ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಮಾದಕ ವಸ್ತುಗಳಿಗೆ ದಾಸರಾಗಿ ದೈಹಿಕ ಹಾಗೂ ಮಾನಸಿಕವಾಗಿ ತಮ್ಮ ಆರೋಗ್ಯವನ್ನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವಸ್ತು ಸೇವನೆ, ಮಾರಾಟ ಹಾಗೂ ಸಾಗಾಟ ಕಾನೂನಿನ ಪ್ರಕಾರ ಅಪರಾಧ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ ಜೊತೆ ನಾವು, ನೀವು ಕೈಜೋಡಿಸಿ ಉತ್ತಮ ಸಮಾಜ ನಿರ್ಮಾಣ ಮಾಡಬೇಕಾಗಿದೆ ಎಂದು ನಟಿ ಪೂಜಾಗಾಂಧಿ ತಿಳಿಸಿದರು.
ಇಂದು ನಗರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್, ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದ ವತಿಯಿಂದ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಜಾಥಾ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಂತರ ನಟ ಗುರುನಂದನ್ ಮಾತನಾಡಿ, ಮಾದಕ ವಸ್ತುಗಳ ಬಳಕೆ ಮಾರಕರೋಗವಾಗಿ ಬೆಳೆಯುತ್ತಿರುವುದು ವಿಷಾದನೀಯವಾಗಿದೆ. ಒತ್ತಡ ಇದ್ದಾಗ ಯೋಗ ಮಾಡುವುದು, ಸಂಗೀತ ಕೇಳುವುದು, ಸಿನಿಮಾ ನೋಡುವುದು, ಕ್ರೀಡೆ, ಪ್ರವಾಸ, ಸೇರಿದಂತೆ ಇತರೆ ಒಳ್ಳೆ ಮನರಂಜನಾ ಚಟುವಟಿಕೆಗಳನ್ನು ಮಾಡಿ, ಆದರೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗಬೇಡಿ ಎಂದು ತಿಳಿಸಿದರು.
ಒಂದು ಬಾರಿ ಮಾದಕ ವ್ಯಸನಿಗಳಾದರೆ ವೈಯಕ್ತಿಕ ಬದುಕು ಹಾಳಾಗುವುದಲ್ಲದೇ ಕುಟುಂಬ, ಸಮಾಜಕ್ಕೂ ಬೇಡದವರಾಗುತ್ತೀರಿ, ಆದ್ದರಿಂದ ಎಲ್ಲರಿಗೂ ಉಜ್ವಲ ಭವಿಷ್ಯ ಇರುತ್ತದೆ ಅದನ್ನ ಸಾಕಾರಗೊಳಿಸಿಕೊಳ್ಳಬೇಕು ಎಂದು ಹೇಳಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ ಪಿಗಳಾದ, ಪುರುಷೋತ್ತಮ, ನಾಗರಾಜ್, ಡಿವೈಎಸ್ ಪಿ ರವಿ.ಪಿ, ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಮುನಿಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…