ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಮ್ಯಾಪ್-ಡ್ರಗ್ಸ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ, ಪ್ರತಿ ಜಿಲ್ಲೆಗಳಿಗೂ ಮಾದಕ ವಸ್ತುಗಳ ನಿಯಂತ್ರಣಕ್ಕೆ ಗುರಿ ನಿಗದಿಪಡಿಸಿ, ರಾಜ್ಯವನ್ನು ಮಾದಕ ಮುಕ್ತ ರಾಜ್ಯವನ್ನಾಗಿಸಲು ಗುರಿ ಹೊಂದಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚಿಸಿದರು.
ಡ್ರಗ್ಸ್ ತಡೆಗೆ ಸಂಬಂಧಿಸಿದ ಮಾಹಿತಿ ಕನ್ನಡದಲ್ಲಿಯೂ ಲಭ್ಯವಾಗುವಂತೆ ವೆಬ್ಸೈಟ್ ನವೀಕರಿಸಬೇಕು. ಬೆಳಗಾವಿ ಜಿಲ್ಲೆಯಲ್ಲಿ ಅನುಸರಿಸುತ್ತಿರುವ ಕ್ರಮವನ್ನು ಮಾದರಿಯಾಗಿಸಿಕೊಂಡು ಇತರೆ ಜಿಲ್ಲೆಗಳು ಅನುಸರಿಸಲು ಸೂಚನೆ ನೀಡಿದರು. ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ತಡೆಯಲು ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು, ಕಸ್ಟಮ್ಸ್ ಅಧಿಕಾರಿಗಳನ್ನು ಸಮಿತಿಗೆ ಆಹ್ವಾನಿಸಲು ನಿರ್ದೇಶನ ನೀಡಿದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಿರ್ದೇಶನದಂತೆ ‘ಮಾದಕಮುಕ್ತ ರಾಜ್ಯ’ ನಿರ್ಮಾಣದ ದಿಶೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ನೋಂದಾಯಿತವಲ್ಲದ ಔಷಧ ಕಂಪನಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ಎಲ್ಲ ಔಷಧ ಅಂಗಡಿಗಳ ಮುಂದೆ “ವೈದ್ಯರ ಅನುಮತಿಯಿಲ್ಲದೆ ಮಾರಾಟ ನಿಷೇಧ” ಎಂಬ ಫಲಕ ಕಡ್ಡಾಯವಾಗಿ ಅಳವಡಿಸಲು ಕ್ರಮ ಜರುಗಿಸಬೇಕು. ವ್ಯಸನ ಮುಕ್ತ ಕೇಂದ್ರಗಳ ನಿರ್ವಹಣೆಗೆ ಸುಧಾರಿತ ಕಾರ್ಯಾಚರಣೆ ವಿಧಾನಗಳನ್ನು (ಎಸ್ ಓ ಪಿ) ರೂಪಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಜಿಲ್ಲಾಧಿಕಾರಿಗಳು ಪ್ರತಿ ತಿಂಗಳಿಗೊಮ್ಮೆ ಒಂದು ಕೇಂದ್ರಕ್ಕೆ ಭೇಟಿ ನೀಡಿ ವರದಿ ಸಲ್ಲಿಸಲು ಸೂಚಿಸಿದರು.
ಹಾಸ್ಟೇಲುಗಳಲ್ಲಿ ಡ್ರಗ್ ಟೆಸ್ಟಿಂಗ್ ಕಿಟ್ ಬಳಸಿ ವಿದ್ಯಾರ್ಥಿಗಳನ್ನು ಪರೀಕ್ಷಿಸಿ ರಕ್ಷಿಸಬೇಕು. ಪಾಸಿಟಿವ್ ಪ್ರಕರಣಗಳ ವಿರುದ್ಧ ಕ್ರಮ ಜರುಗಿಸಬೇಕು. ಎಎನ್ಟಿಎಫ್ ಮಾದರಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಉಪಸಮಿತಿಗಳನ್ನು ರಚಿಸಬೇಕು. ಕೆಂಪು ಪಟ್ಟಿಯಲ್ಲಿರುವ ಔಷಧಗಳ ಮಾರಾಟ ನಿಯಂತ್ರಿಸಲು ಮೇಲ್ವಿಚಾರಣೆ ಕಾರ್ಯ ಬಲಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳು ಸ್ಪಷ್ಟ ನಿರ್ದೇಶನಗಳನ್ನು ನೀಡಿದರು.
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…