ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಮಾದಿಗ ಸಮುದಾಯ ಇನ್ನೂ ಹಿಂದುಳಿದಿದೆ. ಸಮುದಾಯ ಎಲ್ಲಾ ರಂಗದಲ್ಲಿ ಮುಂದೆ ಬರಲು ನಾವೆಲ್ಲರೂ ಶಿಕ್ಷಣ ಪಡೆದು, ಸಂಘಟಿತರಾಗಿ, ಹೋರಾಟ ಮಾಡಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಬೇಕಾಗಿದೆ ಎಂದು ಮಾದರ ಮಹಾಸಭಾ ಜಿಲ್ಲಾಧ್ಯಕ್ಷ ಸುಬ್ಬರಾಜು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ಜಿಲ್ಲಾಧ್ಯಕ್ಷ ಸುಬ್ಬರಾಜು ನೇತೃತ್ವದಲ್ಲಿ ನೂತನವಾಗಿ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳನ್ನು ನೇಮಕ ಮಾಡಿ ಮಾತನಾಡಿದ ಅವರು, ಪಕ್ಷಾತೀತವಾಗಿ ಮಾದರ ಮಹಾಸಭಾ ಸ್ಥಾಪನೆ ಮಾಡಲಾಗಿದೆ. ಮಾದಿಗ ಸಮುದಾಯ ಏಳಿಗೆಗಾಗಿ ಮಾದರ ಮಹಾಸಭಾ ಸಾಕಷ್ಟು ಕೆಲಸ ಮಾಡುತ್ತಿದೆ ಎಂದರು.

ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ನೂತನವಾಗಿ ಆಯ್ಕೆಯಾದವರು ಹೆಚ್ಚೆಚ್ಚು ಸದಸ್ಯತ್ವ ನೋಂದಣಿ ಮಾಡಿಸಬೇಕು.‌ ರಾಜ್ಯದಲ್ಲಿ ಶೋಷಿತ ಸಮುದಾಯಗಳಲ್ಲಿ‌ ಮಾದಿಗ ಸಮುದಾಯವೂ ಒಂದು. ಉದ್ಯೋಗ, ಶೈಕ್ಷಣಿಕ, ಆರ್ಥಿಕ ರಾಜಕೀಯವಾಗಿ ಅಭಿವೃದ್ಧಿ ಹೊಂದಲು ನಾವೆಲ್ಲರೂ ಸಂಘಟಿತರಾಗಬೇಕು. ಜನಾಂಗ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ.

ತಾಲ್ಲೂಕು ನೂತನ ಅಧ್ಯಕ್ಷ ತಳವಾರ ನಾಗರಾಜು ಮಾತನಾಡಿ, ನನಗೆ ತಾಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಸಂತಸ ತಂದಿದೆ. ಸದಸ್ಯತ್ವ ನೋಂದಣಿಗೆ ಶ್ರಮಿಸುತ್ತೇನೆ. ಮಾದರ ಮಹಾಸಭಾ ತತ್ವಾದರ್ಶಗಳಿಗೆ ಬದ್ಧನಾಗಿರುತ್ತೇನೆ ಎಂದರು.

ಮುಂದಿನ ದಿನಗಳಲ್ಲಿ ರಾಜಕೀಯ, ಉದ್ಯೋಗ ಹಾಗೂ ಎಲ್ಲಾ ರಂಗಗಳಲ್ಲಿ ಮೀಸಲಾತಿ ಸಿಗಬೇಕು. ಮಾದಿಗ ಸಮುದಾಯ ಶೋಷಿತರಲ್ಲಿ ಶೋಷಿತರು.‌ ಈಗಿರುವ ಒಳ ಮೀಸಲಾತಿ ಸಾಕಾಗಲ್ಲ, ಇನ್ನೂ ಹೆಚ್ಚಿಗೆ ಮಾಡಬೇಕು ಎಂದು ಒತ್ತಾಯಿಸಿದರು..

ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ನೂತನವಾಗಿ ಆಯ್ಕೆಯಾದವರ ಪಟ್ಟಿ

ಅಧ್ಯಕ್ಷ- ತಳವಾರ ನಾಗರಾಜು

ಉಪಾಧ್ಯಕ್ಷ- ಟಿ.ಡಿ ಮುನಿಯಪ್ಪ

ಕಾರ್ಯದರ್ಶಿ- ತೂಬಗೆರೆ ವೆಂಕಟೇಶ್

ಖಜಾಂಚಿ – ಲಕ್ಕಪ್ಪ

ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ನೂತನವಾಗಿ ಆಯ್ಕೆಯಾದವರಿಗೆ ಹೂಮಾಲೆ, ಸಿಹಿ ತಿನಿಸುವ ಮೂಲಕ ಶುಭಕೋರಲಾಯಿತು..

ಈ ವೇಳೆ ಕರ್ನಾಟಕ ಮಾದಾರ ಮಹಾಸಭಾ ಜಿಲ್ಲಾ ಕಾರ್ಯದರ್ಶಿ ಬಚ್ಚಹಳ್ಳಿ ನಾಗರಾಜ್, ರಾಜ್ಯ ಸಮಿತಿ ಸದಸ್ಯ ರಾಮಕೃಷ್ಣ, ತಾಲೂಕು ಉಪಾಧ್ಯಕ್ಷ ಟಿ.ಡಿ ಮುನಿಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

9 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

10 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

11 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

11 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

15 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

17 hours ago