ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಮಾದಿಗ ಸಮುದಾಯ ಇನ್ನೂ ಹಿಂದುಳಿದಿದೆ. ಸಮುದಾಯ ಎಲ್ಲಾ ರಂಗದಲ್ಲಿ ಮುಂದೆ ಬರಲು ನಾವೆಲ್ಲರೂ ಶಿಕ್ಷಣ ಪಡೆದು, ಸಂಘಟಿತರಾಗಿ, ಹೋರಾಟ ಮಾಡಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಬೇಕಾಗಿದೆ ಎಂದು ಮಾದರ ಮಹಾಸಭಾ ಜಿಲ್ಲಾಧ್ಯಕ್ಷ ಸುಬ್ಬರಾಜು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ಜಿಲ್ಲಾಧ್ಯಕ್ಷ ಸುಬ್ಬರಾಜು ನೇತೃತ್ವದಲ್ಲಿ ನೂತನವಾಗಿ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳನ್ನು ನೇಮಕ ಮಾಡಿ ಮಾತನಾಡಿದ ಅವರು, ಪಕ್ಷಾತೀತವಾಗಿ ಮಾದರ ಮಹಾಸಭಾ ಸ್ಥಾಪನೆ ಮಾಡಲಾಗಿದೆ. ಮಾದಿಗ ಸಮುದಾಯ ಏಳಿಗೆಗಾಗಿ ಮಾದರ ಮಹಾಸಭಾ ಸಾಕಷ್ಟು ಕೆಲಸ ಮಾಡುತ್ತಿದೆ ಎಂದರು.

ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ನೂತನವಾಗಿ ಆಯ್ಕೆಯಾದವರು ಹೆಚ್ಚೆಚ್ಚು ಸದಸ್ಯತ್ವ ನೋಂದಣಿ ಮಾಡಿಸಬೇಕು.‌ ರಾಜ್ಯದಲ್ಲಿ ಶೋಷಿತ ಸಮುದಾಯಗಳಲ್ಲಿ‌ ಮಾದಿಗ ಸಮುದಾಯವೂ ಒಂದು. ಉದ್ಯೋಗ, ಶೈಕ್ಷಣಿಕ, ಆರ್ಥಿಕ ರಾಜಕೀಯವಾಗಿ ಅಭಿವೃದ್ಧಿ ಹೊಂದಲು ನಾವೆಲ್ಲರೂ ಸಂಘಟಿತರಾಗಬೇಕು. ಜನಾಂಗ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ.

ತಾಲ್ಲೂಕು ನೂತನ ಅಧ್ಯಕ್ಷ ತಳವಾರ ನಾಗರಾಜು ಮಾತನಾಡಿ, ನನಗೆ ತಾಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಸಂತಸ ತಂದಿದೆ. ಸದಸ್ಯತ್ವ ನೋಂದಣಿಗೆ ಶ್ರಮಿಸುತ್ತೇನೆ. ಮಾದರ ಮಹಾಸಭಾ ತತ್ವಾದರ್ಶಗಳಿಗೆ ಬದ್ಧನಾಗಿರುತ್ತೇನೆ ಎಂದರು.

ಮುಂದಿನ ದಿನಗಳಲ್ಲಿ ರಾಜಕೀಯ, ಉದ್ಯೋಗ ಹಾಗೂ ಎಲ್ಲಾ ರಂಗಗಳಲ್ಲಿ ಮೀಸಲಾತಿ ಸಿಗಬೇಕು. ಮಾದಿಗ ಸಮುದಾಯ ಶೋಷಿತರಲ್ಲಿ ಶೋಷಿತರು.‌ ಈಗಿರುವ ಒಳ ಮೀಸಲಾತಿ ಸಾಕಾಗಲ್ಲ, ಇನ್ನೂ ಹೆಚ್ಚಿಗೆ ಮಾಡಬೇಕು ಎಂದು ಒತ್ತಾಯಿಸಿದರು..

ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ನೂತನವಾಗಿ ಆಯ್ಕೆಯಾದವರ ಪಟ್ಟಿ

ಅಧ್ಯಕ್ಷ- ತಳವಾರ ನಾಗರಾಜು

ಉಪಾಧ್ಯಕ್ಷ- ಟಿ.ಡಿ ಮುನಿಯಪ್ಪ

ಕಾರ್ಯದರ್ಶಿ- ತೂಬಗೆರೆ ವೆಂಕಟೇಶ್

ಖಜಾಂಚಿ – ಲಕ್ಕಪ್ಪ

ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ನೂತನವಾಗಿ ಆಯ್ಕೆಯಾದವರಿಗೆ ಹೂಮಾಲೆ, ಸಿಹಿ ತಿನಿಸುವ ಮೂಲಕ ಶುಭಕೋರಲಾಯಿತು..

ಈ ವೇಳೆ ಕರ್ನಾಟಕ ಮಾದಾರ ಮಹಾಸಭಾ ಜಿಲ್ಲಾ ಕಾರ್ಯದರ್ಶಿ ಬಚ್ಚಹಳ್ಳಿ ನಾಗರಾಜ್, ರಾಜ್ಯ ಸಮಿತಿ ಸದಸ್ಯ ರಾಮಕೃಷ್ಣ, ತಾಲೂಕು ಉಪಾಧ್ಯಕ್ಷ ಟಿ.ಡಿ ಮುನಿಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

10 minutes ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

49 minutes ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

5 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

6 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

11 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

13 hours ago