ಮಾದಿಗ ಸಮುದಾಯಕ್ಕೆ ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲು ಕ್ರಮ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್. ಮುನಿಯಪ್ಪ ಇಂದು ದಾವಣಗೆರೆಯ ಪರಿವೀಕ್ಷಣಾ ಮಂದಿರದಲ್ಲಿ ಜಿಲ್ಲಾ ಮಟ್ಟದ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು.

ಜಿಲ್ಲೆಯಲ್ಲಿ ಒಟ್ಟು 4 ಲಕ್ಷ ಪಡಿತರ ಕಾರ್ಡ್ ಗಳಿದ್ದು, ಸುಮಾರು 15 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಪಡಿತರ ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ 729 ನ್ಯಾಯಬೆಲೆ ಅಂಗಡಿಗಳನ್ನು ಹೊಂದಿದ್ದು, ಒಳ ಮೀಸಲಾತಿ ಅಡಿಯಲ್ಲಿ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯಕ್ಕೆ ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು.

ಅಕ್ರಮವಾಗಿ ಹೊಂದಿರುವ ಅನರ್ಹ ಪಡಿತರ ಕಾರ್ಡುಗಳನ್ನು ಪತ್ತೆ ಹಚ್ಚುವುದರೊಂದಿಗೆ

ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಪಡಿತರ ಕಾರ್ಡ್ ವಿತರಿಸಲು ಕ್ರಮ ವಹಿಸುತ್ತಿದ್ದು ತಾವು ಅರ್ಹರನ್ನು ಗುರುತಿಸಲು ಸೂಚನೆ ನೀಡಿದರು.

ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ತೂಕ ಮತ್ತು ಅಳತೆಯ ಗುಣಮಟ್ಟವನ್ನು ಕಾಪಾಡುವ ಕಡೆ ಗಮನವಹಿಸಿ ಪೆಟ್ರೋಲ್ ಬಂಕ್ ಗಳಲ್ಲಿ  ನಾಗರಿಕರಿಗೆ ಯಾವುದೇ ಮೋಸವಾಗದಾಗೆ ನಿಗಾವಹಿಸಬೇಕು. ಹಾಗೆಯೇ ಅಂಗಡಿಗಳಲ್ಲಿ ತೂಕದ ಮೆಷಿನ್ ಗಳನ್ನು ತಪಾಸಣೆ ಮಾಡಿ ಸತ್ಯಾಪಣ ಮತ್ತು ಮುದ್ರೆಯ ಮಾಡಿ ಪ್ರಮಾಣಪತ್ರ ವಿತರಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಜಂಟಿ ಉಪ ನಿರ್ದೇಶಕರಾದ ಮಧು ಸೂದನ್ ಹಾಗೂ ಕಾನೂನು ಮಾಪನ ಇಲಾಖೆಯ ಸಹಾಯಕ ನಿಯಂತ್ರಕ ವೆಂಕಟೇಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…

49 minutes ago

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಚಾಲಕ

ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…

57 minutes ago

ನೀಟ್ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ ಕೇಂದ್ರ ಸರ್ಕಾರ- ಟಿ. ವೆಂಕಟರಮಣಯ್ಯ ಆರೋಪ

ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…

3 hours ago

ಅತಿ ಶೀಘ್ರದಲ್ಲಿ ಸಿಎಂ ಡಿಕೆಶಿ ಘಾಟಿಗೆ ಭೇಟಿ- ಆರ್.ವಿ ಮಹೇಶ್ ಕುಮಾರ್

ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…

3 hours ago

ಕೆಂಪೇಗೌಡರ ಪುತ್ಥಳಿ ಭೂಮಿಪೂಜೆ ಗೊಂದಲ ವಿಚಾರ: ಕಾನೂನುಬದ್ಧವಾಗಿಯೇ ಕಾರ್ಯ ನಡೆದಿದ್ದು, ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣ – ಬಾಶೆಟ್ಟಿಹಳ್ಳಿ ಪಪಂ ಅಧ್ಯಕ್ಷ ಪ್ರೇಮ್ ಕುಮಾರ್ ಸ್ಪಷ್ಟನೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬ್ಯಾಂಕ್ ಸರ್ಕಲ್‌ನಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪನೆಗೆ ನಡೆದ ಭೂಮಿಪೂಜೆ ಕುರಿತು ಉಂಟಾಗಿದ್ದ…

4 hours ago

ಬ್ಯಾಟರಿ ಸ್ಪಾರ್ಕ್: ಧಗಧಗ ಹೊತ್ತಿ ಉರಿದ ಟಾಟಾ ಸುಮೋ – ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ದೊಡ್ಡಬಳ್ಳಾಪುರ: ಬ್ಯಾಟರಿಯಲ್ಲಿ ಸ್ಪಾರ್ಕ್ ಕಾಣಿಸಿಕೊಂಡ ಪರಿಣಾಮ ಟಾಟಾ ಸುಮೋ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಬೆಂಗಳೂರು ಗ್ರಾಮಾಂತರ…

6 hours ago