ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಮಾದಿಗ ಸಮುದಾಯ ಇನ್ನೂ ಹಿಂದುಳಿದಿದೆ. ಸಮುದಾಯ ಎಲ್ಲಾ ರಂಗದಲ್ಲಿ ಮುಂದೆ ಬರಲು ನಾವೆಲ್ಲರೂ ಶಿಕ್ಷಣ ಪಡೆದು, ಸಂಘಟಿತರಾಗಿ, ಹೋರಾಟ ಮಾಡಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಬೇಕಾಗಿದೆ ಎಂದು ಮಾದರ ಮಹಾಸಭಾ ಜಿಲ್ಲಾಧ್ಯಕ್ಷ ಸುಬ್ಬರಾಜು ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ಜಿಲ್ಲಾಧ್ಯಕ್ಷ ಸುಬ್ಬರಾಜು ನೇತೃತ್ವದಲ್ಲಿ ನೂತನವಾಗಿ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳನ್ನು ನೇಮಕ ಮಾಡಿ ಮಾತನಾಡಿದ ಅವರು, ಪಕ್ಷಾತೀತವಾಗಿ ಮಾದರ ಮಹಾಸಭಾ ಸ್ಥಾಪನೆ ಮಾಡಲಾಗಿದೆ. ಮಾದಿಗ ಸಮುದಾಯ ಏಳಿಗೆಗಾಗಿ ಮಾದರ ಮಹಾಸಭಾ ಸಾಕಷ್ಟು ಕೆಲಸ ಮಾಡುತ್ತಿದೆ ಎಂದರು.
ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ನೂತನವಾಗಿ ಆಯ್ಕೆಯಾದವರು ಹೆಚ್ಚೆಚ್ಚು ಸದಸ್ಯತ್ವ ನೋಂದಣಿ ಮಾಡಿಸಬೇಕು. ರಾಜ್ಯದಲ್ಲಿ ಶೋಷಿತ ಸಮುದಾಯಗಳಲ್ಲಿ ಮಾದಿಗ ಸಮುದಾಯವೂ ಒಂದು. ಉದ್ಯೋಗ, ಶೈಕ್ಷಣಿಕ, ಆರ್ಥಿಕ ರಾಜಕೀಯವಾಗಿ ಅಭಿವೃದ್ಧಿ ಹೊಂದಲು ನಾವೆಲ್ಲರೂ ಸಂಘಟಿತರಾಗಬೇಕು. ಜನಾಂಗ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ.
ತಾಲ್ಲೂಕು ನೂತನ ಅಧ್ಯಕ್ಷ ತಳವಾರ ನಾಗರಾಜು ಮಾತನಾಡಿ, ನನಗೆ ತಾಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಸಂತಸ ತಂದಿದೆ. ಸದಸ್ಯತ್ವ ನೋಂದಣಿಗೆ ಶ್ರಮಿಸುತ್ತೇನೆ. ಮಾದರ ಮಹಾಸಭಾ ತತ್ವಾದರ್ಶಗಳಿಗೆ ಬದ್ಧನಾಗಿರುತ್ತೇನೆ ಎಂದರು.
ಮುಂದಿನ ದಿನಗಳಲ್ಲಿ ರಾಜಕೀಯ, ಉದ್ಯೋಗ ಹಾಗೂ ಎಲ್ಲಾ ರಂಗಗಳಲ್ಲಿ ಮೀಸಲಾತಿ ಸಿಗಬೇಕು. ಮಾದಿಗ ಸಮುದಾಯ ಶೋಷಿತರಲ್ಲಿ ಶೋಷಿತರು. ಈಗಿರುವ ಒಳ ಮೀಸಲಾತಿ ಸಾಕಾಗಲ್ಲ, ಇನ್ನೂ ಹೆಚ್ಚಿಗೆ ಮಾಡಬೇಕು ಎಂದು ಒತ್ತಾಯಿಸಿದರು..
ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ನೂತನವಾಗಿ ಆಯ್ಕೆಯಾದವರ ಪಟ್ಟಿ
ಅಧ್ಯಕ್ಷ- ತಳವಾರ ನಾಗರಾಜು
ಉಪಾಧ್ಯಕ್ಷ- ಟಿ.ಡಿ ಮುನಿಯಪ್ಪ
ಕಾರ್ಯದರ್ಶಿ- ತೂಬಗೆರೆ ವೆಂಕಟೇಶ್
ಖಜಾಂಚಿ – ಲಕ್ಕಪ್ಪ
ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ನೂತನವಾಗಿ ಆಯ್ಕೆಯಾದವರಿಗೆ ಹೂಮಾಲೆ, ಸಿಹಿ ತಿನಿಸುವ ಮೂಲಕ ಶುಭಕೋರಲಾಯಿತು..
ಈ ವೇಳೆ ಕರ್ನಾಟಕ ಮಾದಾರ ಮಹಾಸಭಾ ಜಿಲ್ಲಾ ಕಾರ್ಯದರ್ಶಿ ಬಚ್ಚಹಳ್ಳಿ ನಾಗರಾಜ್, ರಾಜ್ಯ ಸಮಿತಿ ಸದಸ್ಯ ರಾಮಕೃಷ್ಣ, ತಾಲೂಕು ಉಪಾಧ್ಯಕ್ಷ ಟಿ.ಡಿ ಮುನಿಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…