ಮಾದಕ ವಸ್ತುಗಳ ಬಳಕೆಯಿಂದ ದೈಹಿಕ‌‌ ಹಾಗೂ ಮಾನಸಿಕವಾಗಿ ಆರೋಗ್ಯ ಹಾಳು-ನಟಿ ಪೂಜಾ ಗಾಂಧಿ

ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಮಾದಕ ವಸ್ತುಗಳಿಗೆ ದಾಸರಾಗಿ ದೈಹಿಕ‌‌ ಹಾಗೂ ಮಾನಸಿಕವಾಗಿ ತಮ್ಮ ಆರೋಗ್ಯವನ್ನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವಸ್ತು ಸೇವನೆ, ಮಾರಾಟ ಹಾಗೂ ಸಾಗಾಟ ಕಾನೂನಿನ ಪ್ರಕಾರ ಅಪರಾಧ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ ಜೊತೆ ನಾವು, ನೀವು ಕೈಜೋಡಿಸಿ ಉತ್ತಮ‌ ಸಮಾಜ‌ ನಿರ್ಮಾಣ ಮಾಡಬೇಕಾಗಿದೆ ಎಂದು ನಟಿ ಪೂಜಾಗಾಂಧಿ ತಿಳಿಸಿದರು.

ಇಂದು ನಗರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್, ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದ ವತಿಯಿಂದ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಜಾಥಾ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ಯುವಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಕೆಟ್ಟ ಚಟ, ಕೆಟ್ಟ ಆಲೋಚನೆಗಳಿಂದ ಹೊರಬಂದು ಆರೋಗ್ಯಯುತವಾಗಿ ಜೀವನ ನಡೆಸಬೇಕು. ಎಲ್ಲಿಯಾದರೂ ಮಾದಕವಸ್ತುಗಳ ಬಳಕೆ ಕಂಡುಬಂದಲ್ಲಿ ಕೂಡಲೇ ಪೊಲೀಸರ ಗಮನಕ್ಕೆ ತೆಗೆದುಕೊಂಡು ಬರಬೇಕು ಎಂದು ಹೇಳಿದರು.

ನಂತರ ನಟ ಗುರುನಂದನ್ ಮಾತನಾಡಿ, ಮಾದಕ ವಸ್ತುಗಳ ಬಳಕೆ ಮಾರಕರೋಗವಾಗಿ ಬೆಳೆಯುತ್ತಿರುವುದು ವಿಷಾದನೀಯವಾಗಿದೆ. ಒತ್ತಡ ಇದ್ದಾಗ ಯೋಗ ಮಾಡುವುದು, ಸಂಗೀತ ಕೇಳುವುದು, ಸಿನಿಮಾ ನೋಡುವುದು, ಕ್ರೀಡೆ, ಪ್ರವಾಸ, ಸೇರಿದಂತೆ ಇತರೆ ಒಳ್ಳೆ ಮನರಂಜನಾ ಚಟುವಟಿಕೆಗಳನ್ನು ಮಾಡಿ, ಆದರೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗಬೇಡಿ ಎಂದು ತಿಳಿಸಿದರು.

ಒಂದು ಬಾರಿ ಮಾದಕ ವ್ಯಸನಿಗಳಾದರೆ ವೈಯಕ್ತಿಕ ಬದುಕು ಹಾಳಾಗುವುದಲ್ಲದೇ ಕುಟುಂಬ, ಸಮಾಜಕ್ಕೂ ಬೇಡದವರಾಗುತ್ತೀರಿ, ಆದ್ದರಿಂದ ಎಲ್ಲರಿಗೂ ಉಜ್ವಲ ಭವಿಷ್ಯ ಇರುತ್ತದೆ ಅದನ್ನ ಸಾಕಾರಗೊಳಿಸಿಕೊಳ್ಳಬೇಕು ಎಂದು ಹೇಳಿದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ ಪಿಗಳಾದ, ಪುರುಷೋತ್ತಮ, ನಾಗರಾಜ್, ಡಿವೈಎಸ್ ಪಿ ರವಿ.ಪಿ, ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಮುನಿಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

6 hours ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

7 hours ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

13 hours ago

ಫುಟ್ ಪಾತ್…… (ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ….)

Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…

16 hours ago

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…

1 day ago

ಪೂರ್ವ ವೈಷಮ್ಯದ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…

1 day ago