ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಮ್ಯಾಪ್-ಡ್ರಗ್ಸ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ, ಪ್ರತಿ ಜಿಲ್ಲೆಗಳಿಗೂ ಮಾದಕ ವಸ್ತುಗಳ ನಿಯಂತ್ರಣಕ್ಕೆ ಗುರಿ ನಿಗದಿಪಡಿಸಿ, ರಾಜ್ಯವನ್ನು ಮಾದಕ ಮುಕ್ತ ರಾಜ್ಯವನ್ನಾಗಿಸಲು ಗುರಿ ಹೊಂದಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚಿಸಿದರು.
ಡ್ರಗ್ಸ್ ತಡೆಗೆ ಸಂಬಂಧಿಸಿದ ಮಾಹಿತಿ ಕನ್ನಡದಲ್ಲಿಯೂ ಲಭ್ಯವಾಗುವಂತೆ ವೆಬ್ಸೈಟ್ ನವೀಕರಿಸಬೇಕು. ಬೆಳಗಾವಿ ಜಿಲ್ಲೆಯಲ್ಲಿ ಅನುಸರಿಸುತ್ತಿರುವ ಕ್ರಮವನ್ನು ಮಾದರಿಯಾಗಿಸಿಕೊಂಡು ಇತರೆ ಜಿಲ್ಲೆಗಳು ಅನುಸರಿಸಲು ಸೂಚನೆ ನೀಡಿದರು. ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ತಡೆಯಲು ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು, ಕಸ್ಟಮ್ಸ್ ಅಧಿಕಾರಿಗಳನ್ನು ಸಮಿತಿಗೆ ಆಹ್ವಾನಿಸಲು ನಿರ್ದೇಶನ ನೀಡಿದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಿರ್ದೇಶನದಂತೆ ‘ಮಾದಕಮುಕ್ತ ರಾಜ್ಯ’ ನಿರ್ಮಾಣದ ದಿಶೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ನೋಂದಾಯಿತವಲ್ಲದ ಔಷಧ ಕಂಪನಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ಎಲ್ಲ ಔಷಧ ಅಂಗಡಿಗಳ ಮುಂದೆ “ವೈದ್ಯರ ಅನುಮತಿಯಿಲ್ಲದೆ ಮಾರಾಟ ನಿಷೇಧ” ಎಂಬ ಫಲಕ ಕಡ್ಡಾಯವಾಗಿ ಅಳವಡಿಸಲು ಕ್ರಮ ಜರುಗಿಸಬೇಕು. ವ್ಯಸನ ಮುಕ್ತ ಕೇಂದ್ರಗಳ ನಿರ್ವಹಣೆಗೆ ಸುಧಾರಿತ ಕಾರ್ಯಾಚರಣೆ ವಿಧಾನಗಳನ್ನು (ಎಸ್ ಓ ಪಿ) ರೂಪಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಜಿಲ್ಲಾಧಿಕಾರಿಗಳು ಪ್ರತಿ ತಿಂಗಳಿಗೊಮ್ಮೆ ಒಂದು ಕೇಂದ್ರಕ್ಕೆ ಭೇಟಿ ನೀಡಿ ವರದಿ ಸಲ್ಲಿಸಲು ಸೂಚಿಸಿದರು.
ಹಾಸ್ಟೇಲುಗಳಲ್ಲಿ ಡ್ರಗ್ ಟೆಸ್ಟಿಂಗ್ ಕಿಟ್ ಬಳಸಿ ವಿದ್ಯಾರ್ಥಿಗಳನ್ನು ಪರೀಕ್ಷಿಸಿ ರಕ್ಷಿಸಬೇಕು. ಪಾಸಿಟಿವ್ ಪ್ರಕರಣಗಳ ವಿರುದ್ಧ ಕ್ರಮ ಜರುಗಿಸಬೇಕು. ಎಎನ್ಟಿಎಫ್ ಮಾದರಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಉಪಸಮಿತಿಗಳನ್ನು ರಚಿಸಬೇಕು. ಕೆಂಪು ಪಟ್ಟಿಯಲ್ಲಿರುವ ಔಷಧಗಳ ಮಾರಾಟ ನಿಯಂತ್ರಿಸಲು ಮೇಲ್ವಿಚಾರಣೆ ಕಾರ್ಯ ಬಲಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳು ಸ್ಪಷ್ಟ ನಿರ್ದೇಶನಗಳನ್ನು ನೀಡಿದರು.
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…