ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಮ್ಯಾಪ್-ಡ್ರಗ್ಸ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ, ಪ್ರತಿ ಜಿಲ್ಲೆಗಳಿಗೂ ಮಾದಕ ವಸ್ತುಗಳ ನಿಯಂತ್ರಣಕ್ಕೆ ಗುರಿ ನಿಗದಿಪಡಿಸಿ, ರಾಜ್ಯವನ್ನು ಮಾದಕ ಮುಕ್ತ ರಾಜ್ಯವನ್ನಾಗಿಸಲು ಗುರಿ ಹೊಂದಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚಿಸಿದರು.
ಡ್ರಗ್ಸ್ ತಡೆಗೆ ಸಂಬಂಧಿಸಿದ ಮಾಹಿತಿ ಕನ್ನಡದಲ್ಲಿಯೂ ಲಭ್ಯವಾಗುವಂತೆ ವೆಬ್ಸೈಟ್ ನವೀಕರಿಸಬೇಕು. ಬೆಳಗಾವಿ ಜಿಲ್ಲೆಯಲ್ಲಿ ಅನುಸರಿಸುತ್ತಿರುವ ಕ್ರಮವನ್ನು ಮಾದರಿಯಾಗಿಸಿಕೊಂಡು ಇತರೆ ಜಿಲ್ಲೆಗಳು ಅನುಸರಿಸಲು ಸೂಚನೆ ನೀಡಿದರು. ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ತಡೆಯಲು ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು, ಕಸ್ಟಮ್ಸ್ ಅಧಿಕಾರಿಗಳನ್ನು ಸಮಿತಿಗೆ ಆಹ್ವಾನಿಸಲು ನಿರ್ದೇಶನ ನೀಡಿದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಿರ್ದೇಶನದಂತೆ ‘ಮಾದಕಮುಕ್ತ ರಾಜ್ಯ’ ನಿರ್ಮಾಣದ ದಿಶೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ನೋಂದಾಯಿತವಲ್ಲದ ಔಷಧ ಕಂಪನಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ಎಲ್ಲ ಔಷಧ ಅಂಗಡಿಗಳ ಮುಂದೆ “ವೈದ್ಯರ ಅನುಮತಿಯಿಲ್ಲದೆ ಮಾರಾಟ ನಿಷೇಧ” ಎಂಬ ಫಲಕ ಕಡ್ಡಾಯವಾಗಿ ಅಳವಡಿಸಲು ಕ್ರಮ ಜರುಗಿಸಬೇಕು. ವ್ಯಸನ ಮುಕ್ತ ಕೇಂದ್ರಗಳ ನಿರ್ವಹಣೆಗೆ ಸುಧಾರಿತ ಕಾರ್ಯಾಚರಣೆ ವಿಧಾನಗಳನ್ನು (ಎಸ್ ಓ ಪಿ) ರೂಪಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಜಿಲ್ಲಾಧಿಕಾರಿಗಳು ಪ್ರತಿ ತಿಂಗಳಿಗೊಮ್ಮೆ ಒಂದು ಕೇಂದ್ರಕ್ಕೆ ಭೇಟಿ ನೀಡಿ ವರದಿ ಸಲ್ಲಿಸಲು ಸೂಚಿಸಿದರು.
ಹಾಸ್ಟೇಲುಗಳಲ್ಲಿ ಡ್ರಗ್ ಟೆಸ್ಟಿಂಗ್ ಕಿಟ್ ಬಳಸಿ ವಿದ್ಯಾರ್ಥಿಗಳನ್ನು ಪರೀಕ್ಷಿಸಿ ರಕ್ಷಿಸಬೇಕು. ಪಾಸಿಟಿವ್ ಪ್ರಕರಣಗಳ ವಿರುದ್ಧ ಕ್ರಮ ಜರುಗಿಸಬೇಕು. ಎಎನ್ಟಿಎಫ್ ಮಾದರಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಉಪಸಮಿತಿಗಳನ್ನು ರಚಿಸಬೇಕು. ಕೆಂಪು ಪಟ್ಟಿಯಲ್ಲಿರುವ ಔಷಧಗಳ ಮಾರಾಟ ನಿಯಂತ್ರಿಸಲು ಮೇಲ್ವಿಚಾರಣೆ ಕಾರ್ಯ ಬಲಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳು ಸ್ಪಷ್ಟ ನಿರ್ದೇಶನಗಳನ್ನು ನೀಡಿದರು.
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…