ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಮಾದಿಗ ಸಮುದಾಯ ಇನ್ನೂ ಹಿಂದುಳಿದಿದೆ. ಸಮುದಾಯ ಎಲ್ಲಾ ರಂಗದಲ್ಲಿ ಮುಂದೆ ಬರಲು ನಾವೆಲ್ಲರೂ ಶಿಕ್ಷಣ ಪಡೆದು, ಸಂಘಟಿತರಾಗಿ, ಹೋರಾಟ ಮಾಡಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಬೇಕಾಗಿದೆ ಎಂದು ಮಾದರ ಮಹಾಸಭಾ ಜಿಲ್ಲಾಧ್ಯಕ್ಷ ಸುಬ್ಬರಾಜು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ಜಿಲ್ಲಾಧ್ಯಕ್ಷ ಸುಬ್ಬರಾಜು ನೇತೃತ್ವದಲ್ಲಿ ನೂತನವಾಗಿ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳನ್ನು ನೇಮಕ ಮಾಡಿ ಮಾತನಾಡಿದ ಅವರು, ಪಕ್ಷಾತೀತವಾಗಿ ಮಾದರ ಮಹಾಸಭಾ ಸ್ಥಾಪನೆ ಮಾಡಲಾಗಿದೆ. ಮಾದಿಗ ಸಮುದಾಯ ಏಳಿಗೆಗಾಗಿ ಮಾದರ ಮಹಾಸಭಾ ಸಾಕಷ್ಟು ಕೆಲಸ ಮಾಡುತ್ತಿದೆ ಎಂದರು.

ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ನೂತನವಾಗಿ ಆಯ್ಕೆಯಾದವರು ಹೆಚ್ಚೆಚ್ಚು ಸದಸ್ಯತ್ವ ನೋಂದಣಿ ಮಾಡಿಸಬೇಕು.‌ ರಾಜ್ಯದಲ್ಲಿ ಶೋಷಿತ ಸಮುದಾಯಗಳಲ್ಲಿ‌ ಮಾದಿಗ ಸಮುದಾಯವೂ ಒಂದು. ಉದ್ಯೋಗ, ಶೈಕ್ಷಣಿಕ, ಆರ್ಥಿಕ ರಾಜಕೀಯವಾಗಿ ಅಭಿವೃದ್ಧಿ ಹೊಂದಲು ನಾವೆಲ್ಲರೂ ಸಂಘಟಿತರಾಗಬೇಕು. ಜನಾಂಗ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ.

ತಾಲ್ಲೂಕು ನೂತನ ಅಧ್ಯಕ್ಷ ತಳವಾರ ನಾಗರಾಜು ಮಾತನಾಡಿ, ನನಗೆ ತಾಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಸಂತಸ ತಂದಿದೆ. ಸದಸ್ಯತ್ವ ನೋಂದಣಿಗೆ ಶ್ರಮಿಸುತ್ತೇನೆ. ಮಾದರ ಮಹಾಸಭಾ ತತ್ವಾದರ್ಶಗಳಿಗೆ ಬದ್ಧನಾಗಿರುತ್ತೇನೆ ಎಂದರು.

ಮುಂದಿನ ದಿನಗಳಲ್ಲಿ ರಾಜಕೀಯ, ಉದ್ಯೋಗ ಹಾಗೂ ಎಲ್ಲಾ ರಂಗಗಳಲ್ಲಿ ಮೀಸಲಾತಿ ಸಿಗಬೇಕು. ಮಾದಿಗ ಸಮುದಾಯ ಶೋಷಿತರಲ್ಲಿ ಶೋಷಿತರು.‌ ಈಗಿರುವ ಒಳ ಮೀಸಲಾತಿ ಸಾಕಾಗಲ್ಲ, ಇನ್ನೂ ಹೆಚ್ಚಿಗೆ ಮಾಡಬೇಕು ಎಂದು ಒತ್ತಾಯಿಸಿದರು..

ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಕಾರ್ಯಕಾರಿ ಸಮಿತಿಗೆ ನೂತನವಾಗಿ ಆಯ್ಕೆಯಾದವರ ಪಟ್ಟಿ

ಅಧ್ಯಕ್ಷ- ತಳವಾರ ನಾಗರಾಜು

ಉಪಾಧ್ಯಕ್ಷ- ಟಿ.ಡಿ ಮುನಿಯಪ್ಪ

ಕಾರ್ಯದರ್ಶಿ- ತೂಬಗೆರೆ ವೆಂಕಟೇಶ್

ಖಜಾಂಚಿ – ಲಕ್ಕಪ್ಪ

ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ನೂತನವಾಗಿ ಆಯ್ಕೆಯಾದವರಿಗೆ ಹೂಮಾಲೆ, ಸಿಹಿ ತಿನಿಸುವ ಮೂಲಕ ಶುಭಕೋರಲಾಯಿತು..

ಈ ವೇಳೆ ಕರ್ನಾಟಕ ಮಾದಾರ ಮಹಾಸಭಾ ಜಿಲ್ಲಾ ಕಾರ್ಯದರ್ಶಿ ಬಚ್ಚಹಳ್ಳಿ ನಾಗರಾಜ್, ರಾಜ್ಯ ಸಮಿತಿ ಸದಸ್ಯ ರಾಮಕೃಷ್ಣ, ತಾಲೂಕು ಉಪಾಧ್ಯಕ್ಷ ಟಿ.ಡಿ ಮುನಿಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

10 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

15 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago