ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ಪೂರೈಕೆಯನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ, ರೊಚ್ಚಿಗೆದ್ದ ಇಬ್ಬರು ವಿಚಾರಣಾಧೀನ ಕೈದಿಗಳು ಜೈಲರ್ ಹಾಗೂ ಮೂವರು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ.
ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಜೈಲರ್ ಮತ್ತು ಇತರೆ ಸಿಬ್ಬಂದಿಗಳನ್ನು ಕಾರವಾರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ವಿವರ:
ಮಂಗಳೂರು ಮೂಲದ ಮೊಹಮ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ್ ನಿಹಾಲ್ ಎಂಬುವವರೇ ದಾಂಧಲೆ ನಡೆಸಿದ ಆರೋಪಿಗಳು. ಇವರು ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಮಂಗಳೂರು ಜೈಲಿನಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾದ ಕಾರಣ, ಸುರಕ್ಷತಾ ದೃಷ್ಟಿಯಿಂದ ಇವರನ್ನು ಎರಡು ತಿಂಗಳ ಹಿಂದಷ್ಟೇ ಕಾರವಾರ ಜೈಲಿಗೆ ಸ್ಥಳಾಂತರಿಸಲಾಗಿತ್ತು.
ಮಾದಕ ವಸ್ತುಗಳಿಗಾಗಿ ಡಿಮ್ಯಾಂಡ್:
ಕಾರವಾರ ಜೈಲಿನಲ್ಲಿ ಇತ್ತೀಚೆಗೆ ಮಾದಕ ವಸ್ತುಗಳ ಪೂರೈಕೆಯ ಮೇಲೆ ಕಠಿಣ ನಿಗಾ ಇಡಲಾಗಿತ್ತು. ಇದರಿಂದ ಕಂಗಾಲಾಗಿದ್ದ ಆರೋಪಿಗಳು, ತಮಗೆ ಮಾದಕ ವಸ್ತುಗಳನ್ನು ಪೂರೈಸುವಂತೆ ಜೈಲರ್ ಮೇಲೆ ಒತ್ತಡ ಹೇರುತ್ತಿದ್ದರು. ಜೈಲರ್ ಹಾಗೂ ಸಿಬ್ಬಂದಿ ಇದಕ್ಕೆ ಒಪ್ಪದಿದ್ದಾಗ, ಕೋಪಗೊಂಡ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ರೂಮಿನ ಬಾಗಿಲು ಒಡೆದು, ಏಕಾಏಕಿ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿದ್ದಾರೆ.
ಎಸ್ಪಿ ಹೇಳಿದ್ದೇನು?
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, “ಆರೋಪಿ ಮೊಹಮ್ಮದ್ ಅಬ್ದುಲ್ ಫಯಾನ್ ಮೇಲೆ ಈಗಾಗಲೇ 13 ಪ್ರಕರಣಗಳಿವೆ ಹಾಗೂ ಕೌಶಿಕ್ ನಿಹಾಲ್ ಮೇಲೆ 4 ಪ್ರಕರಣಗಳಿವೆ. ಜೈಲಿನಲ್ಲಿ ದಾಂಧಲೆ ನಡೆಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಸಂಬಂಧ ಹೊಸದಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಾದಕ ವಸ್ತುಗಳ ಸಾಗಾಟ ಜಾಲದ ಮೇಲೂ ಕಠಿಣ ಕ್ರಮ ಕೈಗೊಳ್ಳುತ್ತೇವೆ,” ಎಂದು ತಿಳಿಸಿದ್ದಾರೆ.
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…
ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…
ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…
ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…