ಮಾದಕ ವಸ್ತುಗಳ ಸೇವನೆ, ಬಳಕೆ, ಮಾರಾಟ ಶಿಕ್ಷಾರ್ಹ ಅಪರಾಧ- ಹೊಸಹಳ್ಳಿ ಠಾಣಾ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್

ಬೆಂಗಳೂರು ಜಿಲ್ಲಾ ಪೊಲೀಸ್, ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಇಂದು ಹೊಸಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ “ಮಾದಕ ವಸ್ತು ಜಾಗೃತಿ ಕಾರ್ಯಕ್ರಮ” ಹಮ್ಮಿಕೊಂಡಿದ್ದು, ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ರವರು ಶಾಲಾ ಮಕ್ಕಳಿಗೆ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು.

ಈ ವೇಳೆ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಮಾತನಾಡಿ, “ಡ್ರಗ್ ಮುಕ್ತ ಕರ್ನಾಟಕ” (Drug Free Karnataka) ಮಾಡುವ ನಿಟ್ಟಿನಲ್ಲಿ ಶಾಲಾ ಶಿಕ್ಷಕರಿಗೆ ಮತ್ತು ಸಾರ್ವಜನಿಕರಿಗೆ ಕೂಡಲೇ ಗೂಗಲ್ ಪ್ಲೇ ಸ್ಟೋರ್ ಮೂಲಕ “Drug Free Karnataka” ಆಪ್ ಡೌನ್ಲೋಡ್ ಮಾಡಿಕೊಂಡು ತಮ್ಮ ಸುತ್ತಮುತ್ತಲಿನಲ್ಲಿ ಮಾದಕ ವಸ್ತುಗಳ ಸೇವನೆ, ಬಳಕೆ, ಮಾರಾಟ ಹಾಗೂ ಬೆಳೆಯುವವರ ಬಗ್ಗೆ ಈ ಆಪ್ ಮೂಲಕ ಮಾಹಿತಿಯನ್ನು ನೀಡಬಹುದು, ತಮ್ಮ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು.

ನಂತರ ಮಾದಕ ವಸ್ತು ವಿರೋಧಿ ಜಾಗೃತಿ ಬಗ್ಗೆ ಶಾಲಾ ಮಕ್ಕಳು ಹೊಸಹಳ್ಳಿ ಬಸ್ ನಿಲ್ದಾಣ ಮತ್ತು ಸರ್ಕಲ್ ಬಳಿ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಡ್ರಗ್ ಫ್ರೀ ಕರ್ನಾಟಕ ಹಾಗೂ ಮಾದಕ ವಸ್ತು ಜಾಗೃತಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಲಾಯಿತು.

ಈ ವೇಳೆ ಶಿಕ್ಷಕರು, ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಇತರರು ಇದ್ದರು…

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

18 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago