ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಕಟ್ಟುನಿಟ್ಟಿನ ಕ್ರಮ- ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್

ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಮ್ಯಾಪ್-ಡ್ರಗ್ಸ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ, ಪ್ರತಿ ಜಿಲ್ಲೆಗಳಿಗೂ ಮಾದಕ ವಸ್ತುಗಳ ನಿಯಂತ್ರಣಕ್ಕೆ ಗುರಿ ನಿಗದಿಪಡಿಸಿ, ರಾಜ್ಯವನ್ನು ಮಾದಕ ಮುಕ್ತ ರಾಜ್ಯವನ್ನಾಗಿಸಲು ಗುರಿ ಹೊಂದಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚಿಸಿದರು.

ಡ್ರಗ್ಸ್ ತಡೆಗೆ ಸಂಬಂಧಿಸಿದ ಮಾಹಿತಿ ಕನ್ನಡದಲ್ಲಿಯೂ ಲಭ್ಯವಾಗುವಂತೆ ವೆಬ್‌ಸೈಟ್ ನವೀಕರಿಸಬೇಕು. ಬೆಳಗಾವಿ ಜಿಲ್ಲೆಯಲ್ಲಿ ಅನುಸರಿಸುತ್ತಿರುವ ಕ್ರಮವನ್ನು ಮಾದರಿಯಾಗಿಸಿಕೊಂಡು ಇತರೆ ಜಿಲ್ಲೆಗಳು ಅನುಸರಿಸಲು ಸೂಚನೆ ನೀಡಿದರು. ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ತಡೆಯಲು ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು, ಕಸ್ಟಮ್ಸ್ ಅಧಿಕಾರಿಗಳನ್ನು ಸಮಿತಿಗೆ ಆಹ್ವಾನಿಸಲು ನಿರ್ದೇಶನ ನೀಡಿದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಿರ್ದೇಶನದಂತೆ ‘ಮಾದಕಮುಕ್ತ ರಾಜ್ಯ’ ನಿರ್ಮಾಣದ ದಿಶೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ನೋಂದಾಯಿತವಲ್ಲದ ಔಷಧ ಕಂಪನಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ಎಲ್ಲ ಔಷಧ ಅಂಗಡಿಗಳ ಮುಂದೆ “ವೈದ್ಯರ ಅನುಮತಿಯಿಲ್ಲದೆ ಮಾರಾಟ ನಿಷೇಧ” ಎಂಬ ಫಲಕ ಕಡ್ಡಾಯವಾಗಿ ಅಳವಡಿಸಲು ಕ್ರಮ ಜರುಗಿಸಬೇಕು. ವ್ಯಸನ ಮುಕ್ತ ಕೇಂದ್ರಗಳ ನಿರ್ವಹಣೆಗೆ ಸುಧಾರಿತ ಕಾರ್ಯಾಚರಣೆ ವಿಧಾನಗಳನ್ನು (ಎಸ್ ಓ ಪಿ) ರೂಪಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಜಿಲ್ಲಾಧಿಕಾರಿಗಳು ಪ್ರತಿ ತಿಂಗಳಿಗೊಮ್ಮೆ ಒಂದು ಕೇಂದ್ರಕ್ಕೆ ಭೇಟಿ ನೀಡಿ ವರದಿ ಸಲ್ಲಿಸಲು ಸೂಚಿಸಿದರು.

ಹಾಸ್ಟೇಲುಗಳಲ್ಲಿ ಡ್ರಗ್ ಟೆಸ್ಟಿಂಗ್ ಕಿಟ್ ಬಳಸಿ ವಿದ್ಯಾರ್ಥಿಗಳನ್ನು ಪರೀಕ್ಷಿಸಿ ರಕ್ಷಿಸಬೇಕು. ಪಾಸಿಟಿವ್ ಪ್ರಕರಣಗಳ ವಿರುದ್ಧ ಕ್ರಮ ಜರುಗಿಸಬೇಕು. ಎಎನ್‌ಟಿಎಫ್ ಮಾದರಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಉಪಸಮಿತಿಗಳನ್ನು ರಚಿಸಬೇಕು. ಕೆಂಪು ಪಟ್ಟಿಯಲ್ಲಿರುವ ಔಷಧಗಳ  ಮಾರಾಟ ನಿಯಂತ್ರಿಸಲು ಮೇಲ್ವಿಚಾರಣೆ ಕಾರ್ಯ ಬಲಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳು ಸ್ಪಷ್ಟ ನಿರ್ದೇಶನಗಳನ್ನು ನೀಡಿದರು.

Ramesh Babu

Journalist

Recent Posts

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 hour ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 hour ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

9 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago