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಕೆಟ್ಟ ಚಟ, ಕೆಟ್ಟ ಆಲೋಚನೆಗಳಿಂದ ಹೊರಬಂದು ಆರೋಗ್ಯಯುತವಾಗಿ ಜೀವನ ನಡೆಸಬೇಕು. ಎಲ್ಲಿಯಾದರೂ ಮಾದಕವಸ್ತುಗಳ ಬಳಕೆ ಕಂಡುಬಂದಲ್ಲಿ ಕೂಡಲೇ ಪೊಲೀಸರ ಗಮನಕ್ಕೆ ತೆಗೆದುಕೊಂಡು ಬರಬೇಕು ಎಂದು ಹೇಳಿದರು.

ನಂತರ ನಟ ಗುರುನಂದನ್ ಮಾತನಾಡಿ, ಮಾದಕ ವಸ್ತುಗಳ ಬಳಕೆ ಮಾರಕರೋಗವಾಗಿ ಬೆಳೆಯುತ್ತಿರುವುದು ವಿಷಾದನೀಯವಾಗಿದೆ. ಒತ್ತಡ ಇದ್ದಾಗ ಯೋಗ ಮಾಡುವುದು, ಸಂಗೀತ ಕೇಳುವುದು, ಸಿನಿಮಾ ನೋಡುವುದು, ಕ್ರೀಡೆ, ಪ್ರವಾಸ, ಸೇರಿದಂತೆ ಇತರೆ ಒಳ್ಳೆ ಮನರಂಜನಾ ಚಟುವಟಿಕೆಗಳನ್ನು ಮಾಡಿ, ಆದರೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗಬೇಡಿ ಎಂದು ತಿಳಿಸಿದರು.

ಒಂದು ಬಾರಿ ಮಾದಕ ವ್ಯಸನಿಗಳಾದರೆ ವೈಯಕ್ತಿಕ ಬದುಕು ಹಾಳಾಗುವುದಲ್ಲದೇ ಕುಟುಂಬ, ಸಮಾಜಕ್ಕೂ ಬೇಡದವರಾಗುತ್ತೀರಿ, ಆದ್ದರಿಂದ ಎಲ್ಲರಿಗೂ ಉಜ್ವಲ ಭವಿಷ್ಯ ಇರುತ್ತದೆ ಅದನ್ನ ಸಾಕಾರಗೊಳಿಸಿಕೊಳ್ಳಬೇಕು ಎಂದು ಹೇಳಿದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ ಪಿಗಳಾದ, ಪುರುಷೋತ್ತಮ, ನಾಗರಾಜ್, ಡಿವೈಎಸ್ ಪಿ ರವಿ.ಪಿ, ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಮುನಿಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

2 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

3 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

7 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

18 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

18 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

22 hours ago