ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ; ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಅಗತ್ಯ ಕ್ರಮ ವಹಿಸಿ: ಜಿಲ್ಲಾಧಿಕಾರಿ ಆರ್.ಲತಾ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಸುಗಮ ಹಾಗೂ ಸುಸೂತ್ರ ಚುನಾವಣಾ ಕಾರ್ಯ ನಿರ್ವಹಣೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಆರ್.ಲತಾ ಅವರು ಕರೆ ನೀಡಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಮಾದರಿ ನೀತಿ ಸಂಹಿತೆ ಮತ್ತು ಇನ್ನಿತರೆ ಚುನಾವಣಾ ವಿಷಯಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜಕೀಯ ಪಕ್ಷಗಳು ಹಾಗೂ ಸರ್ಕಾರಿ ಜಾಹೀರಾತಿಗೆ ಸಂಬಂಧಿಸಿದ ಎಲ್ಲಾ ಗೋಡೆಬರಹ, ಪೋಸ್ಟರ್ಸ್, ಬ್ಯಾನರ್ಸ್, ಫ್ಲೆಕ್ಸ್ ಇತ್ಯಾದಿಗಳು ಸಂಪೂರ್ಣವಾಗಿ ತೆರವುಗೊಂಡಿರುವುದರ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು. ಸರ್ಕಾರಿ ಪ್ರವಾಸಿ ಮಂದಿರ, ಪರಿವೀಕ್ಷಣಾ ಮಂದಿರಗಳನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದ್ದು ವಿರೂಪಗೊಳಿಸಿದ್ದಲ್ಲಿ ನವೀಕರಣಕ್ಕೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾದ್ಯಂತ ಇರುವ ಪ್ರತಿ ಮತಗಟ್ಟೆಯೂ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದ್ದು ಅಧಿಕಾರಿಗಳು ಭೌತಿಕ ಪರಿಶೀಲನೆ ನಡೆಸಿ ಮತ್ತೊಮ್ಮೆ ಖಚಿತ ಪಡಿಸಿಕೊಳ್ಳಬೇಕು ಎಂದರು.

ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವ ಹಿನ್ನೆಲೆಯಲ್ಲಿ ಸಭೆ, ಸಮಾರಂಭ ಗಳಿಗೆ ಕಡ್ಡಾಯ ಅನುಮತಿ ಹಾಗೂ ವೆಚ್ಚ ನಿರ್ವಹಣೆಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆಯಬೇಕು ಎಂದು ಸೂಚಿಸಿದರು.

ಜಿಲ್ಲೆಯ ನಾಲ್ಕು ತಾಲೂಕು ಕಚೇರಿಯಲ್ಲಿ 24/7 ನಿರ್ವಹಣಾ ಕೇಂದ್ರ ಸ್ಥಾಪಿಸಲಾಗಿದ್ದು, ಇವಿಎಂ ಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮ ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಸ್ವೀಪ್ ಚಟುವಟಿಕೆಗಳ ಮೂಲಕ ಆಯೋಜಿಸಬೇಕು, ಪಿಡಬ್ಲ್ಯೂಡಿ ಮತದಾರರನ್ನು ಮತ್ತು 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಗುರುತಿಸಿ, 12ಡಿ ನಮೂನೆ ನೀಡುವುದು.

ಸದರಿಯವರಿಗೆ ಎಲ್ಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ನಿರ್ದೇಶಿಸಿದರು. 80ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಆದಷ್ಟೂ ಮತಗಟ್ಟೆಗಳಿಗೇ ಬಂದು ಮತ ಚಲಾಯಿಸಲು ಅಧಿಕಾರಿಗಳು ಮನವೊಲಿಸಬೇಕು ಎಂದರು.

ಚುನಾವಣಾ ನಿರ್ವಹಣೆ, ಕಾನೂನು ಸುವ್ಯವಸ್ಥೆ, ಮಾದರಿ ನೀತಿ ಸಂಹಿತೆ, ಚುನಾವಣಾ ಕಾರ್ಯಗಳ ಸುಗಮ ನಿರ್ವಹಣೆಗೆ ಸಂಬಂಧಿಸಿದಂತೆ ಅವರು ಮಾತನಾಡಿದರು.

ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆ ನೇತೃತ್ವದಲ್ಲಿ ಚೆಕ್‌ಪೋಸ್ಟ್ಗಳಿಗೆ ಎಸ್‌ಎಸ್‌ಟಿ ತಂಡಗಳನ್ನು ಈಗಾಗಲೇ ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸಾಕಷ್ಟು ಜಾಗರೂಕರಾಗಿದ್ದು ವಾಹನಗಳ ತಪಾಸಣೆ ಕಟ್ಟುನಿಟ್ಟಾಗಿ ನಡೆಸಲು ಸೂಚಿಸಿದರು.

ಸೂಕ್ಷ್ಮ ಮತಗಟ್ಟೆ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸೂಕ್ತ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಬೇಕೆಂದರು.

ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ, ಸೆಕ್ಟರ್ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ ಕೊಂಡು ಕಾರ್ಯ ನಿರ್ವಹಿಸಲು ಸೂಚಿಸಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರವಿ ಎಂ ತಿರ್ಲಾಪುರ ಅವರು ಮಾತನಾಡಿ ಸ್ವೀಪ್ ಚಟುವಟಿಕೆ ಗಳು ಮುಖಾಂತರ ಹೆಚ್ಚು ಹೆಚ್ಚು ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಮಟ್ಟದ ತರಬೇತುದಾರರಾದ ಡಾ. ಅಮೀರ್ ಪಾಷಾ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ನಾಲ್ಕು ತಾಲ್ಲೂಕುಗಳ ತಹಶೀಲ್ದಾರ್‌ಗಳು, ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

7 minutes ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

5 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

6 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

6 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

8 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

9 hours ago