ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಮಾದಿಗ ಸಮುದಾಯ ಇನ್ನೂ ಹಿಂದುಳಿದಿದೆ. ಸಮುದಾಯ ಎಲ್ಲಾ ರಂಗದಲ್ಲಿ ಮುಂದೆ ಬರಲು ನಾವೆಲ್ಲರೂ ಶಿಕ್ಷಣ ಪಡೆದು, ಸಂಘಟಿತರಾಗಿ, ಹೋರಾಟ ಮಾಡಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಬೇಕಾಗಿದೆ ಎಂದು ಮಾದರ ಮಹಾಸಭಾ ಜಿಲ್ಲಾಧ್ಯಕ್ಷ ಸುಬ್ಬರಾಜು ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ಜಿಲ್ಲಾಧ್ಯಕ್ಷ ಸುಬ್ಬರಾಜು ನೇತೃತ್ವದಲ್ಲಿ ನೂತನವಾಗಿ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳನ್ನು ನೇಮಕ ಮಾಡಿ ಮಾತನಾಡಿದ ಅವರು, ಪಕ್ಷಾತೀತವಾಗಿ ಮಾದರ ಮಹಾಸಭಾ ಸ್ಥಾಪನೆ ಮಾಡಲಾಗಿದೆ. ಮಾದಿಗ ಸಮುದಾಯ ಏಳಿಗೆಗಾಗಿ ಮಾದರ ಮಹಾಸಭಾ ಸಾಕಷ್ಟು ಕೆಲಸ ಮಾಡುತ್ತಿದೆ ಎಂದರು.
ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ನೂತನವಾಗಿ ಆಯ್ಕೆಯಾದವರು ಹೆಚ್ಚೆಚ್ಚು ಸದಸ್ಯತ್ವ ನೋಂದಣಿ ಮಾಡಿಸಬೇಕು. ರಾಜ್ಯದಲ್ಲಿ ಶೋಷಿತ ಸಮುದಾಯಗಳಲ್ಲಿ ಮಾದಿಗ ಸಮುದಾಯವೂ ಒಂದು. ಉದ್ಯೋಗ, ಶೈಕ್ಷಣಿಕ, ಆರ್ಥಿಕ ರಾಜಕೀಯವಾಗಿ ಅಭಿವೃದ್ಧಿ ಹೊಂದಲು ನಾವೆಲ್ಲರೂ ಸಂಘಟಿತರಾಗಬೇಕು. ಜನಾಂಗ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ.
ತಾಲ್ಲೂಕು ನೂತನ ಅಧ್ಯಕ್ಷ ತಳವಾರ ನಾಗರಾಜು ಮಾತನಾಡಿ, ನನಗೆ ತಾಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಸಂತಸ ತಂದಿದೆ. ಸದಸ್ಯತ್ವ ನೋಂದಣಿಗೆ ಶ್ರಮಿಸುತ್ತೇನೆ. ಮಾದರ ಮಹಾಸಭಾ ತತ್ವಾದರ್ಶಗಳಿಗೆ ಬದ್ಧನಾಗಿರುತ್ತೇನೆ ಎಂದರು.
ಮುಂದಿನ ದಿನಗಳಲ್ಲಿ ರಾಜಕೀಯ, ಉದ್ಯೋಗ ಹಾಗೂ ಎಲ್ಲಾ ರಂಗಗಳಲ್ಲಿ ಮೀಸಲಾತಿ ಸಿಗಬೇಕು. ಮಾದಿಗ ಸಮುದಾಯ ಶೋಷಿತರಲ್ಲಿ ಶೋಷಿತರು. ಈಗಿರುವ ಒಳ ಮೀಸಲಾತಿ ಸಾಕಾಗಲ್ಲ, ಇನ್ನೂ ಹೆಚ್ಚಿಗೆ ಮಾಡಬೇಕು ಎಂದು ಒತ್ತಾಯಿಸಿದರು..
ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ನೂತನವಾಗಿ ಆಯ್ಕೆಯಾದವರ ಪಟ್ಟಿ
ಅಧ್ಯಕ್ಷ- ತಳವಾರ ನಾಗರಾಜು
ಉಪಾಧ್ಯಕ್ಷ- ಟಿ.ಡಿ ಮುನಿಯಪ್ಪ
ಕಾರ್ಯದರ್ಶಿ- ತೂಬಗೆರೆ ವೆಂಕಟೇಶ್
ಖಜಾಂಚಿ – ಲಕ್ಕಪ್ಪ
ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ನೂತನವಾಗಿ ಆಯ್ಕೆಯಾದವರಿಗೆ ಹೂಮಾಲೆ, ಸಿಹಿ ತಿನಿಸುವ ಮೂಲಕ ಶುಭಕೋರಲಾಯಿತು..
ಈ ವೇಳೆ ಕರ್ನಾಟಕ ಮಾದಾರ ಮಹಾಸಭಾ ಜಿಲ್ಲಾ ಕಾರ್ಯದರ್ಶಿ ಬಚ್ಚಹಳ್ಳಿ ನಾಗರಾಜ್, ರಾಜ್ಯ ಸಮಿತಿ ಸದಸ್ಯ ರಾಮಕೃಷ್ಣ, ತಾಲೂಕು ಉಪಾಧ್ಯಕ್ಷ ಟಿ.ಡಿ ಮುನಿಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…