ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಕಟ್ಟುನಿಟ್ಟಿನ ಕ್ರಮ- ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್

ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಮ್ಯಾಪ್-ಡ್ರಗ್ಸ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ, ಪ್ರತಿ ಜಿಲ್ಲೆಗಳಿಗೂ ಮಾದಕ ವಸ್ತುಗಳ ನಿಯಂತ್ರಣಕ್ಕೆ ಗುರಿ ನಿಗದಿಪಡಿಸಿ, ರಾಜ್ಯವನ್ನು ಮಾದಕ ಮುಕ್ತ ರಾಜ್ಯವನ್ನಾಗಿಸಲು ಗುರಿ ಹೊಂದಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚಿಸಿದರು.

ಡ್ರಗ್ಸ್ ತಡೆಗೆ ಸಂಬಂಧಿಸಿದ ಮಾಹಿತಿ ಕನ್ನಡದಲ್ಲಿಯೂ ಲಭ್ಯವಾಗುವಂತೆ ವೆಬ್‌ಸೈಟ್ ನವೀಕರಿಸಬೇಕು. ಬೆಳಗಾವಿ ಜಿಲ್ಲೆಯಲ್ಲಿ ಅನುಸರಿಸುತ್ತಿರುವ ಕ್ರಮವನ್ನು ಮಾದರಿಯಾಗಿಸಿಕೊಂಡು ಇತರೆ ಜಿಲ್ಲೆಗಳು ಅನುಸರಿಸಲು ಸೂಚನೆ ನೀಡಿದರು. ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ತಡೆಯಲು ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು, ಕಸ್ಟಮ್ಸ್ ಅಧಿಕಾರಿಗಳನ್ನು ಸಮಿತಿಗೆ ಆಹ್ವಾನಿಸಲು ನಿರ್ದೇಶನ ನೀಡಿದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಿರ್ದೇಶನದಂತೆ ‘ಮಾದಕಮುಕ್ತ ರಾಜ್ಯ’ ನಿರ್ಮಾಣದ ದಿಶೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ನೋಂದಾಯಿತವಲ್ಲದ ಔಷಧ ಕಂಪನಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ಎಲ್ಲ ಔಷಧ ಅಂಗಡಿಗಳ ಮುಂದೆ “ವೈದ್ಯರ ಅನುಮತಿಯಿಲ್ಲದೆ ಮಾರಾಟ ನಿಷೇಧ” ಎಂಬ ಫಲಕ ಕಡ್ಡಾಯವಾಗಿ ಅಳವಡಿಸಲು ಕ್ರಮ ಜರುಗಿಸಬೇಕು. ವ್ಯಸನ ಮುಕ್ತ ಕೇಂದ್ರಗಳ ನಿರ್ವಹಣೆಗೆ ಸುಧಾರಿತ ಕಾರ್ಯಾಚರಣೆ ವಿಧಾನಗಳನ್ನು (ಎಸ್ ಓ ಪಿ) ರೂಪಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಜಿಲ್ಲಾಧಿಕಾರಿಗಳು ಪ್ರತಿ ತಿಂಗಳಿಗೊಮ್ಮೆ ಒಂದು ಕೇಂದ್ರಕ್ಕೆ ಭೇಟಿ ನೀಡಿ ವರದಿ ಸಲ್ಲಿಸಲು ಸೂಚಿಸಿದರು.

ಹಾಸ್ಟೇಲುಗಳಲ್ಲಿ ಡ್ರಗ್ ಟೆಸ್ಟಿಂಗ್ ಕಿಟ್ ಬಳಸಿ ವಿದ್ಯಾರ್ಥಿಗಳನ್ನು ಪರೀಕ್ಷಿಸಿ ರಕ್ಷಿಸಬೇಕು. ಪಾಸಿಟಿವ್ ಪ್ರಕರಣಗಳ ವಿರುದ್ಧ ಕ್ರಮ ಜರುಗಿಸಬೇಕು. ಎಎನ್‌ಟಿಎಫ್ ಮಾದರಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಉಪಸಮಿತಿಗಳನ್ನು ರಚಿಸಬೇಕು. ಕೆಂಪು ಪಟ್ಟಿಯಲ್ಲಿರುವ ಔಷಧಗಳ  ಮಾರಾಟ ನಿಯಂತ್ರಿಸಲು ಮೇಲ್ವಿಚಾರಣೆ ಕಾರ್ಯ ಬಲಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳು ಸ್ಪಷ್ಟ ನಿರ್ದೇಶನಗಳನ್ನು ನೀಡಿದರು.

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

12 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

13 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

16 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

23 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

1 day ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

2 days ago